AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಹಿರಿಯ ಸ್ವಾತಂತ್ರ್ಯ ಯೋಧ ಜಿ.ಗೋವಿಂದರಾಜ್ (95) ನಿಧನ

ಜಿಲ್ಲೆಯ ಹಿರಿಯ ಸ್ವಾತಂತ್ರ್ಯ ಯೋಧ ಜಿ. ಗೋವಿಂದರಾಜ್​ ಇಂದು(ಜ.16) ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದ್ದಾರೆ.

ದಾವಣಗೆರೆ: ಹಿರಿಯ ಸ್ವಾತಂತ್ರ್ಯ ಯೋಧ ಜಿ.ಗೋವಿಂದರಾಜ್ (95) ನಿಧನ
ಸ್ವಾತಂತ್ರ್ಯ ಯೋಧ ಜಿ. ಗೋವಿಂದರಾಜ್
TV9 Web
| Edited By: |

Updated on:Jan 16, 2023 | 11:10 AM

Share

ದಾವಣಗೆರೆ: ‌ಜಿಲ್ಲೆಯ ಹರಿಹರ ನಗರದ ಹಿರಿಯ ಸ್ವಾತಂತ್ರ್ಯ ಯೋಧ ಜಿ.ಗೋವಿಂದರಾಜ್ (95) ಇಂದು ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ದೇಶದ ಸ್ವಾತಂತ್ರ್ಯ ಹೋರಾಟದ ವೇಳೆ ಹರಿಹರ ಹಾಗೂ ದಾವಣಗೆರೆ ಸೇರಿದಂತೆ ಹಲವಾರು ಕಡೆ ನಡೆದ ಹೋರಾಟದಲ್ಲಿ ಗೋವಿಂದರಾಜ್ ಭಾಗಿ ಆಗಿದ್ದರು. ಜೊತೆಗೆ ಆರ್ಯ ಈಡಿಗರ ಸಮಾಜದ ಅಧ್ಯಕ್ಷರಾಗಿಯೂ ಕೂಡ ಸೇವೆ ಸಲ್ಲಿಸಿದ್ದರು. ಇಂದು ಗೋವಿಂದರಾಜು ಅವರು ಮೂವರು ಪುತ್ರರು ಹಾಗೂ ಮೂರು ಜನ ಪುತ್ರಿಯರು ಸೇರಿದಂತೆ ಅಪಾರ ಬಂಧುಗಳನ್ನ ಅಗಲಿದ್ದು, ಹರಿಹರ ನಗರದ ಧಾಲ್ಮಿಯಾ ವಿಶ್ರಮ್​ಘಾಟ್​ನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ದೇಶದಲ್ಲಿ ಅಂದು ಸ್ವಾತಂತ್ರ್ಯ ಹೋರಾಟದ ಕಾವು ಹೆಚ್ಚಾಗಿತ್ತು. ಇಂತಹ ಪರಿಸ್ಥಿತಿಯಲ್ಲಿ ಮೂರು ಜನ 18 ರಿಂದ 20ವರ್ಷದೊಳಗಿನ ಚಿಗುರು ಮೀಸೆ ಯುವಕರು ಹೋರಾಟಕ್ಕೆ ಹೆಸರಾಗಿದ್ದರು. ಅವರೇ ಹರಿಹರದ ತ್ರಿಮೂರ್ತಿಗಳು ಚಂದ್ರಶೇಖರಯ್ಯ, ಜಿ.ಕೃಷ್ಣಮೂರ್ತಿ ಹಾಗೂ ಜಿ. ಗೋವಿಂದರಾಜ್. ಜಿಲ್ಲೆಯ ಹರಿಹರ ನಗರ ಸಿವಾಸಿಗಳಾದ ಇವರು ಪೋಸ್ಟ್​ ಆಫೀಸ್ ಸೇರಿದಂತೆ ಹಲವಾರು ಕಡೆ ಹೋರಾಟ ಮಾಡುತ್ತಲೇ ಇದ್ದರು. ಹರಿಹರ ಅಂದರೆ ಕೈಗಾರಿಕೆಗೆ ಪ್ರಸಿದ್ಧವಾದ ಸ್ಥಳ ಆದ್ದರಿಂದ ಹಲವಾರು ಕಂಪನಿಗಳಿದ್ದವು ಇದೇ ಕಾರಣಕ್ಕೆ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹತ್ತಾರು ಕಡೆಯಿಂದ ಬಂದ ಕಾರ್ಮಿಕ ವರ್ಗ ಇಲ್ಲಿ ನೆಲೆಸಿತ್ತು. ಇವರನ್ನೆಲ್ಲ ಹೋರಾಟಕ್ಕಾಗಿ ಸಜ್ಜುಗೊಳಿಸಿದ್ದು ಇದೇ ಹರಿಹರದ ತ್ರಿಮೂರ್ತಿಗಳು. ಅಂದು ಬ್ರಿಟಿಷ್ ಅಧಿಕಾರಿಗಳಿಗೆ ಕಿರಿಕಿರಿ ಆಗುವಷ್ಟು ಇವರ ಹೋರಾಟವಿದ್ದಿತ್ತು. ಈ ಮೂವರಲ್ಲಿ ಕೊನೆಯದಾಗಿ ಉಳಿದಿದ್ದ ಜಿ.ಗೋವಿಂದರಾಜ್ ಅವರು ಇಂದು ನಮ್ಮನ್ನೆಲ್ಲ ಅಗಲಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:00 am, Mon, 16 January 23

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ