AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಂಪತಿ ಕೈ, ಕಾಲು ಕಟ್ಟಿ ಸಿನಿಮಾ ಮಾದರಿ ದರೋಡೆ: 4 ತಿಂಗಳ ಬಳಿಕ ಖಾಕಿ ಬಲೆಗೆ ಬಿದ್ದ ಖತರ್ನಾಕ್​​ ಗ್ಯಾಂಗ್​​

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರಿನಲ್ಲಿ ವೃದ್ಧ ದಂಪತಿಯ ಮನೆಯಲ್ಲಿ 8.4 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದ ಖತರ್ನಾಕ್ ದರೋಡೆ ಗ್ಯಾಂಗ್ ಅನ್ನು ಪೊಲೀಸರು ನಾಲ್ಕು ತಿಂಗಳ ಬಳಿಕ ಬಂಧಿಸಿದ್ದಾರೆ. ತಮಿಳುನಾಡು ಮೂಲದ ಐವರು ಆರೋಪಿಗಳಿಂದ 14 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಗ್ಯಾಂಗ್ ರಾಜ್ಯದ ಹಲವೆಡೆ ಇದೇ ರೀತಿಯ ದರೋಡೆ ಕೃತ್ಯಗಳಲ್ಲಿ ಭಾಗಿಯಾಗಿರೋದು ತನಿಖೆಯಿಂದ ತಿಳಿದುಬಂದಿದೆ.

ದಂಪತಿ ಕೈ, ಕಾಲು ಕಟ್ಟಿ ಸಿನಿಮಾ ಮಾದರಿ ದರೋಡೆ: 4 ತಿಂಗಳ ಬಳಿಕ ಖಾಕಿ ಬಲೆಗೆ ಬಿದ್ದ ಖತರ್ನಾಕ್​​ ಗ್ಯಾಂಗ್​​
ಬಂಧಿತ ಆರೋಪಿಗಳುImage Credit source: Tv9 Kannada
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Feb 24, 2026 | 5:49 PM

Share

ದಾವಣಗೆರೆ, ಫೆಬ್ರವರಿ 24: ಚನ್ನಗಿರಿ ತಾಲೂಕಿನ ಕಾಕನೂರ ಗ್ರಾಮದದ ಒಂಟಿ ಮನೆಯಲ್ಲಿದ್ದ ವೃದ್ಧ ದಂಪತಿಯ ಕೈ ಕಾಲು ಕಟ್ಟಿ, ಹಿಂಸೆ ನೀಡಿ ಮನೆಯಲ್ಲಿದ್ದ ಸುಮಾರು 8 ಲಕ್ಷ 40 ಸಾವಿರ ಮೌಲ್ಯದ ಚಿನ್ನಾಭರಣ ದೋಚಿದ್ದ ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ತಮಿಳುನಾಡಿನ ಹೊಸೂರು ಬತ್ತಪಲ್ಲಿಯ ಶಿವಕುಮಾರ್, ಸೇಲಂ ಜಿಲ್ಲೆಯ ಕೇಶವನ್, ದಿಂಡಿಗಲ್ ಜಿಲ್ಲೆಯ ಅರುಣ್ ಪ್ರಶಾಂತ್, ತಿರುವಣ್ಣಾಮಲೈನ ಅರಸು ಹಾಗೂ ನಾಮಕ್ಕಲ್ ಕಲಾದೇವಿ ಬಂಧಿತ ಆರೋಪಿಗಳು. ಬಂಧಿತರಿಂದ ಬರೋಬ್ಬರಿ 14 ಲಕ್ಷ ರೂ. ಮೌಲ್ಯದ ವಸ್ತುಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪ್ರಕರಣ ಏನು?

ಸೆಪ್ಟೆಂಬರ್​​ 6,2025ರಂದು ಆರೋಪಿಗಳು ದರೋಡೆ ನಡೆಸಿದ್ದರು. ರಾತ್ರಿ ವೇಳೆ ಮನೆ ಬಾಗಿಲು ತೆರೆದಿರೋದು ನೋಡಿ ಒಳಗೆ ನುಗ್ಗಿದ್ದ ಐದುಜನ ಮುಸುಕುಧಾರಿಗಳ ಗ್ಯಾಂಗ್​​, ಟಿವಿ ನೋಡುತ್ತಿದ್ದ ಮಾದಪ್ಪ ಅವರನ್ನು ಪಂಚೆಯಿಂದ ಕಟ್ಟಿ ಬಳಿಕ ಅಡುಗೆ ಮನೆಯಲ್ಲಿದ್ದ ಸಾವಿತ್ರಮ್ಮ ಕೈ ಕಾಲುಗಳನ್ನು ಹಗ್ಗದಿಂದ ಬಿಗಿದು ರಾಬರಿ ನಡೆಸಿತ್ತು. ಇವರ ಮೈಮೇಲಿದ್ದ ಬಂಗಾರ ಮಾತ್ರವಲ್ಲದೆ ಜೀವ ಬೆದರಿಕೆ ಹಾಕಿ ಕಪಾಟಿನಲ್ಲಿದ್ದ ಒಡವೆಗಳನ್ನೂ ಆರೋಪಿಗಳು ದೋಚಿದ್ದರು. ದಂಪತಿಯ ಜೊತೆಗಿದ್ದ ಮಗ ಕೆಲಸದ ನಿಮಿತ್ತ ಹೊರ ಹೋಗಿದ್ದ ವೇಳೆಯೇ ಘಟನೆ ನಡೆದಿರೋದು ಕುಟುಂಬವನ್ನು ಬೆಚ್ಚಿಬೀಳಿಸಿತ್ತು. ಸರ್ಕಾರಿ ನೌಕರರಾಗಿದ್ದ ದಂಪತಿ ಕರಾವಳಿ ಕರ್ನಾಟಕ ಭಾಗದಲ್ಲಿಯೇ ಹಲವು ವರ್ಷ ವಾಸವಿದ್ದು, ನಿವೃತ್ತಿ ಬಳಿಕ ಇದ್ದೊಬ್ಬ ಪುತ್ರನ ಜೊತೆ ಬಂದು ತೋಟದ ಮನೆಯಲ್ಲಿ ನೆಲೆಸಿದ್ದರು.

ಇದನ್ನೂ ಓದಿ: 400 ಕೋಟಿ ರೂ. ದರೋಡೆ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಬಂಧನ

ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದು, ಖದೀಮರನ್ನು ಖೆಡ್ಡಾಕ್ಕೆ ಕೆಡವುವಲ್ಲಿ ಕೊನೆಗೂ ಯಶಸ್ಸು ಕಂಡಿದ್ದಾರೆ. ಆರೋಪಿಗಳನ್ನು ತಮಿಳುನಾಡಿಗೇ ತೆರಳಿ ಬಂಧಿಸಲಾಗಿದ್ದು, ಇನ್ನೂ ಹಲವೆಡೆ ಈ ರೀತಿಯ ದರೋಡೆ ಪ್ರಕರಣಗಳಲ್ಲಿ ಇವರು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಕೆಲ ಪೊಲೀಸ್ ಠಾಣೆಗಳಲ್ಲಿಯೂ ಇವರ ವಿರುದ್ಧ ಪ್ರಕರಣಗಳು ದಾಖಲಾಗಿರೋದು ಬೆಳಕಿಗೆ ಬಂದಿದೆ. ತಮಿಳುನಾಡು ಮೂಲದ ಈ ಗ್ಯಾಂಗ್ ಚಿತ್ರದುರ್ಗದ ಮೂಲಕ ಅಡಿಕೆನಾಡು ಚನ್ನಗಿರಿ ಪ್ರವೇಶ ಮಾಡಿತ್ತು ಎಂಬದು ಕೂಡ ಬಯಲಾಗಿದ್ದು, ಆರೋಪಿಗಳಿಗೆ ಸ್ಥಳೀಯರು ಯಾರಿಂದಾದರೂ ಸಹಕಾರ ಸಿಕ್ಕಿತ್ತಾ ಎಂಬ ಬಗ್ಗೆಯೂ ತನಿಖೆ ಮುಂದುವರಿದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಮಹಿಳೆಯರ ಮೇಲೆ ಹರಿದ ಸರ್ಕಾರಿ ಬಸ್​​
ಮಹಿಳೆಯರ ಮೇಲೆ ಹರಿದ ಸರ್ಕಾರಿ ಬಸ್​​
ತರಕಾರಿಯಲ್ಲಿ ರಾಸಾಯನಿಕ ಪತ್ತೆಗೆ ಕಾರಣ ರಿವೀಲ್​​: ಇಲ್ಲಿದೆ ಅಸಲಿ ಸತ್ಯ
ತರಕಾರಿಯಲ್ಲಿ ರಾಸಾಯನಿಕ ಪತ್ತೆಗೆ ಕಾರಣ ರಿವೀಲ್​​: ಇಲ್ಲಿದೆ ಅಸಲಿ ಸತ್ಯ
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿ ಹತ್ಯೆ: ಸ್ಫೋಟಕ ಕಾರಣ ಬಿಚ್ಚಿಟ್ಟ SP
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿ ಹತ್ಯೆ: ಸ್ಫೋಟಕ ಕಾರಣ ಬಿಚ್ಚಿಟ್ಟ SP
ದರ್ಶನ್ ಕೇಸ್: ಪೊಲೀಸರ ತನಿಖೆ ಬಗ್ಗೆ ಅನುಮಾನ; ಗೃಹ ಸಚಿವರ ಸ್ಪಷನೆ ಇಲ್ಲಿದೆ
ದರ್ಶನ್ ಕೇಸ್: ಪೊಲೀಸರ ತನಿಖೆ ಬಗ್ಗೆ ಅನುಮಾನ; ಗೃಹ ಸಚಿವರ ಸ್ಪಷನೆ ಇಲ್ಲಿದೆ
ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ 5 ಸಾವಿರ ರೂ. ದಂಡ ಫಿಕ್ಸ್!
ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ 5 ಸಾವಿರ ರೂ. ದಂಡ ಫಿಕ್ಸ್!
ದೇವರು ಬಂದಂತೆ ನಟಿಸಿ ದಲಿತ ನವದಂಪತಿಯನ್ನು ದೇಗುಲದಿಂದ ಹೊರಗಟ್ಟಿದ ಅರ್ಚಕ
ದೇವರು ಬಂದಂತೆ ನಟಿಸಿ ದಲಿತ ನವದಂಪತಿಯನ್ನು ದೇಗುಲದಿಂದ ಹೊರಗಟ್ಟಿದ ಅರ್ಚಕ
ಮುನಿರತ್ನಗೆ ಮಹತ್ವದ ಭರವಸೆ ನೀಡಿದ ಡಿಕೆ ಶಿವಕುಮಾರ್
ಮುನಿರತ್ನಗೆ ಮಹತ್ವದ ಭರವಸೆ ನೀಡಿದ ಡಿಕೆ ಶಿವಕುಮಾರ್
ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ ದಂಡ: ಈ ರೂಲ್ಸ್ ಏಕೆ?
ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ ದಂಡ: ಈ ರೂಲ್ಸ್ ಏಕೆ?
ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ
ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?