AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಒಂದೇ ಕುಟುಂಬದ ಮೂವರು ನಾಪತ್ತೆ

ದಾವಣಗೆರೆಯ ವಿನೋಬ ನಗರದಲ್ಲಿ ನೆಲೆಸಿದ್ದ ಕುಟುಂಬ ನಾಪತ್ತೆಯಾಗಿದೆ. ಏಪ್ರಿಲ್​ 12ರಿಂದ ಮನೆಯಿಂದ ಹೊರಹೋದವರು ಮನೆಗೆ ವಾಪಸ್​​ ಬಂದಿಲ್ಲ. ದಾವಣಗೆರೆ ನಗರದ ಬಡಾವಣೆ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದಾವಣಗೆರೆ: ಒಂದೇ ಕುಟುಂಬದ ಮೂವರು ನಾಪತ್ತೆ
ನಾಪತ್ತೆಯಾದ ಅಂಜನ್ ಬಾಬು, ನಾಗವೇಣಿ, ಮಗು ನಕ್ಷತ್ರ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:May 21, 2024 | 10:16 AM

Share

ದಾವಣಗೆರೆ, ಮೇ 21: ದಾವಣಗೆರೆಯ (Davangere) ವಿನೋಬ ನಗರದಲ್ಲಿ ನೆಲೆಸಿದ್ದ ಕುಟುಂಬ ನಾಪತ್ತೆಯಾಗಿದೆ. ವಿನೋಬ ನಗರದ ನಿವಾಸಿಗಳಾದ ಪತಿ ಅಂಜನ್ ಬಾಬು (34), ಪತ್ನಿ ನಾಗವೇಣಿ (30) ಮತ್ತು 1 ವರ್ಷದ ಮಗು ನಕ್ಷತ್ರ ನಾಪತ್ತೆಯಾಗಿದ್ದಾರೆ. ಏಪ್ರಿಲ್​ 12ರಿಂದ ಮನೆಯಿಂದ ಹೊರಹೋದವರು ವಾಪಸ್​​ ಬಂದಿಲ್ಲ. ದಾವಣಗೆರೆ ನಗರದ ಬಡಾವಣೆ ಪೊಲೀಸ್​ (Police) ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪಘಾತ, ಇಬ್ಬರ ಸಾವು

ಯಾದಗಿರಿ: ಎರಡು ಬೈಕ್​ಗಳ ಮಧ್ಯೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ಘಟನೆ ನಡೆದಿದೆ. ಸೈದಾಪುರ ನಿವಾಸಿ ಮೌನೇಶ್ (24) ಹಾಗೂ ಕೊಂಡಾಪುರ ನಿವಾಸಿ ಅಶೋಕ್ (21) ಮೃತ ದುರ್ದೈವಿಗಳು. ಓರ್ವ ಸವಾರನಿಗೆ ಗಂಭೀರ ಗಾಯವಾಗಿದ್ದು, ರಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 26 ವರ್ಷಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಪಕ್ಕದ ಮನೆಯಲ್ಲಿ ಪತ್ತೆ

10ಕ್ಕೂ ಹೆಚ್ಚು ಮೇಕೆಗಳ ಕಳ್ಳತನ

ಬೆಳಗಾವಿ: ಗೋಕಾಕ್ ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ಮನೆ ಮುಂದೆ ಕಟ್ಟಿದ್ದ 10ಕ್ಕೂ ಹೆಚ್ಚು ಮೇಕೆಗಳನ್ನು ಕಳ್ಳತನ ಮಾಡಲಾಗಿದೆ. ಮೇಕೆಗಳು ಕಳ್ಳತನದಿಂದ ಬಡ ಕುಟುಂಬ ಕಂಗಾಲಾಗಿವೆ. ವಾಹನದಲ್ಲಿ ಬಂದು ಮೇಕೆಗಳನ್ನು ಕಳ್ಳತನ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸಿಡಿಲು ಬಡಿದು ಮಹಿಳೆ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ರೇಖಲಗೆರೆ ಗ್ರಾಮದಲ್ಲಿ ಸಿಡಿಲು ಬಡಿದು ಮಹಿಳೆ ಮೃತಪಟ್ಟಿದ್ದಾಳೆ. ಮಹಾರಾಷ್ಟ್ರ ಮೂಲದ ಕಾರ್ಮಿಕ ಮಹಿಳೆ ಲಕ್ಷ್ಮೀ (55) ಮೃತ ದುರ್ದೈವಿ. ಕಾರ್ಮಿಕ ಕುಟುಂಬ ರೇಖಲಗೆರೆಯ ಕೆರೆ ಅಂಗಳದಲ್ಲಿ ಬೀಡು ಬಿಟ್ಟಿದೆ. ಸೋಮವಾರ (ಮೇ 20) ತಡರಾತ್ರಿ ವೇಳೆ ಗುಡಿಸಲು ಬಳಿ ಸಿಡಿಲು ಬಡಿದಿದೆ. ಇದರಿಂದ ಲಕ್ಷ್ಮೀ ಮೃತಪಟ್ಟಿದ್ದಾಳೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:13 am, Tue, 21 May 24

ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!