AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈರುಳ್ಳಿ ಬೆಲೆ ಕುಸಿತ: ರೈತರು ಈರುಳ್ಳಿಯ ಜತೆಗೆ ಚೀಲವನ್ನೂ ಉಚಿತವಾಗಿ ಕೊಟ್ಟು ಹೋಗಬೇಕಾದ ದುಸ್ಥಿತಿ

ದಾವಣಗೆರೆ ಈರುಳ್ಳಿ ಮಾರುಕಟ್ಟೆಯಲ್ಲಿ ಜಾಗತಿಕ ಯುದ್ಧದ ಪರಿಣಾಮದಿಂದ ತೀವ್ರ ಬೆಲೆ ಕುಸಿತವಾಗಿದೆ. ಕೆಜಿಗೆ 6-12 ರೂ.ಗೆ ಇಳಿದಿದ್ದು, ರೈತರು ಕಂಗಾಲಾಗಿದ್ದಾರೆ. ಇಂಧನ ಬೆಲೆ ಏರಿಕೆಯಿಂದ ಹೋಟೆಲ್‌ಗಳಿಂದ ಬೇಡಿಕೆ ಕಡಿಮೆಯಾಗಿರುವುದು ಮತ್ತು ಖಾಲಿ ಚೀಲದ ಬೆಲೆ ಹೆಚ್ಚಾಗಿರುವುದು ರೈತರ ಸಂಕಷ್ಟವನ್ನು ಇನ್ನಷ್ಟು ಹೆಚ್ಚಿಸಿದೆ. ಕೃಷಿಕರು ತಾವು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ಕಣ್ಣೀರು ಹಾಕುತ್ತಿದ್ದಾರೆ.

ಈರುಳ್ಳಿ ಬೆಲೆ ಕುಸಿತ: ರೈತರು ಈರುಳ್ಳಿಯ ಜತೆಗೆ ಚೀಲವನ್ನೂ ಉಚಿತವಾಗಿ ಕೊಟ್ಟು ಹೋಗಬೇಕಾದ ದುಸ್ಥಿತಿ
ಸಾಂದರ್ಭಿಕ ಚಿತ್ರ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Mar 19, 2026 | 8:53 AM

Share

ದಾವಣಗೆರೆ, ಮಾ.19: ಎಲ್ಲಿಯೋ ನಡೆಯುತ್ತಿರುವ ಯುದ್ಧದ ಪರಿಣಾಮ ದಾವಣಗೆರೆಯ ಈರುಳ್ಳಿ ಮಾರುಕಟ್ಟೆಯ ಮೇಲೆ ಭೀಕರವಾಗಿ ಪರಿಣಾಮವನ್ನು ಉಂಟು ಮಾಡಿದೆ. ಬೆಲೆ ಕುಸಿತದಿಂದಾಗಿ ರೈತರು ಕಂಗಾಲಾಗಿದ್ದು, ತಾವು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತಂದ ಕೂಲಿಯೂ ಸಿಗದೆ ಒದ್ದಾಡಿದ್ದಾರೆ. ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಪ್ರತಿ ಕೆಜೆಗೆ ಕೇವಲ 6 ರಿಂದ 12 ರೂಪಾಯಿಗೆ ಕುಸಿದಿದೆ. ಉತ್ತಮ ಗಾತ್ರದ ಈರುಳ್ಳಿಗೂ ಕೇವಲ 10-12 ರೂಪಾಯಿ ಸಿಗುತ್ತಿದ್ದರೆ, ಸಣ್ಣ ಗಾತ್ರದ ಈರುಳ್ಳಿಗೆ 6-8 ರೂಪಾಯಿ ಮಾತ್ರ ಲಭಿಸುತ್ತಿದೆ.

ಜಾಗತಿಕ ಯುದ್ಧದ ಭೀತಿಯಿಂದಾಗಿ ಇಂಧನ ಮತ್ತು ಸಿಲಿಂಡರ್ ಬೆಲೆ ಏರಿಕೆಯಾಗಿದ್ದು, ಹಲವು ಹೋಟೆಲ್‌ಗಳು ವಹಿವಾಟು ಸ್ಥಗಿತಗೊಳಿಸಿವೆ. ಇದು ಈರುಳ್ಳಿಯ ಬೇಡಿಕೆಯ ಮೇಲೆ ನೇರ ಪರಿಣಾಮ ಬೀರಿದೆ. ಈರುಳ್ಳಿ ಬೆಲೆ ಕುಸಿದಿದ್ದರೆ, ಅದನ್ನು ತುಂಬುವ ಖಾಲಿ ಚೀಲದ ಬೆಲೆ ಮಾತ್ರ 18 ರಿಂದ 20 ರೂಪಾಯಿಗೆ ಏರಿಕೆಯಾಗಿದೆ. ರೈತರು ಈರುಳ್ಳಿಯ ಜೊತೆಗೆ ಚೀಲವನ್ನೂ ಉಚಿತವಾಗಿ ಕೊಟ್ಟು ಹೋಗಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಅಬ್ಬರ: ಕಾಶ್ಮೀರದಂತಾದ ಮಲೆನಾಡು; ರೈತರಿಗೆ ತಪ್ಪದ ಬೆಳೆ ಹಾನಿ ಸಂಕಷ್ಟ!

ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ರಾಜ್ಯದ ಕೊಪ್ಪಳ, ಬಳ್ಳಾರಿ, ವಿಜಯಪುರ ಮತ್ತು ಹೊಸಪೇಟೆಯಿಂದ ನೂರಾರು ಕ್ವಿಂಟಾಲ್ ಈರುಳ್ಳಿ ಹೊತ್ತು ತಂದ ರೈತರು ದರ ನೋಡಿ ಕಣ್ಣೀರು ಹಾಕುತ್ತಿದ್ದಾರೆ. ಸ್ಥಳೀಯವಾಗಿ ಬೆಳೆದ ಈರುಳ್ಳಿಗೆ ನಾಸಿಕ್ ಈರುಳ್ಳಿಯ ಅರ್ಧದಷ್ಟು ದರವೂ ಸಿಗುತ್ತಿಲ್ಲ ಎಂಬುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ