ಕೆಆರ್​ಐಡಿಎಲ್​ನಿಂದ ಬಿಲ್​ ಬಾಕಿ: ಗುತ್ತಿಗೆದಾರ ನೇಣಿಗೆ ಶರಣು

ವಾಲ್ಮೀಕಿ ಅಭಿವೃದ್ಧಿ ನಿಗಮ ಅಧೀಕ್ಷಕ ಚಂದ್ರಶೇಖರ್​ ಆತ್ಮಹತ್ಯೆ ಪ್ರಕರಣ ಮಾಸುವ ಮುನ್ನವೇ, ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗುತ್ತಿಗೆದಾರ ಪಿ. ಎಸ್​ ಗೌಡರ್​ ಕೆಆರ್​ಐಡಿಎಲ್​ ಅಧಿಕಾರಿಗಳ ವರ್ತನೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಆರ್​ಐಡಿಎಲ್​ನಿಂದ ಬಿಲ್​ ಬಾಕಿ: ಗುತ್ತಿಗೆದಾರ ನೇಣಿಗೆ ಶರಣು
ಗುತ್ತಿಗೆದಾರ ಪಿ. ಎಸ್​ ಗೌಡರ್
Follow us
| Updated By: ವಿವೇಕ ಬಿರಾದಾರ

Updated on:May 31, 2024 | 1:45 PM

ದಾವಣಗೆರೆ, ಮೇ 31: ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (KRIDL)ನಿಂದ 2023-24ನೇ ಸಾಲಿನ ಬಾಕಿ ಬಿಲ್​ ಪಾವತಿಯಾಗದ ಹಿನ್ನೆಲೆಯಲ್ಲಿ ಮನನೊಂದ ಸಂತೇಬೆನ್ನೂರಿನ ಗುತ್ತಿಗೆದಾರ (Contractor) ಪಿ.ಎಸ್ ಗೌಡರ್ (48) ಡೆತ್​ನೋಟ್​ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುತ್ತಿಗೆದಾರ ಪಿ.ಎಸ್ ಗೌಡರ್ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ವಾಸಿಸುತ್ತಿದ್ದರು. ಸಂತೇಬೆನ್ನೂರಿನ (Santebennur) ಕೃಷಿ ಇಲಾಖೆ ಆವರಣದಲ್ಲಿ 2023-24ರಲ್ಲಿ ನಡೆದ ಕಾಮಗಾರಿಗೆ ಸಂಬಂಧಿಸಿದ ಹಣ ಬಿಡುಗಡೆ ಮಾಡದೆ ಕೆಆರ್​ಡಿಎಲ್ ಅಧಿಕಾರಿಗಳು ಸತಾಯಿಸುತ್ತಿದ್ದರು. ಅಲ್ಲದೆ ಇವರ ಇಬ್ಬರು ಸಹೋದರರು ಹಣಕಾಸು ವಿಚಾರವಾಗಿ ಮೋಸಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಧಿಕಾರಿಗಳ ಧೋರಣೆ ಮತ್ತು ಸಹೋದರರ ವರ್ತನೆಯಿಂದ ಬೇಸತ್ತು ತಮ್ಮ ಮನೆಯಲ್ಲಿ ಮೇ26 ರಂದು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಆರ್​ಐಡಿಎಲ್ ದೊಡ್ಡ ಮೊತ್ತದ ಪರಿಹಾರ ನೀಡಬೇಕೆಂದು ಡೆತ್​ನೋಟ್​ನಲ್ಲಿ ಬರೆದಿದ್ದಾರೆ.

ಪಿಎಸ್ ಗೌಡರ್ ಪತ್ನಿ ವಸಂತ ಕುಮಾರಿಯವರಿಂದ ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಸಂತೇಬೆನ್ನೂರಿನ ಪೊಲೀಸ್ ಠಾಣೆಯಲ್ಲಿ 306 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್​ ಪತನ: ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ

ಪ್ರಕರಣ ಸಂಬಂಧ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಮಾತನಾಡಿ, ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಸಹೋದರರಾದ ಶ್ರೀನಿವಾಸ ಹಾಗೂ ನಾಗರಾಜ್ ಅವರ ಬಗ್ಗೆ ಬರೆದಿದ್ದಾರೆ. ಜೊತೆಗೆ ಇವರು ಗುತ್ತಿಗೆದಾರ ಸಹ ಆಗಿದ್ದ ಇವರಿಗೆ ಹಣ ಬರಬೇಕಿತ್ತು. ಸಹೋದರ ತೊಂದರೆ ಹಾಗೂ ಬರಬೇಕಾದ ಒಟ್ಟು ಎಂಬತ್ತು ಲಕ್ಷ ಹಣ ಬರಬೇಕಿತ್ತು. ಈ ಎಲ್ಲ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದಾರೆ. ಇದೇ ಕಾರಣಕ್ಕೆ ಸಂಬಂಧಿಸಿ ಪಿಎಸ್ ಗೌಡರ ಸಹೋದರರಾದ ನಾಗರಾಜ್, ಶ್ರೀನಿವಾಸ ಹಾಗೂ ಕೆಆರ್​ಐಡಿಎಲ್ ಸೇರಿಸಿ ಸಂತೆ ಬೆನ್ನೂರ ಪೊಲೀಸ ಠಾಣೆಯಲ್ಲಿ ಐಪಿಸಿ ಕಲಂ 306 ಅನೈಯ ಕೇಸ್ ಬುಕ್ ಮಾಡಲಾಗಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:06 pm, Fri, 31 May 24

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್