AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಅಕಾಲಿಕ ಮಳೆಗೆ ಮಣ್ಣುಪಾಲಾದ ಭತ್ತ, ಕಣ್ಣೀರು ಹಾಕುತ್ತಿರುವ ಅನ್ನದಾತರು

ಮಳೆ-ಗಾಳಿಗೆ ಸಿಕ್ಕು ಸುಮಾರು ಐವತ್ತು ಸಾವಿರ ಎಕರೆ ಪ್ರದೇಶದಲ್ಲಿ ಬೆಳೆದ ಭತ್ತ ಸರ್ವನಾಶವಾಗಿದೆ. ಜಿಲ್ಲೆಯಲ್ಲಿ ಶೇಕಡ 70 ರಷ್ಟು ಭದ್ರಾ ಅಚ್ಚುಕಟ್ಟು ಪ್ರದೇಶವಿದ್ದು, ಸುಮಾರು 1.4 ಲಕ್ಷ ಎಕರೆಯಲ್ಲಿ ರೈತರು ಭತ್ತ ಬೆಳೆದಿದ್ದಾರೆ.

ದಾವಣಗೆರೆ: ಅಕಾಲಿಕ ಮಳೆಗೆ ಮಣ್ಣುಪಾಲಾದ ಭತ್ತ, ಕಣ್ಣೀರು ಹಾಕುತ್ತಿರುವ ಅನ್ನದಾತರು
ಭತ್ತ ನೆಲಸಮ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: ವಿವೇಕ ಬಿರಾದಾರ|

Updated on: Nov 11, 2023 | 1:23 PM

Share

ದಾವಣಗೆರೆ ನ.10: ಭೀಕರ ಬರಗಾಲದ (Drought) ನಡುವೆಯೂ ರೈತರು ಸಮೃದ್ಧವಾಗಿ ಭತ್ತ (Paddy) ಬೆಳೆದಿದ್ದಾರೆ. ಕಟಾವು ಮಾಡಿ ಮಾರುಕಟ್ಟೆಗೆ ತೆಗೆದುಕೊಂಡು ಹೋಗಲು ರೈತರು ಸನ್ನದ್ಧವಾಗಿದ್ದರು. ಆದರೆ ವಿಧಿಯಾಟವೇ ಬೇರೆಯಾಗಿತ್ತು. ಮಳೆ-ಗಾಳಿಗೆ (Rain) ಸಿಕ್ಕು ಸುಮಾರು ಐವತ್ತು ಸಾವಿರ ಎಕರೆ ಪ್ರದೇಶದಲ್ಲಿ ಬೆಳೆದ ಭತ್ತ ಸರ್ವನಾಶವಾಗಿದೆ. ಜಿಲ್ಲೆಯಲ್ಲಿ ಶೇಕಡ 70 ರಷ್ಟು ಭದ್ರಾ ಅಚ್ಚುಕಟ್ಟು ಪ್ರದೇಶವಿದ್ದು, ಸುಮಾರು 1.4 ಲಕ್ಷ ಎಕರೆಯಲ್ಲಿ ರೈತರು ಭತ್ತ ಬೆಳೆದಿದ್ದಾರೆ. ಆದರೆ ಬರಗಾಲದಿಂದ ನೀರಿಲ್ಲದೆ ಬೆಳೆ ಒಣಗುತ್ತಿತ್ತು.

ಈ ಸಂದರ್ಭದಲ್ಲಿ ರೈತರು ಭದ್ರಾ ಡ್ಯಾಂನಿಂದ ನೀರು ಬಿಡುವಂತೆ ಹೋರಾಟ ಮಾಡಿದರು. ಹಾಗೇ ಜಲಸಂಪನ್ಮೂಲ ಇಲಾಖೆ ಸಚಿವ ಡಿ ಕೆ ಶಿವಕುಮಾರ್​, ಭದ್ರಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್​ಎಸ್​ ಮಲ್ಲಿಕಾರ್ಜುನ್ ಅವರನ್ನು ಭೇಟಿ ಮಾಡಿ ಶಿವಮೊಗ್ಗಾ ಭದ್ರಾ ಡ್ಯಾಂನಿಂದ ನೀರು ಬಿಡಿಸಿಕೊಂಡಿದ್ದರು.

ಇದನ್ನೂ ಓದಿ: ಸಂತೋಷ-ಸಮಾಧಾನದ ಸಂಗತಿ! ಮುಂಗಾರು ಹಿಂಗಾರು ಕೈಕೊಟ್ಟರೂ ಆ ರೈತ ಮಾಡಿದ ಸೂಪರ್​ ಐಡಿಯಾಗೆ ಬಂಪರ್​ ಬೆಳೆ- ಮಹಿಳಾ ಕೃಷಿ ಕಾರ್ಮಿಕರಿಗೆ ಕೈತುಂಬಾ ಕೆಲಸ

ಇದರಿಂದ ಒಣಗುತ್ತಿರುವ ಭತ್ತದ ಬೆಳೆಗೆ ಜೀವಕಳೆ ಬಂದು, ಸಮೃದ್ಧವಾಗಿ ಬೆಳೆದು ನಿಂತಿತ್ತು. ಇನ್ನೇನು ಕಟಾವು ಮಾಡಬೇಕು ಎಂದುಕೊಳ್ಳುವಷ್ಟರಲ್ಲಿ ಅಕಾಲಿಕ ಮಳೆ ಬಂದು ಸುಮಾರು 50 ಸಾವಿರ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ಸರ್ವನಾಶವಾಗಿದೆ. ಭತ್ತ ಚಾಪೆಯ ರೀತಿ ನೆಲಕ್ಕೆ ಒರಗಿದೆ. ಇದರಿಂದ ರೈತನ ಬದುಕು ಮಣ್ಣು ಪಾಲಾಗಿದ್ದು, ರೈತ ಕಣ್ಣೀರು ಹಾಕುತ್ತಿದ್ದಾನೆ. ಅಕಾಲಿಕ ಮಳೆಯಿಂದ ಜಿಲ್ಲೆಯ ರೈತರ ಶ್ರಮ ಮಣ್ಣುಪಾಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಬೇಕು. ರೈತರಿಗೆ ಪರಿಹಾರ ನೀಡಬೇಕು. ತೋಟಗಾರಿಕಾ ಸಚಿವ ತವರಿನಲ್ಲಿ ಈ ಸ್ಥಿತಿಯಾದರೆ ಹೇಗೆ ಎಂಬ ಮಾತುಗಳು ಕೇಳಿ ಬರತ್ತಿವೆ.

ಜಿಲ್ಲೆಯ 1.4 ಲಕ್ಷ ಎಕರೆಯಲ್ಲಿ 4.2 ಲಕ್ಷ ಟನ್ ಭತ್ತ ಬೆಳೆಯಲಾಗುತ್ತದೆ. ಇದರಿಂದ 2.7 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಉತ್ಪಾದನೆಯಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ