ಲಾಕ್​ಡೌನ್ ಉಲ್ಲಂಘಿಸಿದ್ದಕ್ಕೆ ಪೊಲೀಸರಿಂದ ಸಿಕ್ತು ಹಣೆ ಪಟ್ಟಿ!

ದಾವಣಗೆರೆ: ಕೊರೊನಾ ಸೋಂಕನ್ನು ತಡೆಯುವ ನಿಟ್ಟಿನಲ್ಲಿ ಇಡೀ ದೇಶವನ್ನು ಎರಡನೇ ಹಂತದ ಲಾಕ್​ಡೌನ್ ಮಾಡಲಾಗಿದೆ. ಆದರೆ ನಮ್ಮ ಜನ ಮಾತ್ರ ಯಾವುದಕ್ಕೂ ಕ್ಯಾರೆ ಅಂತಿಲ್ಲ. ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಇದೇ ರಿತಿ ಆದೇಶವನ್ನು ಉಲ್ಲಂಘಿಸಿದ 86 ಮಂದಿಯನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಕೈಗೆ ಕ್ಷಮಿಸಿ ನಾನು ಲಾಕ್​ಡೌನ್ ಉಲ್ಲಂಘಿಸಿದ್ದೇನೆ. ಮತ್ತೆ ಈ ರೀತಿ ಕಾನೂನು ಉಲ್ಲಂಘಿಸಲ್ಲ ಎಂಬ ಬರಹವಿರುವ ಸ್ಲೇಟ್ ಕೊಟ್ಟು ಕೈ ಮೇಲೇರಿಸಿ ಕೂರಿಸಿದ್ದಾರೆ. ಅನಗತ್ಯ ತಿರುಗಾಟ ನಡೆಸಿದವರ ವಿರುದ್ಧ […]

ಲಾಕ್​ಡೌನ್ ಉಲ್ಲಂಘಿಸಿದ್ದಕ್ಕೆ ಪೊಲೀಸರಿಂದ ಸಿಕ್ತು ಹಣೆ ಪಟ್ಟಿ!
ಸಾಧು ಶ್ರೀನಾಥ್​

Updated on: Apr 20, 2020 | 2:05 PM

ದಾವಣಗೆರೆ: ಕೊರೊನಾ ಸೋಂಕನ್ನು ತಡೆಯುವ ನಿಟ್ಟಿನಲ್ಲಿ ಇಡೀ ದೇಶವನ್ನು ಎರಡನೇ ಹಂತದ ಲಾಕ್​ಡೌನ್ ಮಾಡಲಾಗಿದೆ. ಆದರೆ ನಮ್ಮ ಜನ ಮಾತ್ರ ಯಾವುದಕ್ಕೂ ಕ್ಯಾರೆ ಅಂತಿಲ್ಲ. ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಇದೇ ರಿತಿ ಆದೇಶವನ್ನು ಉಲ್ಲಂಘಿಸಿದ 86 ಮಂದಿಯನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರ ಕೈಗೆ ಕ್ಷಮಿಸಿ ನಾನು ಲಾಕ್​ಡೌನ್ ಉಲ್ಲಂಘಿಸಿದ್ದೇನೆ. ಮತ್ತೆ ಈ ರೀತಿ ಕಾನೂನು ಉಲ್ಲಂಘಿಸಲ್ಲ ಎಂಬ ಬರಹವಿರುವ ಸ್ಲೇಟ್ ಕೊಟ್ಟು ಕೈ ಮೇಲೇರಿಸಿ ಕೂರಿಸಿದ್ದಾರೆ. ಅನಗತ್ಯ ತಿರುಗಾಟ ನಡೆಸಿದವರ ವಿರುದ್ಧ ಪೊಲೀಸ್ ಇಲಾಖೆ, ಜಿಲ್ಲಾಡಳಿತ ಈ ರೀತಿಯ ಕ್ರಮ ಕೈಗೊಂಡಿದೆ.

ಎಷ್ಟೇ ಜಾಗೃತಿ ಮೂಡಿಸಿದರು ಜನ ಹೊರ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅನಗತ್ಯ ತಿರುಗಾಟ ನಡೆಸುವವರಿಗೆ ತಕ್ಕ ಶಾಸ್ತ್ರಿ ಮಾಡಿದ್ದೇವೆ. ಮೊನ್ನೆ ನೂರಕ್ಕೂ ಅಧಿಕ ಮಂದಿಯನ್ನ ಬಂಧಿಸಲಾಗಿತ್ತು. ಇಂದು 86 ಜನರನ್ನು ಬಂಧಿಸಿದ್ದೇವೆ. ಇವರ ಮೇಲೆ ಕಾನೂನು ಕ್ರಮ‌ ಕೈಗೊಳ್ಳುತ್ತೇವೆ. ಅಗತ್ಯ ವಸ್ತು ಕೊಳ್ಳುವವರಿಗೆ ಮಾತ್ರ ಬಿಟ್ಟಿದ್ದೇವೆ. ಉಳಿದವರಿಗೆ ಇದು ಎಚ್ಚರಿಕೆಯ ಗಂಟೆ ಎಂದು ದಾವಣಗೆರೆಯಲ್ಲಿ ಎಸ್ಪಿ ಹನುಮಂತರಾಯ ಎಚ್ಚರಿಸಿದ್ದಾರೆ.


sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us