AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರೋದು 4 ಆದ್ರೆ 35 ವಿದ್ಯಾರ್ಥಿನಿಯರ ಹಾಜರಾತಿ ತೋರಿಸಿ ಸರ್ಕಾರಕ್ಕೆ ವಂಚನೆ, ತಹಶೀಲ್ದಾರ್ ದಾಳಿಯಿಂದ ಅಕ್ರಮ ಬಯಲು

ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ ಮೇಲೆ ಪೊಲೀಸ್ ಸಿಬ್ಬಂದಿ ಸಹಿತ ಚನ್ನಗಿರಿ ತಹಶೀಲ್ದಾರ್ ಪಟ್ಟರಾಜಗೌಡ ಅನಿರೀಕ್ಷಿತ ದಾಳಿ ನಡೆಸಿದಾಗ ಅಕ್ರಮ ಬಯಲಾಗಿದೆ. ಕೇವಲ ನಾಲ್ಕು ಜನ ವಿದ್ಯಾರ್ಥಿನಿಯರಿಗೆ ಊಟ-ವಸತಿ ನೀಡಿ 35 ಜನ ವಿದ್ಯಾರ್ಥಿಗಳ ಹಾಜರಾತಿ ತೋರಿಸಿ ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದಾರೆ.

ಇರೋದು 4 ಆದ್ರೆ 35 ವಿದ್ಯಾರ್ಥಿನಿಯರ ಹಾಜರಾತಿ ತೋರಿಸಿ ಸರ್ಕಾರಕ್ಕೆ ವಂಚನೆ, ತಹಶೀಲ್ದಾರ್ ದಾಳಿಯಿಂದ ಅಕ್ರಮ ಬಯಲು
ಇರೋದು 4 ವಿದ್ಯಾರ್ಥಿನಿಯರು ಆದ್ರೆ 35 ವಿದ್ಯಾರ್ಥಿನಿಯರ ಹಾಜರಾತಿ ಸರ್ಕಾರಕ್ಕೆ ತೋರಿಸಿ ವಂಚನೆ, ತಹಶೀಲ್ದಾರ್ ದಾಳಿಯಿಂದ ಅಕ್ರಮ ಬಯಲು
Follow us
TV9 Web
| Updated By: ಆಯೇಷಾ ಬಾನು

Updated on:Dec 15, 2021 | 1:45 PM

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿಯ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ ಸಿಬ್ಬಂದಿಯಿಂದ ವಂಚನೆ ನಡೆದಿದೆ. ನಾಲ್ವರು ವಿದ್ಯಾರ್ಥಿನಿಯರಿಗೆ ಮಾತ್ರ ಊಟ, ವಸತಿ ನೀಡಿ 35 ವಿದ್ಯಾರ್ಥಿನಿಯರ ಹಾಜರಾತಿ ಸರ್ಕಾರಕ್ಕೆ ತೋರಿಸಿ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ ಸಿಬ್ಬಂದಿ ವಂಚನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ ಮೇಲೆ ಪೊಲೀಸ್ ಸಿಬ್ಬಂದಿ ಸಹಿತ ಚನ್ನಗಿರಿ ತಹಶೀಲ್ದಾರ್ ಪಟ್ಟರಾಜಗೌಡ ಅನಿರೀಕ್ಷಿತ ದಾಳಿ ನಡೆಸಿದಾಗ ಅಕ್ರಮ ಬಯಲಾಗಿದೆ. ಕೇವಲ ನಾಲ್ಕು ಜನ ವಿದ್ಯಾರ್ಥಿನಿಯರಿಗೆ ಊಟ-ವಸತಿ ನೀಡಿ 35 ಜನ ವಿದ್ಯಾರ್ಥಿಗಳ ಹಾಜರಾತಿ ತೋರಿಸಿ ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದಾರೆ. ಹಾಸ್ಟೆಲ್ನಲ್ಲಿ ಕೇವಲ ನಾಲ್ಕು ಮಕ್ಕಳು ಮಾತ್ರ ಕಂಡು ಬಂದಿದ್ದಾರೆ. ಆಗ ಅಧಿಕಾರಿಗಳು ವಿದ್ಯಾರ್ಥಿನಿಯರು ಓದುತ್ತಿದ್ದ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಹಾಸ್ಟೆಲ್ ಸಿಬ್ಬಂದಿ ಸರಿಯಾಗಿ ಊಟ ತಿಂಡಿ‌ ಕೊಡದೆ ಕಿರುಕುಳ ನೀಡುತ್ತಿರುವುದಾಗಿ ತಹಶೀಲ್ದಾರ್ ಮುಂದೆ ವಿದ್ಯಾರ್ಥಿನಿಯರು ಬಾಯಿ ಬಿಟ್ಟಿದ್ದಾರೆ.

ಬೆಳಿಗ್ಗೆ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ ಮೇಲೆ ದಾಳಿ ಮಾಡಿದ್ವಿ. ಇಲ್ಲಿ 35 ಜನ ವಿದ್ಯಾರ್ಥಿಗಳಿದ್ದಾರೆಂದು ದಾಖಲೆಯಲ್ಲಿದೆ ಆದ್ರೆ 4 ವಿದ್ಯಾರ್ಥಿನಿಯರು ಮಾತ್ರ ಇದ್ದಾರೆ. ಅದಕ್ಕೆ ಬೇಕಾದ ಯಾವುದೇ ರೇಷನ್ ಆಗಲಿ ಸಾಮಾಗ್ರಿಗಳಾಗಲಿ ಖರೀದಿ ಮಾಡಿರುವುದ ಕಂಡು ಬಂದಿಲ್ಲ. ಹಲವಾರು ದಿನಗಳಿಂದ ಇದೇ ರೀತಿ ನಡೆಯುತ್ತಿದೆ. ಇವರು ವಂಚನೆ ಮಾಡಿದ್ದಾರೆ. ವಂಚನೆ ಮಾಡಿದ ಹಿನ್ನೆಲೆಯಲ್ಲಿ ಇವರ ವಿರುದ್ಧ ಕ್ರಮಕ್ಕೆ ನಾನು ಇಲಾಖೆಯ ಮೇಲಾಧಿಕಾರಿಗಳಿಗೆ ಸುಧೀರ್ಘವಾಗಿ ದಾಖಲೆ ಸಹಿತ ಪತ್ರವನ್ನು ಬರೆಯುತ್ತೇನೆ. ಆದಷ್ಟು ಬೇಗ ಇವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ನಾನು ಆಗ್ರಹಿಸುತ್ತೇನೆ ಎಂದು ದಾಳಿ ಬಳಿಕ ತಹಶೀಲ್ದಾರ್ ತಿಳಿಸಿದ್ರು.

dvg hostel cheat

ವಿದ್ಯಾರ್ಥಿನಿಯರ ಬಳಿ ಮಾಹಿತಿ ಪಡೆಯುತ್ತಿರುವ ತಹಶೀಲ್ದಾರ್

dvg hostel cheat

ಕೆರೆಬಿಳಚಿಯ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌

ಇದನ್ನೂ ಓದಿ: Semiconductor manufacturing PLI: ಸೆಮಿಕಂಡಕ್ಟರ್ ಉತ್ಪಾದನೆಗೆ ಕೇಂದ್ರದಿಂದ 76 ಸಾವಿರ ಕೋಟಿ ರೂ.

Published On - 1:43 pm, Wed, 15 December 21

ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?