AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಚನ್ನಗಿರಿ ಠಾಣೆ ಮೇಲೆ ಕಲ್ಲು ತೂರಾಟ, 11 ಪೊಲೀಸರಿಗೆ ಗಾಯ, 10ಕ್ಕೂ ಹೆಚ್ಚು ವಾಹನ ಜಖಂ

ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಪೊಲೀಸ್​ ಠಾಣೆ ವ್ಯಾಪ್ತಿಯ ಟಿಪ್ಪು ನಗರ ನಿವಾಸಿಯಾಗಿದ್ದ ಅದೀಲ್ (30) ಒಸಿ(ಮಟ್ಕಾ) ಆಡಿಸುತ್ತಿದ್ದ ಎಂದು ಶುಕ್ರವಾರ ಪೊಲೀಸರು ಠಾಣೆಗೆ ಕರೆ ತಂದಿದ್ದರು. ಪೊಲೀಸರು ಠಾಣೆಗೆ ಕರೆ ತರುತ್ತಿದ್ದಂತೆ, ಆದಿಲ್​​ ಬಿಪಿ ಲೋ ಆಗಿ ಕುಸಿದು ಬಿದ್ದಿದ್ದಾನೆ. ಕೂಡಲೆ ಆತನನ್ನು ಆಸ್ಪತ್ರೆಗೆ ದಾಖಲಾಗಿಸಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಇದರಿಂದ ಆಕ್ರೋಶಗೊಂಡ ಮೃತ ಕುಟುಂಬಸ್ಥರು ಪೊಲೀಸ್​ ಠಾಣೆ ಮೇಲೆ ದಾಳಿ ಮಾಡಿದ್ದಾರೆ.

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: ವಿವೇಕ ಬಿರಾದಾರ|

Updated on:May 25, 2024 | 9:10 AM

Share

ದಾವಣಗೆರೆ, ಮೇ 25: ಲಾಕಪ್‌ಡೆತ್‌ (LockupDeath) ​​ಅಂತ ಆರೋಪಿಸಿ ಮೃತನ ಸಂಬಂಧಿಕರು ಚನ್ನಗಿರಿ ಪೊಲೀಸ್​ ಠಾಣೆ (Channagiri Police Station) ಮೇಲೆ ಶುಕ್ರವಾರ ರಾತ್ರಿ ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ 11 ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 10ಕ್ಕೂ ಹೆಚ್ಚು ಪೊಲೀಸ್ ವ್ಯಾನ್​ಗಳು ಜಖಂ‌ಗೊಂಡಿವೆ.

ಪ್ರಕರಣ ಸಂಬಂಧ ದಾವಣಗೆರೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ಉಮಾ ಪ್ರಶಾಂತ ಮಾತನಾಡಿ, ಮೃತ ಆದಿಲ್​ನನ್ನು​ ಶುಕ್ರವಾರ ಪೊಲೀಸರು ಠಾಣೆಗೆ ಕರೆತಂದರು. ಬಳಿಕ ಆದಿಲ್​ ಠಾಣೆಯಲ್ಲಿ ಕುಸಿದು ಬೀಳುತ್ತಾರೆ. ಕೂಡಲೆ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಆದಿಲ್​ ಪೊಲೀಸ್ ಠಾಣೆಯಲ್ಲಿ 6-7 ನಿಮಿಷ ಕೂಡ ಇಲ್ಲ ಎಂದು ಹೇಳಿದರು.

ಆದರೂ ಕೂಡ ಮೃತನ ಸಂಬಂಧಿಕರು ಲಾಕಪ್‌ಡೆತ್‌ ಎಂದು ಹೇಳುತ್ತಿದ್ದಾರೆ. ನಮ್ಮಲ್ಲಿ ‌ಕೂಡ ಸಿಸಿ‌ಕ್ಯಾಮರಾ ಇದೆ. ಎಲ್ಲ ಪರಿಶೀಲನೆ ಮಾಡಲಾಗುತ್ತಿದೆ.‌ ಪ್ರಮಾಣಿಕ ತನಿಖೆ ಮಾಡುತ್ತೇವೆ. ಮೃತರ ತಂದೆ ದೂರು ಕೊಟ್ಟಿದ್ದಾರೆ. ತನಿಖೆ ಆಗುತ್ತದೆ.‌ ಈಗಾಗಲೇ ಶವನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.‌ ಗಂಭೀರ ಪ್ರಕರಣ ಆದ ಹಿನ್ನೆಲೆ ನ್ಯಾಯಾಧೀಶರ ಸಮ್ಮುಖದಲ್ಲಿ ತನಿಖೆ ಮಾಡಲಾಗುವುದು. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ಕು‌ ಪ್ರಕರಣ ದಾಖಲಾಗಿವೆ. ಕಲ್ಲು ತೂರಾಟದಲ್ಲಿ 7 ಪೊಲೀಸ್ ವಾಹನ ಹಾಗೂ 11 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ‌ ನಿಯಂತ್ರಣದಲ್ಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಕೆಲಸ ಕೊಡಿಸುವುದಾಗಿ ಹೇಳಿ ಮಹಿಳೆ ಮಾರಾಟ ಆರೋಪ, ಮೂವರ ವಿರುದ್ಧ FIR

ಏನಿದು ಪ್ರಕರಣ

ಒಸಿ (ಮಟ್ಕಾ) ಆಡಿಸುತ್ತಿದ್ದ ಹಿನ್ನಲೆ ಚನ್ನಗಿರಿ ಪಟ್ಟಣದ ಟಿಪ್ಪು ನಗರ ನಿವಾಸಿಯಾಗಿದ್ದ ಆದಿಲ್ (30) ಎನ್ನುವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು, ಸಂಜೆ ಪೊಲೀಸ್ ಠಾಣೆಗೆ ಕರೆತಂದಿದ್ದರು. ಇದ್ದಕ್ಕಿದ್ದಂತೆ ಬಿಪಿ ಲೋ ಆಗಿ ಬಿದ್ದ ಆದಿಲ್‌ ಠಾಣೆಯಲ್ಲಿ ಕುಸಿದು ಬಿದ್ದಿದ್ದಾನೆ. ಕೂಡಲೆ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ಸಾವನ್ನಪ್ಪಿದ್ದಾನೆ. ಆದಿಲ್‌ ಸಾವಿಗೆ ಪೊಲೀಸರೇ ಕಾರಣ ಎಂದು ಸಂಬಂಧಿಕರು ಆಕ್ರೋಶಗೊಂಡು ಪೊಲೀಸ್​ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:37 am, Sat, 25 May 24

Follow Us
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ