AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯ, ವಿಷಗಾಳಿ ಸೇವಿಸಿ ಇಬ್ಬರು ಪೌರ ಕಾರ್ಮಿಕ ಸಾವು

ಚರಂಡಿ ಸ್ವಚ್ಛಗೊಳಿಸುವಾಗ ವಿಷಗಾಳಿ ಸೇವಿಸಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಬಸವನಕೋಟೆ ಗ್ರಾಮದಲ್ಲಿ ನಡೆದಿದೆ.

ದಾವಣಗೆರೆ: ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯ, ವಿಷಗಾಳಿ ಸೇವಿಸಿ ಇಬ್ಬರು ಪೌರ ಕಾರ್ಮಿಕ ಸಾವು
ಮೃತ ರ್ದುದೈವಿಗಳು
Follow us
ಕಿರಣ್ ಹನುಮಂತ್​ ಮಾದಾರ್
|

Updated on:Mar 21, 2023 | 6:53 AM

ದಾವಣಗೆರೆ: ಚರಂಡಿ ಸ್ವಚ್ಛಗೊಳಿಸುವಾಗ ವಿಷಗಾಳಿ ಸೇವಿಸಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಬಸವನಕೋಟೆ ಗ್ರಾಮದಲ್ಲಿ ನಡೆದಿದೆ. ಪೌರ ಕಾರ್ಮಿಕರಾದ ದುಂಡಪ್ಪ(45), ನಾಗಪ್ಪ(42) ಮೃತ ರ್ದುದೈವಿಗಳು. ಯುಗಾದಿ ಹಬ್ಬದ ಹಿನ್ನೆಲೆ ಬಸವನಕೋಟೆ ಗ್ರಾಮ ಪಂಚಾಯತಿ ಪಿಡಿಒ ಶಶಿಧರ್‌ ಪಾಟೀಲ್ ಎಂಬುವವರು ಚರಂಡಿ ಸ್ವಚ್ಛಗೊಳಿಸಲು ಆದೇಶ ನೀಡಿದ್ದರು. ಇದರಿಂದ ಬಹುದಿನಗಳಿಂದ ತುಂಬಿ ತುಳುಕುತ್ತಿದ್ದ ಚರಂಡಿಯ ಸ್ವಚ್ಚತೆಗೆ ಯಾವುದೇ ಮುಂಜಾಗ್ರತಾ ಕ್ರಮಗಳಿಲ್ಲದೆ ಸತ್ಯಪ್ಪ ಮತ್ತು ಮೈಲಪ್ಪ ಮುಂದಾಗಿದ್ದರು. ಹೀಗೆ ಚರಂಡಿ ಸ್ವಚ್ಚಗೊಳಿಸುವಾಗ ವಿಷ ಗಾಳಿ ಸೇವಿಸಿ ಅಸ್ವಸ್ಥರಾದ ಕಾರ್ಮಿಕರನ್ನ ಹತ್ತಿರದ ಅರಸೀಕೆರೆ ಸರ್ಕಾರಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಿ ಬಳಿಕ ಸ್ಥಿತಿ ಗಂಭೀರವಾದ ಹಿನ್ನೆಲೆ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿ ಆಗದೇ ಇಬ್ಬರು‌ ಪೌರಕಾರ್ಮಿಕರು ಸಾವನ್ನಪ್ಪಿದ್ದಾರೆ.

ಅನಾಥವಾದ ಎರಡು ಕುಟುಂಬಗಳು

ಇದೀಗ ಕುಟುಂಬಕ್ಕೆ ಆಧಾರವಾಗಿದ್ದವರನ್ನ ಕಳೆದುಕೊಂಡು ಮನೆಯವರು ಆಘಾತಕ್ಕೀಡಾಗಿದ್ದಾರೆ. ಅಧಿಕಾರಿಗಳ ದರ್ಪಕ್ಕೆ ಅಮಾಯಕ ಎರಡು ಜೀವ ಬಲಿಯಾಗಿದೆ. ಬಹಳ ದಿನಗಳಿಂದ ಚರಂಡಿಯಲ್ಲಿ ಸರಾಗವಾಗಿ ನೀರು ಮುಂದೆ ಹರಿದುಹೋಗದ ಕಾರಣ ಅಪಾರ ಪ್ರಮಾಣದ ತ್ಯಾಜ್ಯ ಕಟ್ಟಿಕೊಂಡು ಕೊಳೆತಿದ್ದು, ವಿಷಕಾರಿ ರಾಸಾಯನಿಕ ಉತ್ಪತ್ತಿಯಾಗಿದೆ. ತೆರೆದ ಚರಂಡಿಯಲ್ಲಿ ಇಳಿದಿದ್ದ ಕಾರ್ಮಿಕರು ತಾಸುಗಟ್ಟಲೆ ಬಗ್ಗಿ ತ್ಯಾಜ್ಯ ಹೊರ ತೆಗೆಯುವ ಸಮಯದಲ್ಲಿ ವಿಷ ಗಾಳಿ ಸೇವಿಸಿ ಇಬ್ಬರೂ ಅಸ್ವಸ್ಥರಾಗಿದ್ದಾರೆ. ಪಂಚಾಯಿತಿ ಪಿಡಿಒ ಹಾಗು ಸಿಬ್ಬಂದಿ ಚರಂಡಿ ಸ್ವಚ್ಛತಾ ಸಮಯದಲ್ಲಿ ಕೂಲಿಕಾರರ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ. ಕೈಗವಸು ಮತ್ತು ಮುಖ ಗವಸು ನೀಡದೆ ಏಕಾಏಕಿ ಚರಂಡಿಗೆ ಇಳಿಸಿದ್ದು, ಪಿಡಿಓ ಶಶಿಧರ್ ಪಾಟೀಲ್ ಅವರ ನಿರ್ಲಕ್ಷ್ಯದ ಕಾರಣ ಇಬ್ಬರ ಸಾವಿಗೆ ಕಾರಣವಾಗಿದೆ. ಅಧಿಕಾರಿಗಳು ತಮ್ಮ ತಪ್ಪನ್ನು ಮರೆಮಾಚುವ ಸಲುವಾಗಿ ಪ್ರಕರಣವನ್ನು ತಿರುಚುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ:ಎದುರಾಳಿಗೆ ಹೃದಯಾಘಾತ ಆಗಲಿ: ಮಾಜಿ ಶಾಸಕರ ಸಾವು ಬಯಸಿದರಾ ಜೆಡಿಎಸ್ ಮುಖಂಡ?

ಇನ್ನು ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ತಾಲ್ಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಸ್ಪಷ್ಟಪಡಿಸಿದ್ದಾರೆ. ಚರಂಡಿ ಸ್ವಚ್ಛತೆ ಸಮಯದಲ್ಲಿ ಅಸ್ವಸ್ಥರಾಗಿದ್ದ ಸತ್ಯಪ್ಪ ಮತ್ತು ಮೈಲಪ್ಪ ಎಂಬುವವರು ದಾವಣಗೆರೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಈ ಬಗ್ಗೆ ಇನ್ನೂ ದೂರು ದಾಖಲಾಗಿಲ್ಲ. ಗ್ರಾಮ ಪಂಚಾಯಿತಿಗೆ ಸೇರಿದ ಚರಂಡಿ ಕಾರ್ಯದಲ್ಲಿ ಮೃತರು ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:48 am, Tue, 21 March 23

ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?