Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಯು ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿ ಮೊಬೈಲ್ ಗೇಮ್ ಗೀಳು ಹತ್ತಿಸಿಕೊಂಡು, ಕಟ್ಟಡದಿಂದ ಹಾರಿ ಅತ್ಮಹತ್ಯೆ ಮಾಡಿಕೊಂಡ

ದಾವಣಗೆರೆ ನಗರದ ಅರುಣಾ ಸರ್ಕಲ್ ಬಳಿಯ ಪಿಸಾಳೆ ಕಾಂಪೌಂಡ್ ನಲ್ಲಿ ಎರಡನೇ ಮಹಡಿಯಿಂದ ಹಾರಿ ಪ್ರಾಣ ಬಿಟ್ಟ ಪಿಯು ವಿದ್ಯಾರ್ಥಿ ಅಂದು ಬೆಳಿಗ್ಗೆ ಪರೀಕ್ಷೆಗೆ ಹೋಗಬೇಕಾಗಿದ್ದ. ಸಾವನ್ನಪ್ಪುವ ಮೊದಲು ಆತ್ಮಹತ್ಯೆಗೆ ಪ್ರೇರಣೆ ನೀಡುವ ಭಯಾನಕ ಗೇಮ್ ನೋಡಿದ್ದ. ಪೊಲೀಸ್ ತನಿಖೆಯಿಂದ ಇದೆಲ್ಲಾ ಬಯಲಾಗಿದೆ.

ಪಿಯು ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿ ಮೊಬೈಲ್ ಗೇಮ್ ಗೀಳು ಹತ್ತಿಸಿಕೊಂಡು, ಕಟ್ಟಡದಿಂದ ಹಾರಿ ಅತ್ಮಹತ್ಯೆ ಮಾಡಿಕೊಂಡ
ಪಿಯು ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿ ಮೊಬೈಲ್ ಗೇಮ್ ಗೀಳು ಹತ್ತಿಸಿಕೊಂಡು, ಕಟ್ಟಡದಿಂದ ಹಾರಿ ಅತ್ಮಹತ್ಯೆ ಮಾಡಿಕೊಂಡ
Follow us
TV9 Web
| Updated By: ಸಾಧು ಶ್ರೀನಾಥ್​

Updated on:May 04, 2022 | 4:57 PM

ದಾವಣಗೆರೆ: ಪಿಯುಸಿ ವಿದ್ಯಾರ್ಥಿ ಮಿಥುನ್(18) ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ (Davangere PUC student suicide). ಸಾವಿಗೂ ಮೊದಲು ಮಿಥುನ್ ಆತ್ಮಹತ್ಯೆಗೆ ಪ್ರೇರಣೆ ನೀಡುವ ಭಯಾನಕ ಗೇಮ್ ಗಳನ್ನು ಮೊಬೈಲ್ ನಲ್ಲಿ ವೀಕ್ಷಿಸಿದ್ದ (mobile game addiction). ನನ್ನ ಆತ್ಮಹತ್ಯೆಗೆ ಯಾರೂ ಕಾರಣರಲ್ಲ ಎಂದೂ ಡೆತ್​​​ನೋಟ್ ಬರೆದು ದೇಹದ ವಿವಿಧ ಕಡೆ ಚಾಕುವಿನಿಂದ ಇರಿದುಕೊಂಡು, ಬಳಿಕ ಏಪ್ರಿಲ್ 23 ರಂದು ಕಟ್ಟಡದಿಂದ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸದ್ಯಕ್ಕೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ (Davangere SP CB Ryshyanth) ಮಾಹಿತಿ ನೀಡಿದ್ದಾರೆ.

ದಾವಣಗೆರೆ ನಗರದ ಅರುಣಾ ಸರ್ಕಲ್ ಬಳಿಯ ಪಿಸಾಳೆ ಕಾಂಪೌಂಡ್ ನಲ್ಲಿ ಎರಡನೇ ಮಹಡಿಯಿಂದ ಹಾರಿ ಪ್ರಾಣ ಬಿಟ್ಟ ಪಿಯು ವಿದ್ಯಾರ್ಥಿ ಅಂದು ಬೆಳಿಗ್ಗೆ ಪರೀಕ್ಷೆಗೆ ಹೋಗಬೇಕಾಗಿದ್ದ. ಸಾವನ್ನಪ್ಪುವ ಮೊದಲು ಆತ್ಮಹತ್ಯೆಗೆ ಪ್ರೇರಣೆ ನೀಡುವ ಭಯಾನಕ ಗೇಮ್ ನೋಡಿದ್ದ. ಪೊಲೀಸ್ ತನಿಖೆಯಿಂದ ಇದೆಲ್ಲಾ ಬಯಲಾಗಿದೆ. ಮೊಬೈಲ್ ನಲ್ಲಿ ಭಯಾನಕ ಗೇಮ್ ನೋಡುವ ಚಟ ವಿದ್ಯಾರ್ಥಿಗಳನ್ನ ಬಲಿ‌ಪಡೆಯುತ್ತಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲದಿಂದ ವರದಿ ಬಂದ ಬಳಿಕ ಸ್ಪಷ್ಟ ಚಿತ್ರಣ ಸಿಗಲಿದೆ.

ರಸ್ತೆ ಅಪಘಾತದಲ್ಲಿ ತಾಯಿ-ಮಗು ಸ್ಥಳದಲ್ಲೇ ದುರ್ಮರಣ: ದಾವಣಗೆರೆಯ ಕುಂದುವಾಡ ಬಳಿ ಹೆದ್ದಾರಿಯಲ್ಲಿ ರಸ್ತೆ ಅಪಘಾತದಲ್ಲಿ ತಾಯಿ-ಮಗು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಬೈಕ್​ ಸ್ಕಿಡ್ ಆಗಿ ಲಾರಿ ಚಕ್ರಕ್ಕೆ ಸಿಲುಕಿ ತಾಯಿ ಮತ್ತು ಮಗು ಅಸುನೀಗಿದೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲುಮಾಡಲಾಗಿದೆ. ರಸ್ತೆ ಕಾಮಗಾರಿ ವಿಳಂಬ ಹಿನ್ನೆಲೆ ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಕಾಮಗಾರಿ ಶೀಘ್ರ ಮುಗಿಸುವಂತೆ ಸ್ಥಳೀಯರು ಒತ್ತಾಯ ಮಾಡಿದರು.

ಹೇಮಾವತಿ ತೀರದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ: ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹೆಬ್ಬರಿಗೆ ಸಮೀಪ ಹೇಮಾವತಿ ನದಿ ತೀರದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕಳೆದ 10 ದಿನಗಳ ಹಿಂದೆ ಸಾವನ್ನಪ್ಪಿರುವ ಶಂಕೆ ವ್ಯಕಕ್ತವಾಗಿದೆ. ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Also Read: Lord Ganesha: ಇಂದು ಬುಧವಾರ ಗಣಪತಿಗೆ ಈ ವಸ್ತುಗಳ ಅರ್ಪಿಸಿದರೆ, ಗಣೇಶ ಸಂತುಷ್ಟನಾಗಿ ಶುಭ ತರುವುದು ಖಚಿತ

Also Read: ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಹಿನ್ನೆಲೆ ಪರೀಕ್ಷೆ ರದ್ದು ಪ್ರಶ್ನಿಸಿ ಕೆಎಟಿ ಮೊರೆ ಹೋದ ಅಭ್ಯರ್ಥಿಗಳು

Published On - 2:31 pm, Wed, 4 May 22

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್