AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಕಾಡುಗೊಲ್ಲರ ಆರಾಧ್ಯ ದೈವ ಬೊಮ್ಮಕಾಟಲಿಂಗೇಶ್ವರ ಅದ್ಧೂರಿ ಜಾತ್ರೆ, ಹರಕೆ ತೀರಿಸಿ ಸಂಭ್ರಮಿಸಿದ ಭಕ್ತರು

ಕಾಡುಗೊಲ್ಲರ ವೀರಗಾರ ಶ್ರೀ ಬೊಮ್ಮಕಾಂಟಲಿಂಗೇಶ್ವರ ಸ್ವಾಮಿಯ ಪೂಜೆಯಲ್ಲಿ ಈ ಬಾರಿ ಹಿಂದಿನ ವರ್ಷಕ್ಕಿಂತ ಎರಡು ಪಟ್ಟು ಹೆಚ್ಚಿನ ಜನರು ಭಾಗಿಯಾಗಿದ್ದರು. ಭಕ್ತರು ಸಮಾಧಿಗೆ ಆಗಮಿಸಿ ತಮ್ಮ ಇಷ್ಠರ್ಥಾಗಳನ್ನ ಇಡೇರಿಸಲು ಸ್ವಾಮಿಗೆ ಹರಕೆಯನ್ನ ತೀರಿಸಿದರು. ಇನ್ನು ಕಾಡುಗೊಲ್ಲರ ವೀರಗಾರ ಶ್ರೀ ಬೊಮ್ಮಕಾಂಟಲಿಂಗೇಶ್ವರ ಸ್ವಾಮಿಯ ಪವಾಡ ಪುರುಷರು.

ದಾವಣಗೆರೆ: ಕಾಡುಗೊಲ್ಲರ ಆರಾಧ್ಯ ದೈವ ಬೊಮ್ಮಕಾಟಲಿಂಗೇಶ್ವರ ಅದ್ಧೂರಿ ಜಾತ್ರೆ, ಹರಕೆ ತೀರಿಸಿ ಸಂಭ್ರಮಿಸಿದ ಭಕ್ತರು
ಕಾಡುಗೊಲ್ಲರ ಆರಾಧ್ಯ ದೈವ ಬೊಮ್ಮಕಾಟಲಿಂಗೇಶ್ವರ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Sep 14, 2023 | 10:18 AM

Share

ದಾವಣಗೆರೆ, ಸೆ.14: ಜಿಲ್ಲೆಯ ಜಗಳೂರು ತಾಲೂಕು ಕಲ್ಲೇದೇವರಪುರ ಗ್ರಾಮದ ಬಳಿ ಇರುವ ಕಾಡುಗೊಲ್ಲರ ವೀರಗಾರ ಶ್ರೀ ಬೊಮ್ಮಕಾಂಟಲಿಂಗೇಶ್ವರ ಸ್ವಾಮಿಯ ಪೂಜೆ ತುಂಬ ಅದ್ದೂರಿಯಾಗಿ ಜರುಗಿತು. ದಾವಣಗೆರೆ, ಚಿತ್ರದುರ್ಗ ಭಾಗದ ಅನೇಕ ಗ್ರಾಮಗಳಿಂದ ಸಾವಿರಾರು ಸಂಖ್ಯೆಯ ಭಕ್ತರು ಎತ್ತಿನ ಗಾಡಿ ಕಟ್ಟಿಕೊಂಡು ಕುಟುಂಬ ಸಮೇತ ಆಗಮಿಸಿ ದೇವರಿಗೆ ಹರಕೆಯನ್ನು ತೀರಿಸುವ ಸಂಪ್ರದಾಯ ಅನಾಧಿಕಾಲದಿಂದಲೂ ರೂಢಿಯಲ್ಲಿದೆ. ಪ್ರತಿ ವರ್ಷದ ಶ್ರಾವಣ ಮಾಸದ ಮುಕ್ತಾಯವಾದ ದಿನದಂದೆ ಅಣಬೂರು ಗೊಲ್ಲರಹಟ್ಟಿಯಿಂದ ನಡೆ ಮುಡಿ ಕಟ್ಟಿಕೊಂಡು ಅಣಬೂರು ಗ್ರಾಮದ ಪೂಜಾರಿಗಳು ಬೊಮ್ಮಗಟ್ಟೆ ಸಮಾಧಿಗೆ ಬಂದು ಪೂಜೆ ಸಲ್ಲಿಸುವುದು ಇಲ್ಲಿನ ಸಂಪ್ರದಾಯ.

ಕಿಕ್ಕರಿದು ಸೇರಿದ ಜನಸಾಗರ

ಕಾಡುಗೊಲ್ಲರ ವೀರಗಾರ ಶ್ರೀ ಬೊಮ್ಮಕಾಂಟಲಿಂಗೇಶ್ವರ ಸ್ವಾಮಿಯ ಪೂಜೆಯಲ್ಲಿ ಈ ಬಾರಿ ಹಿಂದಿನ ವರ್ಷಕ್ಕಿಂತ ಎರಡು ಪಟ್ಟು ಹೆಚ್ಚಿನ ಜನರು ಭಾಗಿಯಾಗಿದ್ದರು. ಭಕ್ತರು ಸಮಾಧಿಗೆ ಆಗಮಿಸಿ ತಮ್ಮ ಇಷ್ಠರ್ಥಾಗಳನ್ನ ಇಡೇರಿಸಲು ಸ್ವಾಮಿಗೆ ಹರಕೆಯನ್ನ ತೀರಿಸಿದರು. ಇನ್ನು ಕಾಡುಗೊಲ್ಲರ ವೀರಗಾರ ಶ್ರೀ ಬೊಮ್ಮಕಾಂಟಲಿಂಗೇಶ್ವರ ಸ್ವಾಮಿಯ ಪವಾಡ ಪುರುಷರು. ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಮಾಡುವಾಗ ಈ ಸಮಾಧಿಯನ್ನ ಬೇರೆ ಕಡೆ ಸ್ಥಳಾಂತರ ಮಾಡಲು ಪ್ರಯತ್ನ ಪಟ್ಟರೂ ಅದು ಸಾಧ್ಯವಾಗಲಿಲ್ಲ. ಅಷ್ಟು ಪವಾಡ ಪುರುಷ ಎಂದು ಊರಿನ ಯಜಮಾನರಾದ ಎ.ಜಿ. ಈರಪ್ಪ ಸ್ವಾಮಿಗಳ ಪವಾಡದ ಬಗ್ಗೆ ತಿಳಿಸಿದರು.

Davangere news Kadugolla god Bommalingeshwara jatre celebration by devotees

ಕಾಡುಗೊಲ್ಲರ ಆರಾಧ್ಯ ದೈವ ಬೊಮ್ಮಕಾಟಲಿಂಗೇಶ್ವರ

ಇದನ್ನೂ ಓದಿ: Karnataka Breaking Kannada News Live: ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಕುಂದಗೋಳ ಬಂದ್​ಗೆ ಕರೆ

ಶ್ರೀ ಬೊಮ್ಮಕಾಂಟಲಿಂಗೇಶ್ವರ ಸ್ವಾಮಿಗಳು ಯಾರು?

ಅಣಬೂರು ಗ್ರಾಮದ ಒಬ್ಬ ವ್ಯಕ್ತಿ ಕುರಿಕಾಯಲು ಎಂದು ಕಲ್ಲೇದೇವರಪುರಕ್ಕೆ ಬಂದಾಗ ಅಕಾಲಿಕ ಮರಣ ಹೊಂದಿದರು. ಈ ಕಾಟಪ್ಪ ಎಂಬುವ ವ್ಯಕ್ತಿಯನ್ನ ಅಲ್ಲೆ ಸಮಾಧಿ ಮಾಡಲಾಗಿದೆ. ಇಂದು ನಮ್ಮ ಸಮುದಾಯದ ಈರಗಾರನನ್ನ ನಾವು ನಮ್ಮ ಆರಾಧೈ ದೈವವಾಗಿ ಪೂಜೆ ಮಾಡುತ್ತಿದ್ದೇವೆ. ಈ ಪೂಜೆಯನ್ನ ಮಾಡುವುದರಿಂದ ಸಕಲ ಪ್ರಾಣಿ ಪಕ್ಷಿಗಳಿಗೂ ಒಳಿತಾಗುತ್ತದೆ ಎಂದು ಅಣಬೂರು ಗ್ರಾಮದ ಹಿರಿಯ ಮುಖಂಡ ಹೂವಿನ ಕಾಟಪ್ಪ ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಗ್ರಾಮದ ಹಿರಿಯರಾದ ಗೌಡ್ರು ಅಜ್ಜಪ್ಪ, ಮರಿಗುಡ್ಡಪ್ಪ, ವಿರೇಶ್ ಮಹಾಲಿಂಗಪ್ಪ, ಸೊಸೈಟಿ ಮಂಜುನಾಥ, ಲಾಯರ್ ಸಣ್ಣಕಾಟಪ್ಪ, ಗ್ರಾಮ ಪಂಚಾಯತಿ ಸದಸ್ಯರಾದ ಚಿತ್ತಪ್ಪ, ದೊಡ್ಡ ಈರಪ್ಪ, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಜಿ ಗುಡ್ಡಪ್ಪ, ಯುವಕರಾದ ಪ್ರಶಾಂತ್ ಕುಮಾರ್ ಚೇತನ್, ಕಾಟಲಿಂಗಪ್ಪ ಹಾಗೂ ಸಾವಿರಾರು ಭಕ್ತರು ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ದಾವಣಗೆರೆಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು