Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರದ ಮೂರ್ತಿ ಮಾದರಿಯಲ್ಲೇ ಹನುಮಾನ್ ವಿಗ್ರಹ ಕೆತ್ತನೆ: ಅರುಣ್ ಯೋಗಿರಾಜ್ ಕೈಯಲ್ಲಿ ಅರಳಿದ ಶಿಲೆ

ದಾವಣಗೆರೆಯ ಹಳೇ ಕುಂದುವಾಡದಲ್ಲಿ 5.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಹನುಮಾನ್ ಮತ್ತು ಬಸವೇಶ್ವರ ದೇವಸ್ಥಾನಗಳು ಉದ್ಘಾಟನೆಗೆ ಸಜ್ಜಾಗಿವೆ. ಅಯೋಧ್ಯೆಯ ರಾಮಮಂದಿರದ ವಿಗ್ರಹದ ಮಾದರಿಯಲ್ಲಿರುವ ಹನುಮನ ವಿಗ್ರಹ ಮುಖ್ಯ ಆಕರ್ಷಣೆಯಾಗಿದೆ. ಇನ್ನು ಗ್ರಾಮದಲ್ಲಿ 41 ದಿನಗಳ ಕಾಲ ಮದ್ಯ ಮತ್ತು ಮಾಂಸ ನಿಷೇಧಿಸಲಾಗಿದೆ.

ರಾಮಮಂದಿರದ ಮೂರ್ತಿ ಮಾದರಿಯಲ್ಲೇ ಹನುಮಾನ್ ವಿಗ್ರಹ ಕೆತ್ತನೆ: ಅರುಣ್ ಯೋಗಿರಾಜ್ ಕೈಯಲ್ಲಿ ಅರಳಿದ ಶಿಲೆ
ರಾಮಮಂದಿರದ ಮೂರ್ತಿ ಮಾದರಿಯಲ್ಲೇ ಹನುಮಾನ್ ವಿಗ್ರಹ ಕೆತ್ತನೆ: ಅರುಣ್ ಯೋಗಿರಾಜ್ ಕೈಯಲ್ಲಿ ಅರಳಿದ ಶಿಲೆ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಗಂಗಾಧರ​ ಬ. ಸಾಬೋಜಿ

Updated on:Feb 15, 2025 | 5:20 PM

ದಾವಣಗೆರೆ, ಫೆಬ್ರವರಿ 15: ಬೆಣ್ಣೆನಗರಿ ದಾವಣಗೆರೆಯಲ್ಲಿ (Davanagere) ಹಲವು ಧಾರ್ಮಿಕ ಕೇಂದ್ರಗಳಿವೆ. ಈ ಐತಿಹಾಸಿಕ ಧಾರ್ಮಿಕ ಶ್ರದ್ದಾ ಕೇಂದ್ರಗಳಿಗೆ ಇದೀಗ ಮತ್ತೊಂದು ಭವ್ಯ ಮಂದಿರ ಸೇರ್ಪಡೆಯಾಗುತ್ತಿದೆ. ಅದರಲ್ಲೂ ವಿಶೇಷ ಆಕರ್ಷಣೆಯಾಗಿ ಹಿಂದೂಗಳ ಶ್ರದ್ದಾ ಕೇಂದ್ರ ಅಯೋಧ್ಯೆ ರಾಮಮಂದಿರದ ಮೂರ್ತಿ ಮಾದರಿಯಲ್ಲೇ ವಿಗ್ರಹ ಕೆತ್ತನೆಯಾಗಿದ್ದು, ಭಕ್ತರನ್ನೂ ಸೆಳೆಯುತ್ತಿದೆ.‌ ಕೇಸರಿ ನಂದನನ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆ ಇಡೀ ಊರಿಗೆ ಊರೇ ಮದ್ಯ, ಮಾಂಸ ಸೇವನೆಗೆ ನಿಷೇಧ ಏರಿಕೊಂಡಿದ್ದು, ವಿಶೇಷವಾಗಿ ಗಮನ ಸೆಳೆಯುತ್ತಿದೆ. ಆ ಊರು ಯಾವುದು ಅಂತೀರಾ ಈ ಸ್ಟೋರಿ ಓದಿ.

ಅಯೋಧ್ಯೆಯ ಬಾಲರಾಮನ ವಿಗ್ರಹ ಇಡೀ ದೇಶದ ಗಮನ ಸೆಳೆದಿದ್ದು ಗೊತ್ತೆ ಇದೆ. ಈ ಕೈಚಳಕದ ಹಿಂದೆ ನಮ್ಮ ಕರ್ನಾಟಕದ ಮೈಸೂರಿನವರೇ ಆದ ಅರುಣ್ ಯೋಗಿರಾಜ್ ಅವರು ಇದ್ದಿದ್ದು ಕರ್ನಾಟಕಕ್ಕೆ ಹೆಮ್ಮೆಯ ಸಂಗತಿ. ಹೀದೆ ಕಲಾಕಾರ ಅರುಣ್ ಯೋಗಿರಾಜ್ ಅವರ ಅದ್ಭುತ ಕೈ ಚಳಕದಿಂದ ಮತ್ತೊಂದು ವಿಗ್ರಹ ಕಣ್ಮನ ಸೆಳೆಯುವಂತಿದೆ. ಈ ಒಂದು ವಿಗ್ರಹ ಸ್ಥಾಪನೆ ಆಗುತ್ತಿರುವುದು ಬೇರೆಲ್ಲೂ ಅಲ್ಲ ನಮ್ಮ ಬೆಣ್ಣೆನಗರಿ ಖ್ಯಾತಿಯ ದಾವಣಗೆರೆಯಲ್ಲಿ.

ಇದನ್ನೂ ಓದಿ: ಸಿದ್ಧಗಂಗಾ ಶ್ರೀ ಅವರನ್ನು ರಾಷ್ಟ್ರೀಯ ಸಂತ ಎಂದು ಘೋಷಣೆ ಮಾಡಲಿ: ಜಯಮೃತ್ಯುಂಜಯ ಸ್ವಾಮೀಜಿ

ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ಈಗಾಗಲೇ ಈ ಒಂದು ಅದ್ಭುತ ವಿಗ್ರಹ ಆಗಮಿಸಿದೆ. ಶ್ರೀ ಬಸವ ಆಂಜನೇಯ ಅಭಿವೃದ್ದಿ ಸಮಿತಿಯಿಂದ ಗ್ರಾಮದವರೇ ಹಣ ಹಾಕಿ ಶಿಲೆಯಲ್ಲೇ ಐದುವರೆ ಕೋಟಿ ರೂ ವೆಚ್ಚದಲ್ಲಿ ಶ್ರೀ ಆಂಜನೇಯ, ಶ್ರೀ ಬಸವೇಶ್ವರ ದೇವಸ್ಥಾನ ನಿರ್ಮಾಣ ಮಾಡಿದ್ದಾರೆ. ಪವನ ಸುತ, ವಾಯುಪುತ್ರ, ವಾನರ ಶ್ರೇಷ್ಠ, ಕೇಸರಿನಂದನ, ರಾಮಧೂತ, ಅಂಜನಿ ಪುತ್ರ, ರಾಮನ ಬಂಟ ಎಂದೆಲ್ಲ ಕರೆಸಿಕೊಳ್ಳುವ ಊರ ಕಾಯುವ ಆಂಜನೇಯನಿಗೆ ಭಕ್ತ ಗಣ ಕೇಳಬೇಕೆ, ಅತೀ ಹೆಚ್ಚು ಭಕ್ತ ಗಣ ಹೊಂದಿರುವ ಹನುಮನ ಭವ್ಯ ದೇವಸ್ಥಾನ ಉದ್ಘಾಟನೆಗೆ ಸಿದ್ದವಾಗಿದೆ.

Temple

ಶ್ರೀ ಆಂಜನೇಯ ದೇವಸ್ಥಾನಕ್ಕೆ ವಿಶೇಷವಾಗಿ ಕೆತ್ತನೆಯಾಗಿರುವ ವಿಗ್ರಹ ಪ್ರಮುಖ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ಅಯೋಧ್ಯೆಯ ಬಾಲರಾಮನ ವಿಗ್ರಹ ಹೋಲುವ ವಿಗ್ರಹವನ್ನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆ ಮಾಡಿ ಕೊಟ್ಟಿರುವುದು ಭಕ್ತಗಣವನ್ನ ಕೈ ಬೀಸಿ ಕರೆಯುವಂತೆ ಮಾಡಿದೆ. ಐದುವರೆ ಕೋಟಿ ರೂ. ವೆಚ್ಚದಲ್ಲಿ ಆಕರ್ಷಕ ದೇಗುಲ, ವಿಶಾಲ ಆವರಣ ಹೊಂದಿರುವ ದೇವಸ್ಥಾನವನ್ನ ಸಂಪೂರ್ಣವಾಗಿ ಶಿಲೆಯಲ್ಲೆ ನಿರ್ಮಿಸಲಾಗಿದೆ.

ಪಕ್ಕದಲ್ಲೇ ಬಸವೇಶ್ವರ ದೇವಸ್ಥಾನವನ್ನ ಅಚ್ಚುಕಟ್ಟಾಗಿ, ಸುಂದರವಾಗಿ ಕಟ್ಟಲಾಗಿದೆ. ಈ ಎರಡು ದೇಗುಲಗಳನ್ನ ಶಿಲ್ಪಿಗಳಾದ ತಮಿಳುನಾಡಿನ ಎಸ್ ವಡಿವೇಲು, ಕೆಆರ್ ಮಾರಿಯಪ್ಪನ್ ಕಟ್ಟಿಕೊಟ್ಟಿದ್ದಾರೆ. ಗ್ರಾಮಸ್ಥರು, ದಾನಿಗಳಿಂದ ದೇಣಿಗೆ ಪಡೆದು ಗ್ರಾಮದ ಮುಖಂಡರು, ಯುವಕರ ಸತತ ಪರಿಶ್ರಮದಿಂದ ದೇವಸ್ಥಾನಗಳು ನಿರ್ಮಾಣಗೊಂಡಿವೆ. ಮುಜುರಾಯಿ ಇಲಾಖೆಗೆ ದೇವಸ್ಥಾನ ಸೇರಿದ್ದರು, ಇಲಾಖೆ ನಯಾಪೈಸೆ ನೀಡಿಲ್ಲ ಎಂದು ಗ್ರಾಮಸ್ಥರ ಆರೋಪವಾಗಿದೆ. ಆದರು ಸಹ ಛಲ ಬಿಡದೇ ದೇಣಿಗೆ ಸಂಗ್ರಹಿಸಿ ಅದ್ಭುತವಾಗಿ ದೇವಸ್ಥಾನ ನಿರ್ಮಾಣ ಮಾಡಲಾಗಿದೆ.

Dvg

ಇದೇ 16-17ರಂದು ಈ ಎರಡು ದೇವಸ್ಥಾನಗಳು ಅದ್ದೂರಿಯಾಗಿ ಉದ್ಘಾಟನೆಗೆ ಸಿದ್ದವಾಗಿದೆ, ಐದು ದಿನಗಳ ಕಾಲ ಮನೆಯಲ್ಲಿ ಯಾರು ಸಹ ಅಡುಗೆ ಮಾಡುವಂತಿಲ್ಲ. ಇಡೀ ಗ್ರಾಮಸ್ಥರಿಗೆ, ಭಕ್ತಾದಿಗಳಿಗೆ ಐದು ದಿನ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಆಂಧ್ರಪ್ರದೇಶದ ತಿರುಪತಿ ದೇವಸ್ಥಾನ ಹಾಗೂ ಪೂರ್ವ ಗೋಧಾವರಿಯ ಪಂಡಿತರಿಂದ ದೇವ ಯಜ್ಞ, ವಿವಿಧ ಹೋಮಗಳ ಮೂಲಕ ದೇವರ ಪ್ರಾಣ ಪ್ರತಿಷ್ಠಾಪನೆ ಜರುಗಲಿವೆ. ಈ ಹಿನ್ನಲೆ ಗ್ರಾಮದಲ್ಲಿ 41 ದಿ‌ನಗಳ ಕಾಲ ಮದ್ಯ, ಮಾಂಸ ಮಾರಾಟ, ಸೇವನೆ ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ.

ಇದನ್ನೂ ಓದಿ: ಕನಿಷ್ಠ ವೇತನ ಜಾರಿ ಆಗಲೆಂದು ಹರಕೆ ಹೊತ್ತು ಅಯ್ಯಪ್ಪಸ್ವಾಮಿ ಮಾಲೆ ಧರಿಸಿದ ಮುಸ್ಲಿಂ ಯುವಕ

ಒಟ್ಟಾರೆ ವಾಯುಪುತ್ರನ ಈ ಸುಂದರ ಅದ್ಭುತ ವಿಗ್ರಹ ನೋಡಲು ಜನರು ತಂಡೋಪ ತಂಡವಾಗಿ ಬಂದು ವೀಕ್ಷಣೆ ಮಾಡ್ತಿದ್ದಾರೆ. ವೈದ್ಯರಲ್ಲಿ ಗುಣಮುಖವಾದದ್ದು ಈ ಆಂಜನೇಯ ದೇವಸ್ಥಾನದಲ್ಲಿ ಹುಷಾರಾಗಿದೆ ಎಂಬುದು ಜನರ ನಂಬಿಕೆಯಾಗಿದೆ. ಅಷ್ಟರ ಮಟ್ಟಿಗೆ ಮಹಿಮೆ ಹೊಂದಿದೆ. ಹಲವು ಪವಾಡಗಳ ಮೂಲಕ ಹಳೇ ಕುಂದುವಾಡ ದೇವಾಲಯ ಸಾಕ್ಷಿಯಾಗಿದ್ದು, ಊರ ಕಾಯೋ ನಂಬಿಕೆಯ ಹನುಮನಿಗಾಗಿ ಗ್ರಾಮದ ಜನ ಮದ್ಯ ಮಾಂಸ ತ್ಯಜಿಸಿರೋದು ನಿಜಕ್ಕೂ ಮೆಚ್ಚುವಂತದ್ದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:16 pm, Sat, 15 February 25

ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್