AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಹಿರಿಯ ಸ್ವಾತಂತ್ರ್ಯ ಯೋಧ ಜಿ.ಗೋವಿಂದರಾಜ್ (95) ನಿಧನ

ಜಿಲ್ಲೆಯ ಹಿರಿಯ ಸ್ವಾತಂತ್ರ್ಯ ಯೋಧ ಜಿ. ಗೋವಿಂದರಾಜ್​ ಇಂದು(ಜ.16) ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದ್ದಾರೆ.

ದಾವಣಗೆರೆ: ಹಿರಿಯ ಸ್ವಾತಂತ್ರ್ಯ ಯೋಧ ಜಿ.ಗೋವಿಂದರಾಜ್ (95) ನಿಧನ
ಸ್ವಾತಂತ್ರ್ಯ ಯೋಧ ಜಿ. ಗೋವಿಂದರಾಜ್
TV9 Web
| Edited By: |

Updated on:Jan 16, 2023 | 11:10 AM

Share

ದಾವಣಗೆರೆ: ‌ಜಿಲ್ಲೆಯ ಹರಿಹರ ನಗರದ ಹಿರಿಯ ಸ್ವಾತಂತ್ರ್ಯ ಯೋಧ ಜಿ.ಗೋವಿಂದರಾಜ್ (95) ಇಂದು ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ದೇಶದ ಸ್ವಾತಂತ್ರ್ಯ ಹೋರಾಟದ ವೇಳೆ ಹರಿಹರ ಹಾಗೂ ದಾವಣಗೆರೆ ಸೇರಿದಂತೆ ಹಲವಾರು ಕಡೆ ನಡೆದ ಹೋರಾಟದಲ್ಲಿ ಗೋವಿಂದರಾಜ್ ಭಾಗಿ ಆಗಿದ್ದರು. ಜೊತೆಗೆ ಆರ್ಯ ಈಡಿಗರ ಸಮಾಜದ ಅಧ್ಯಕ್ಷರಾಗಿಯೂ ಕೂಡ ಸೇವೆ ಸಲ್ಲಿಸಿದ್ದರು. ಇಂದು ಗೋವಿಂದರಾಜು ಅವರು ಮೂವರು ಪುತ್ರರು ಹಾಗೂ ಮೂರು ಜನ ಪುತ್ರಿಯರು ಸೇರಿದಂತೆ ಅಪಾರ ಬಂಧುಗಳನ್ನ ಅಗಲಿದ್ದು, ಹರಿಹರ ನಗರದ ಧಾಲ್ಮಿಯಾ ವಿಶ್ರಮ್​ಘಾಟ್​ನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ದೇಶದಲ್ಲಿ ಅಂದು ಸ್ವಾತಂತ್ರ್ಯ ಹೋರಾಟದ ಕಾವು ಹೆಚ್ಚಾಗಿತ್ತು. ಇಂತಹ ಪರಿಸ್ಥಿತಿಯಲ್ಲಿ ಮೂರು ಜನ 18 ರಿಂದ 20ವರ್ಷದೊಳಗಿನ ಚಿಗುರು ಮೀಸೆ ಯುವಕರು ಹೋರಾಟಕ್ಕೆ ಹೆಸರಾಗಿದ್ದರು. ಅವರೇ ಹರಿಹರದ ತ್ರಿಮೂರ್ತಿಗಳು ಚಂದ್ರಶೇಖರಯ್ಯ, ಜಿ.ಕೃಷ್ಣಮೂರ್ತಿ ಹಾಗೂ ಜಿ. ಗೋವಿಂದರಾಜ್. ಜಿಲ್ಲೆಯ ಹರಿಹರ ನಗರ ಸಿವಾಸಿಗಳಾದ ಇವರು ಪೋಸ್ಟ್​ ಆಫೀಸ್ ಸೇರಿದಂತೆ ಹಲವಾರು ಕಡೆ ಹೋರಾಟ ಮಾಡುತ್ತಲೇ ಇದ್ದರು. ಹರಿಹರ ಅಂದರೆ ಕೈಗಾರಿಕೆಗೆ ಪ್ರಸಿದ್ಧವಾದ ಸ್ಥಳ ಆದ್ದರಿಂದ ಹಲವಾರು ಕಂಪನಿಗಳಿದ್ದವು ಇದೇ ಕಾರಣಕ್ಕೆ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹತ್ತಾರು ಕಡೆಯಿಂದ ಬಂದ ಕಾರ್ಮಿಕ ವರ್ಗ ಇಲ್ಲಿ ನೆಲೆಸಿತ್ತು. ಇವರನ್ನೆಲ್ಲ ಹೋರಾಟಕ್ಕಾಗಿ ಸಜ್ಜುಗೊಳಿಸಿದ್ದು ಇದೇ ಹರಿಹರದ ತ್ರಿಮೂರ್ತಿಗಳು. ಅಂದು ಬ್ರಿಟಿಷ್ ಅಧಿಕಾರಿಗಳಿಗೆ ಕಿರಿಕಿರಿ ಆಗುವಷ್ಟು ಇವರ ಹೋರಾಟವಿದ್ದಿತ್ತು. ಈ ಮೂವರಲ್ಲಿ ಕೊನೆಯದಾಗಿ ಉಳಿದಿದ್ದ ಜಿ.ಗೋವಿಂದರಾಜ್ ಅವರು ಇಂದು ನಮ್ಮನ್ನೆಲ್ಲ ಅಗಲಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:00 am, Mon, 16 January 23

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​