AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಗೃಹದಲ್ಲಿ ಗಾಂಜಾ, ಸೇರಿದಂತೆ ಹಲವು ನಿಷೇಧಿತ ವಸ್ತುಗಳು ಪತ್ತೆ ಪ್ರಕರಣ; ದಾವಣಗೆರೆ ಎಸ್​ಪಿ ಹೇಳಿದ್ದಿಷ್ಟು

ಚೀಫ್ ಜೈಲ್ ಸೂಪರಿಡೆಂಟ್, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಕಾರಗೃಹಕ್ಕೆ ಆಕಸ್ಮಿಕ ಭೇಟಿ ವೇಳೆ ಕಾರಗೃಹದಲ್ಲಿ ಗಾಂಜಾ, ಸೇರಿದಂತೆ ಹಲವು ನಿಷೇಧಿತ ವಸ್ತುಗಳು ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದಾವಣಗೆರೆ ಎಸ್ ಪಿ ಉಮಾ ಪ್ರಶಾಂತ್ ಪ್ರತಿಕ್ರಿಯೆ ನೀಡಿದ್ದಾರೆ.

ಕಾರಗೃಹದಲ್ಲಿ ಗಾಂಜಾ, ಸೇರಿದಂತೆ ಹಲವು ನಿಷೇಧಿತ ವಸ್ತುಗಳು ಪತ್ತೆ ಪ್ರಕರಣ; ದಾವಣಗೆರೆ ಎಸ್​ಪಿ ಹೇಳಿದ್ದಿಷ್ಟು
ದಾವಣಗೆರೆ ಎಸ್ಪಿ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Feb 06, 2024 | 9:27 PM

Share

ದಾವಣಗೆರೆ, ಫೆ.06: ಕಾರಗೃಹದಲ್ಲಿ ಗಾಂಜಾ, ಸೇರಿದಂತೆ ಹಲವು ನಿಷೇಧಿತ ವಸ್ತುಗಳು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ದಾವಣಗೆರೆ ಎಸ್​ಪಿ(Davangere SP) ಉಮಾ ಪ್ರಶಾಂತ್, ‘ ಜೈಲ್ ಆಫೀಸ್​ನಲ್ಲಿದ್ದ ಪುಸ್ತಕದಲ್ಲಿ 3.5 ಗ್ರಾಂ ಗಾಂಜಾ ಪತ್ತೆಯಾಗಿದೆ. ಈ ಸಂಬಂಧ ಬಸವನಗರ ಪೊಲೀಸ್ ಠಾಣೆಯಲ್ಲಿ ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳ ವಿರುದ್ಧ ಜೊತೆಗೆ ಜೈಲು ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧವೂ ದೂರು ದಾಖಲಾಗಿದೆ. ಈ ಕುರಿತು ತನಿಖೆ ಬಳಿಕ ಸಂಪೂರ್ಣ ಮಾಹಿತಿ ತಿಳಿಯಲಿದೆ. 2 ಗುಂಪುಗಳ ಗಲಾಟೆಗೂ ಇದಕ್ಕೂ ಸಂಬಂಧ ಕಂಡು ಬರುತ್ತಿಲ್ಲ. ಆ ಗಲಾಟೆ ಕುರಿತು ಈಗಾಗಲೇ ಕೇಸ್ ದಾಖಲಾಗಿದೆ ಎಂದರು.

ಮೈಸೂರು ಕಾರಾಗೃಹದಲ್ಲಿ ಪೊಲೀಸ್​ ಅಧಿಕಾರಿಗಳ ದಿಢೀರ್​ ದಾಳಿ

ಮೈಸೂರು: ಕಾರಾಗೃಹದಲ್ಲಿ ಪೊಲೀಸ್​ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ​ದ್ದಾರೆ. ಪೊಲೀಸರ ತಪಾಸಣೆ ವೇಳೆ ಚಾಕು, ನಗದು, ಮೊಬೈಲ್ ಚಾರ್ಜರ್​​ಗಳು ಪತ್ತೆಯಾಗಿದೆ. ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಸೂಚನೆ ಮೇರೆಗೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಎಂ.ಮುತ್ತುರಾಜು, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಎಸ್.ಜಾಹ್ನವಿ, ಎಸಿಪಿ, ಪಿಐ, ಪಿಎಸ್​ಐಗಳು ಹಾಗೂ ಶ್ವಾನದಳದಿಂದ ಜೈಲಿನಲ್ಲಿ ಶೋಧ ನಡೆಸಲಾಗಿತ್ತು. ಈ ಬಗ್ಗೆ ಪರಿಶೀಲಿಸಿ ಕಾನೂನು ರೀತ್ಯಾ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ:ಧಾರವಾಡ ಕಾರಾಗೃಹದಲ್ಲಿ ಕೈದಿ ಮತ್ತು ಜೈಲು ಸಿಬ್ಬಂದಿ ನಡುವೆ ಹೊಡೆದಾಟ

ಕಳೆದ ಅಕ್ಟೋಬರ್​ನಲ್ಲಿ ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೈದಿ ಹಾಗೂ ಜೈಲು ಸಿಬ್ಬಂದಿ ನಡುವೆ ಹೊಡೆದಾಟ ನಡೆದಿತ್ತು. ಜೈಲು ಸಿಬ್ಬಂದಿ ಮೋಹನ ಸಿದ್ದಪ್ಪ ಬಡಿಗೇರ ಹಾಗೂ ಅನೇಕ ದಿನಗಳಿಂದ ಕಾರಗೃಹದಲ್ಲಿ ಕೈದಿಯಾಗಿರುವ ಪ್ರಶಾಂತ ಅಲಿಯಾಸ್ ಪಾಚು ಗಾಯಗೊಂಡಿದ್ದರು. ಜೈಲಿನಲ್ಲಿ ಚಾಕು ಇಲ್ಲದಿರುವ ಹಿನ್ನೆಲೆ ಬಾಚಣಿಗೆಯನ್ನೇ ಚಾಕೂವಿನಂತೆ ಬಳಸಿ ಸಿಬ್ಬಂದಿ ಮೇಲೆ ಕೈದಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ