AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಹಿರಿಯ ಸ್ವಾತಂತ್ರ್ಯ ಯೋಧ ಜಿ.ಗೋವಿಂದರಾಜ್ (95) ನಿಧನ

ಜಿಲ್ಲೆಯ ಹಿರಿಯ ಸ್ವಾತಂತ್ರ್ಯ ಯೋಧ ಜಿ. ಗೋವಿಂದರಾಜ್​ ಇಂದು(ಜ.16) ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದ್ದಾರೆ.

ದಾವಣಗೆರೆ: ಹಿರಿಯ ಸ್ವಾತಂತ್ರ್ಯ ಯೋಧ ಜಿ.ಗೋವಿಂದರಾಜ್ (95) ನಿಧನ
ಸ್ವಾತಂತ್ರ್ಯ ಯೋಧ ಜಿ. ಗೋವಿಂದರಾಜ್
TV9 Web
| Edited By: |

Updated on:Jan 16, 2023 | 11:10 AM

Share

ದಾವಣಗೆರೆ: ‌ಜಿಲ್ಲೆಯ ಹರಿಹರ ನಗರದ ಹಿರಿಯ ಸ್ವಾತಂತ್ರ್ಯ ಯೋಧ ಜಿ.ಗೋವಿಂದರಾಜ್ (95) ಇಂದು ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ದೇಶದ ಸ್ವಾತಂತ್ರ್ಯ ಹೋರಾಟದ ವೇಳೆ ಹರಿಹರ ಹಾಗೂ ದಾವಣಗೆರೆ ಸೇರಿದಂತೆ ಹಲವಾರು ಕಡೆ ನಡೆದ ಹೋರಾಟದಲ್ಲಿ ಗೋವಿಂದರಾಜ್ ಭಾಗಿ ಆಗಿದ್ದರು. ಜೊತೆಗೆ ಆರ್ಯ ಈಡಿಗರ ಸಮಾಜದ ಅಧ್ಯಕ್ಷರಾಗಿಯೂ ಕೂಡ ಸೇವೆ ಸಲ್ಲಿಸಿದ್ದರು. ಇಂದು ಗೋವಿಂದರಾಜು ಅವರು ಮೂವರು ಪುತ್ರರು ಹಾಗೂ ಮೂರು ಜನ ಪುತ್ರಿಯರು ಸೇರಿದಂತೆ ಅಪಾರ ಬಂಧುಗಳನ್ನ ಅಗಲಿದ್ದು, ಹರಿಹರ ನಗರದ ಧಾಲ್ಮಿಯಾ ವಿಶ್ರಮ್​ಘಾಟ್​ನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ದೇಶದಲ್ಲಿ ಅಂದು ಸ್ವಾತಂತ್ರ್ಯ ಹೋರಾಟದ ಕಾವು ಹೆಚ್ಚಾಗಿತ್ತು. ಇಂತಹ ಪರಿಸ್ಥಿತಿಯಲ್ಲಿ ಮೂರು ಜನ 18 ರಿಂದ 20ವರ್ಷದೊಳಗಿನ ಚಿಗುರು ಮೀಸೆ ಯುವಕರು ಹೋರಾಟಕ್ಕೆ ಹೆಸರಾಗಿದ್ದರು. ಅವರೇ ಹರಿಹರದ ತ್ರಿಮೂರ್ತಿಗಳು ಚಂದ್ರಶೇಖರಯ್ಯ, ಜಿ.ಕೃಷ್ಣಮೂರ್ತಿ ಹಾಗೂ ಜಿ. ಗೋವಿಂದರಾಜ್. ಜಿಲ್ಲೆಯ ಹರಿಹರ ನಗರ ಸಿವಾಸಿಗಳಾದ ಇವರು ಪೋಸ್ಟ್​ ಆಫೀಸ್ ಸೇರಿದಂತೆ ಹಲವಾರು ಕಡೆ ಹೋರಾಟ ಮಾಡುತ್ತಲೇ ಇದ್ದರು. ಹರಿಹರ ಅಂದರೆ ಕೈಗಾರಿಕೆಗೆ ಪ್ರಸಿದ್ಧವಾದ ಸ್ಥಳ ಆದ್ದರಿಂದ ಹಲವಾರು ಕಂಪನಿಗಳಿದ್ದವು ಇದೇ ಕಾರಣಕ್ಕೆ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹತ್ತಾರು ಕಡೆಯಿಂದ ಬಂದ ಕಾರ್ಮಿಕ ವರ್ಗ ಇಲ್ಲಿ ನೆಲೆಸಿತ್ತು. ಇವರನ್ನೆಲ್ಲ ಹೋರಾಟಕ್ಕಾಗಿ ಸಜ್ಜುಗೊಳಿಸಿದ್ದು ಇದೇ ಹರಿಹರದ ತ್ರಿಮೂರ್ತಿಗಳು. ಅಂದು ಬ್ರಿಟಿಷ್ ಅಧಿಕಾರಿಗಳಿಗೆ ಕಿರಿಕಿರಿ ಆಗುವಷ್ಟು ಇವರ ಹೋರಾಟವಿದ್ದಿತ್ತು. ಈ ಮೂವರಲ್ಲಿ ಕೊನೆಯದಾಗಿ ಉಳಿದಿದ್ದ ಜಿ.ಗೋವಿಂದರಾಜ್ ಅವರು ಇಂದು ನಮ್ಮನ್ನೆಲ್ಲ ಅಗಲಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:00 am, Mon, 16 January 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್