AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಪ್​ ಮೂಲಕ ಮೃತನ ಗುರುತು ಪತ್ತೆ ಹಚ್ಚಿದ ದಾವಣಗೆರೆ ಪೊಲೀಸ್​​: ವಿನೂತನ ತಂತ್ರಜ್ಞಾನ ಅಳವಡಿಕೆ

ದಾವಣಗೆರೆ ಜಿಲ್ಲೆಯ ವಿದ್ಯಾನಗರ ಪೊಲೀಸರು ಕ್ರೈಮ್ ಮತ್ತು ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್‌ವರ್ಕ್ ಸಿಸ್ಟಮ್ (M-CCTNS) ಆ್ಯಪ್ ಮೂಲಕ ಕೊಲೆಯಾದ ವ್ಯಕ್ತಿಯ ಗುರುತನ್ನು ಪತ್ತೆಹಚ್ಚಿದ್ದಾರೆ.

ಆ್ಯಪ್​ ಮೂಲಕ ಮೃತನ ಗುರುತು ಪತ್ತೆ ಹಚ್ಚಿದ ದಾವಣಗೆರೆ ಪೊಲೀಸ್​​: ವಿನೂತನ ತಂತ್ರಜ್ಞಾನ ಅಳವಡಿಕೆ
ಎಂ-ಸಿಸಿಟಿಎನ್​ಎಸ್​ ಆ್ಯಪ್
Follow us
ವಿವೇಕ ಬಿರಾದಾರ
|

Updated on:Apr 02, 2023 | 7:22 AM

ದಾವಣಗೆರೆ: ರಾಜ್ಯ ಪೊಲೀಸ್​ ಇಲಾಖೆ ಹಲವು ತಂತ್ರಜ್ಞಾನಗಳನ್ನು ಅಳವಡಿಕೊಳ್ಳುತ್ತಿದ್ದು, ಇವುಗಳ ಮೂಲಕ ಅಪರಾಧ ಪ್ರಕರಣಗಳನ್ನು ಸುಲಭವಾಗಿ ಭೇದಿಸಲು ಸಹಾಯವಾಗುತ್ತಿದೆ. ಪೊಲೀಸ್​ ಇಲಾಖೆ ಇತ್ತೀಚಿಗೆ ಹೊಸ ತಂತ್ರಜ್ಞಾನದ ಮೊರೆ ಹೊಗಿದ್ದು, ಕ್ರೈಮ್ ಮತ್ತು ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್‌ವರ್ಕ್ ಸಿಸ್ಟಮ್ (M-CCTNS) ಆ್ಯಪ್​ ಮೂಲಕ ಆರೋಪಿಗಳನ್ನು ಪತ್ತೆ ಹಚ್ಚಬಹುದಾಗಿದೆ. ಈ ಆ್ಯಪ್​​ ಮೂಲಕ ದಾವಣಗೆರೆ (Davangere) ಜಿಲ್ಲೆಯ ವಿದ್ಯಾನಗರ ಪೊಲೀಸರು (Vidyanagar) ಮೃತ ವ್ಯಕ್ತಿಯ ಗುರುತನ್ನು ಪತ್ತೆ ಹಚ್ಚಿದ್ದಾರೆ. ಪೊಲೀಸರು ಕೊಲೆ ಪ್ರಕರಣವೊಂದರ ಬೆನ್ನುಹತ್ತಿದ್ದರು. ಹೀಗಾಗಿ ಕೊಲೆಯಾದವನ ಹಿನ್ನೆಲೆ ಮತ್ತು ಆತನ ಗುರುತು ಪತ್ತೆಗಾಗಿ ಎಂ-ಸಿಸಿಟಿಎನ್​ಎಸ್​ ಆ್ಯಪ್​ ಬಳಸಿದ್ದಾರೆ. ಈ ಡಿವೈಸನ್ನು ಉಪಯೋಗಿಸಿಕೊಂಡು ಮೊಬೈಲ್ ಅಪ್ಲಿಕೇಷನ್‌ ಮುಖಾಂತರ ಮೃತನ ವ್ಯಕ್ತಿಗಳ ಬೆರಳು ಮುದ್ರೆಯನ್ನು ಪರಿಶೀಲಿಸಿದಾಗ ಆ ವ್ಯಕ್ತಿಯ ಹಿನ್ನೆಲೆ ಪತ್ತೆಯಾಗಿದೆ.

ಈ ಕುರಿತು ದಾವಣಗೆರೆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ರಿಶಾಂತ್ ವಿಡಿಯೋ ಹಂಚಿಕೊಂಡಿದ್ದು ಕರ್ನಾಟಕ ಪೊಲೀಸರು ಆ್ಯಪ್ ಮೂಲಕ ಮೃತದೇಹವನ್ನು ಗುರುತಿಸುತ್ತಿರುವುದು ಇದೇ ಮೊದಲು ಎಂದು ಹೇಳಿದ್ದಾರೆ. “ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯ ಕೊಲೆ ನಡೆದಿದೆ. #MCCTNS ಅಪ್ಲಿಕೇಶನ್ ಬಳಸಿಕೊಂಡು ವ್ಯಕ್ತಿಯನ್ನು ಗುರುತಿಸಲಾಗಿದೆ. ನಂತರ ಪ್ರಕರಣವೂ ಪತ್ತೆಯಾಗಿತ್ತು. ಸಾಮಾನ್ಯವಾಗಿ, ರಾತ್ರಿಯ ಗಸ್ತಿನ ಸಮಯದಲ್ಲಿ, ರಸ್ತೆಯಲ್ಲಿ ಅನುಮಾನಾಸ್ಪದ ವ್ಯಕ್ತಿಗಳನ್ನು ಪರಿಶೀಲಿಸಲು ಈ ಅಪ್ಲಿಕೇಶನ್​​ನ್ನು ಬಳಸಲಾಗುತ್ತದೆ. ಇದೇ ಮೊದಲ ಬಾರಿಗೆ ಮೃತ ದೇಹವನ್ನು ಗುರುತಿಸಲು ಅಪ್ಲಿಕೇಶನ್​ನ್ನು ಬಳಸಲಾಯಿತು ಮತ್ತು ಅದು ತುಂಬಾ ಉಪಯುಕ್ತವಾಗಿದೆ. ದಾವಣಗೆರೆಯ ಎಫ್‌ಪಿಬಿ ಘಟಕಕ್ಕೆ ಧನ್ಯವಾದಗಳು” ಎಂದು ಹೇಳಿದರು.

ಕಳೆದ ವರ್ಷ ನವೆಂಬರ್‌ನಲ್ಲಿ ಬೆಂಗಳೂರು ಪೊಲೀಸರು ಎಂ-ಸಿಸಿಟಿಎನ್‌ಎಸ್ ಆ್ಯಪ್ ಮೂಲಕ ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಈ ಹಿಂದೆ ಸಂಗ್ರಹಿಸಿದ ಡೇಟಾಬೇಸ್ ಮೂಲಕ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮೂಲಕ ಆರೋಪಿಯ ಹಿನ್ನೆಲೆ ತಿಳಿದು ಬಂದಿತ್ತು. ಆತ ಹಲವು ಪ್ರಕರಣದಲ್ಲಿ ಬೇಕಾಗಿದ್ದನು. ಈ ವಿವರಗಳನ್ನು ತಿಳಿದ ಕೂಡಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 am, Sun, 2 April 23

‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ