AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರೋದು 4 ಆದ್ರೆ 35 ವಿದ್ಯಾರ್ಥಿನಿಯರ ಹಾಜರಾತಿ ತೋರಿಸಿ ಸರ್ಕಾರಕ್ಕೆ ವಂಚನೆ, ತಹಶೀಲ್ದಾರ್ ದಾಳಿಯಿಂದ ಅಕ್ರಮ ಬಯಲು

ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ ಮೇಲೆ ಪೊಲೀಸ್ ಸಿಬ್ಬಂದಿ ಸಹಿತ ಚನ್ನಗಿರಿ ತಹಶೀಲ್ದಾರ್ ಪಟ್ಟರಾಜಗೌಡ ಅನಿರೀಕ್ಷಿತ ದಾಳಿ ನಡೆಸಿದಾಗ ಅಕ್ರಮ ಬಯಲಾಗಿದೆ. ಕೇವಲ ನಾಲ್ಕು ಜನ ವಿದ್ಯಾರ್ಥಿನಿಯರಿಗೆ ಊಟ-ವಸತಿ ನೀಡಿ 35 ಜನ ವಿದ್ಯಾರ್ಥಿಗಳ ಹಾಜರಾತಿ ತೋರಿಸಿ ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದಾರೆ.

ಇರೋದು 4 ಆದ್ರೆ 35 ವಿದ್ಯಾರ್ಥಿನಿಯರ ಹಾಜರಾತಿ ತೋರಿಸಿ ಸರ್ಕಾರಕ್ಕೆ ವಂಚನೆ, ತಹಶೀಲ್ದಾರ್ ದಾಳಿಯಿಂದ ಅಕ್ರಮ ಬಯಲು
ಇರೋದು 4 ವಿದ್ಯಾರ್ಥಿನಿಯರು ಆದ್ರೆ 35 ವಿದ್ಯಾರ್ಥಿನಿಯರ ಹಾಜರಾತಿ ಸರ್ಕಾರಕ್ಕೆ ತೋರಿಸಿ ವಂಚನೆ, ತಹಶೀಲ್ದಾರ್ ದಾಳಿಯಿಂದ ಅಕ್ರಮ ಬಯಲು
TV9 Web
| Updated By: ಆಯೇಷಾ ಬಾನು|

Updated on:Dec 15, 2021 | 1:45 PM

Share

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿಯ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ ಸಿಬ್ಬಂದಿಯಿಂದ ವಂಚನೆ ನಡೆದಿದೆ. ನಾಲ್ವರು ವಿದ್ಯಾರ್ಥಿನಿಯರಿಗೆ ಮಾತ್ರ ಊಟ, ವಸತಿ ನೀಡಿ 35 ವಿದ್ಯಾರ್ಥಿನಿಯರ ಹಾಜರಾತಿ ಸರ್ಕಾರಕ್ಕೆ ತೋರಿಸಿ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ ಸಿಬ್ಬಂದಿ ವಂಚನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ ಮೇಲೆ ಪೊಲೀಸ್ ಸಿಬ್ಬಂದಿ ಸಹಿತ ಚನ್ನಗಿರಿ ತಹಶೀಲ್ದಾರ್ ಪಟ್ಟರಾಜಗೌಡ ಅನಿರೀಕ್ಷಿತ ದಾಳಿ ನಡೆಸಿದಾಗ ಅಕ್ರಮ ಬಯಲಾಗಿದೆ. ಕೇವಲ ನಾಲ್ಕು ಜನ ವಿದ್ಯಾರ್ಥಿನಿಯರಿಗೆ ಊಟ-ವಸತಿ ನೀಡಿ 35 ಜನ ವಿದ್ಯಾರ್ಥಿಗಳ ಹಾಜರಾತಿ ತೋರಿಸಿ ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದಾರೆ. ಹಾಸ್ಟೆಲ್ನಲ್ಲಿ ಕೇವಲ ನಾಲ್ಕು ಮಕ್ಕಳು ಮಾತ್ರ ಕಂಡು ಬಂದಿದ್ದಾರೆ. ಆಗ ಅಧಿಕಾರಿಗಳು ವಿದ್ಯಾರ್ಥಿನಿಯರು ಓದುತ್ತಿದ್ದ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಹಾಸ್ಟೆಲ್ ಸಿಬ್ಬಂದಿ ಸರಿಯಾಗಿ ಊಟ ತಿಂಡಿ‌ ಕೊಡದೆ ಕಿರುಕುಳ ನೀಡುತ್ತಿರುವುದಾಗಿ ತಹಶೀಲ್ದಾರ್ ಮುಂದೆ ವಿದ್ಯಾರ್ಥಿನಿಯರು ಬಾಯಿ ಬಿಟ್ಟಿದ್ದಾರೆ.

ಬೆಳಿಗ್ಗೆ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ ಮೇಲೆ ದಾಳಿ ಮಾಡಿದ್ವಿ. ಇಲ್ಲಿ 35 ಜನ ವಿದ್ಯಾರ್ಥಿಗಳಿದ್ದಾರೆಂದು ದಾಖಲೆಯಲ್ಲಿದೆ ಆದ್ರೆ 4 ವಿದ್ಯಾರ್ಥಿನಿಯರು ಮಾತ್ರ ಇದ್ದಾರೆ. ಅದಕ್ಕೆ ಬೇಕಾದ ಯಾವುದೇ ರೇಷನ್ ಆಗಲಿ ಸಾಮಾಗ್ರಿಗಳಾಗಲಿ ಖರೀದಿ ಮಾಡಿರುವುದ ಕಂಡು ಬಂದಿಲ್ಲ. ಹಲವಾರು ದಿನಗಳಿಂದ ಇದೇ ರೀತಿ ನಡೆಯುತ್ತಿದೆ. ಇವರು ವಂಚನೆ ಮಾಡಿದ್ದಾರೆ. ವಂಚನೆ ಮಾಡಿದ ಹಿನ್ನೆಲೆಯಲ್ಲಿ ಇವರ ವಿರುದ್ಧ ಕ್ರಮಕ್ಕೆ ನಾನು ಇಲಾಖೆಯ ಮೇಲಾಧಿಕಾರಿಗಳಿಗೆ ಸುಧೀರ್ಘವಾಗಿ ದಾಖಲೆ ಸಹಿತ ಪತ್ರವನ್ನು ಬರೆಯುತ್ತೇನೆ. ಆದಷ್ಟು ಬೇಗ ಇವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ನಾನು ಆಗ್ರಹಿಸುತ್ತೇನೆ ಎಂದು ದಾಳಿ ಬಳಿಕ ತಹಶೀಲ್ದಾರ್ ತಿಳಿಸಿದ್ರು.

dvg hostel cheat

ವಿದ್ಯಾರ್ಥಿನಿಯರ ಬಳಿ ಮಾಹಿತಿ ಪಡೆಯುತ್ತಿರುವ ತಹಶೀಲ್ದಾರ್

dvg hostel cheat

ಕೆರೆಬಿಳಚಿಯ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌

ಇದನ್ನೂ ಓದಿ: Semiconductor manufacturing PLI: ಸೆಮಿಕಂಡಕ್ಟರ್ ಉತ್ಪಾದನೆಗೆ ಕೇಂದ್ರದಿಂದ 76 ಸಾವಿರ ಕೋಟಿ ರೂ.

Published On - 1:43 pm, Wed, 15 December 21

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?