AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಉಲ್ಲಂಘಿಸಿದ್ದಕ್ಕೆ ಪೊಲೀಸರಿಂದ ಸಿಕ್ತು ಹಣೆ ಪಟ್ಟಿ!

ದಾವಣಗೆರೆ: ಕೊರೊನಾ ಸೋಂಕನ್ನು ತಡೆಯುವ ನಿಟ್ಟಿನಲ್ಲಿ ಇಡೀ ದೇಶವನ್ನು ಎರಡನೇ ಹಂತದ ಲಾಕ್​ಡೌನ್ ಮಾಡಲಾಗಿದೆ. ಆದರೆ ನಮ್ಮ ಜನ ಮಾತ್ರ ಯಾವುದಕ್ಕೂ ಕ್ಯಾರೆ ಅಂತಿಲ್ಲ. ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಇದೇ ರಿತಿ ಆದೇಶವನ್ನು ಉಲ್ಲಂಘಿಸಿದ 86 ಮಂದಿಯನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಕೈಗೆ ಕ್ಷಮಿಸಿ ನಾನು ಲಾಕ್​ಡೌನ್ ಉಲ್ಲಂಘಿಸಿದ್ದೇನೆ. ಮತ್ತೆ ಈ ರೀತಿ ಕಾನೂನು ಉಲ್ಲಂಘಿಸಲ್ಲ ಎಂಬ ಬರಹವಿರುವ ಸ್ಲೇಟ್ ಕೊಟ್ಟು ಕೈ ಮೇಲೇರಿಸಿ ಕೂರಿಸಿದ್ದಾರೆ. ಅನಗತ್ಯ ತಿರುಗಾಟ ನಡೆಸಿದವರ ವಿರುದ್ಧ […]

ಲಾಕ್​ಡೌನ್ ಉಲ್ಲಂಘಿಸಿದ್ದಕ್ಕೆ ಪೊಲೀಸರಿಂದ ಸಿಕ್ತು ಹಣೆ ಪಟ್ಟಿ!
ಸಾಧು ಶ್ರೀನಾಥ್​
|

Updated on: Apr 20, 2020 | 2:05 PM

Share

ದಾವಣಗೆರೆ: ಕೊರೊನಾ ಸೋಂಕನ್ನು ತಡೆಯುವ ನಿಟ್ಟಿನಲ್ಲಿ ಇಡೀ ದೇಶವನ್ನು ಎರಡನೇ ಹಂತದ ಲಾಕ್​ಡೌನ್ ಮಾಡಲಾಗಿದೆ. ಆದರೆ ನಮ್ಮ ಜನ ಮಾತ್ರ ಯಾವುದಕ್ಕೂ ಕ್ಯಾರೆ ಅಂತಿಲ್ಲ. ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಇದೇ ರಿತಿ ಆದೇಶವನ್ನು ಉಲ್ಲಂಘಿಸಿದ 86 ಮಂದಿಯನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರ ಕೈಗೆ ಕ್ಷಮಿಸಿ ನಾನು ಲಾಕ್​ಡೌನ್ ಉಲ್ಲಂಘಿಸಿದ್ದೇನೆ. ಮತ್ತೆ ಈ ರೀತಿ ಕಾನೂನು ಉಲ್ಲಂಘಿಸಲ್ಲ ಎಂಬ ಬರಹವಿರುವ ಸ್ಲೇಟ್ ಕೊಟ್ಟು ಕೈ ಮೇಲೇರಿಸಿ ಕೂರಿಸಿದ್ದಾರೆ. ಅನಗತ್ಯ ತಿರುಗಾಟ ನಡೆಸಿದವರ ವಿರುದ್ಧ ಪೊಲೀಸ್ ಇಲಾಖೆ, ಜಿಲ್ಲಾಡಳಿತ ಈ ರೀತಿಯ ಕ್ರಮ ಕೈಗೊಂಡಿದೆ.

ಎಷ್ಟೇ ಜಾಗೃತಿ ಮೂಡಿಸಿದರು ಜನ ಹೊರ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅನಗತ್ಯ ತಿರುಗಾಟ ನಡೆಸುವವರಿಗೆ ತಕ್ಕ ಶಾಸ್ತ್ರಿ ಮಾಡಿದ್ದೇವೆ. ಮೊನ್ನೆ ನೂರಕ್ಕೂ ಅಧಿಕ ಮಂದಿಯನ್ನ ಬಂಧಿಸಲಾಗಿತ್ತು. ಇಂದು 86 ಜನರನ್ನು ಬಂಧಿಸಿದ್ದೇವೆ. ಇವರ ಮೇಲೆ ಕಾನೂನು ಕ್ರಮ‌ ಕೈಗೊಳ್ಳುತ್ತೇವೆ. ಅಗತ್ಯ ವಸ್ತು ಕೊಳ್ಳುವವರಿಗೆ ಮಾತ್ರ ಬಿಟ್ಟಿದ್ದೇವೆ. ಉಳಿದವರಿಗೆ ಇದು ಎಚ್ಚರಿಕೆಯ ಗಂಟೆ ಎಂದು ದಾವಣಗೆರೆಯಲ್ಲಿ ಎಸ್ಪಿ ಹನುಮಂತರಾಯ ಎಚ್ಚರಿಸಿದ್ದಾರೆ.

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!