AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಹೈಡೋಸ್ ಇಂಜೆಕ್ಷನ್ ನೀಡಿ ಪತ್ನಿಯನ್ನೇ ಕೊಂದ ವೈದ್ಯ; 9 ತಿಂಗಳ ಬಳಿಕ ಸತ್ಯ ಬಯಲು

ಡಾ. ಚನ್ನೇಶಪ್ಪ ಶವವನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗದೆ ಮನೆಗೆ ತಂದಿದ್ದ. ಅಲ್ಲದೇ ಶಿಲ್ಪಾಳ ಎಡ ಭುಜದ ಮೇಲೆ ಸೂಜಿಯಿಂದ ಚುಚ್ಚಿದ ಗುರುತುಗಳು, ಬಾಯಿಂದ ರಕ್ತ ಮಿಶ್ರಿತ ನೊರೆ ಬಂದಿದ್ದರಿಂದ ಅನುಮಾನಗೊಂಡಿದ್ದ ಪೋಷಕರು, ನ್ಯಾಮತಿ ಠಾಣೆಯಲ್ಲಿ ಡಾ.ಚನ್ನೇಶಪ್ಪ ವಿರುದ್ಧ ದೂರು ದಾಖಲಿಸಿದ್ದರು.

ದಾವಣಗೆರೆ: ಹೈಡೋಸ್ ಇಂಜೆಕ್ಷನ್ ನೀಡಿ ಪತ್ನಿಯನ್ನೇ ಕೊಂದ ವೈದ್ಯ; 9 ತಿಂಗಳ ಬಳಿಕ ಸತ್ಯ ಬಯಲು
ಡಾ. ಚನ್ನೇಶಪ್ಪ ಮತ್ತು ಶಿಲ್ಪಾ
TV9 Web
| Edited By: |

Updated on:Oct 24, 2021 | 1:20 PM

Share

ದಾವಣಗೆರೆ: ಕಳೆದ 9 ತಿಂಗಳ ಹಿಂದೆ ಗೃಹಿಣಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ತಿರುವು ಸಿಕ್ಕಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ರಾಮೇಶ್ವರ ಗ್ರಾಮದಲ್ಲಿ ವೈದ್ಯ ಪತಿಯೇ ಹೈಡೋಸ್ ಇಂಜೆಕ್ಷನ್ ನೀಡಿ ಪತ್ನಿ ಹತ್ಯೆಗೈದಿರುವ ಸತ್ಯ ಬೆಳಕಿಗೆ ಬಂದಿದೆ. ಫೆಬ್ರವರಿ 11ರಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಶಿಲ್ಪಾ(36)ಳನ್ನು ಪತಿಯೇ ಕೊಲೆ ಮಾಡಿದ್ದಾನೆ.

ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಶಿಲ್ಪ ಎಂಬುವವರನ್ನು ಮದುವೆ ಮಾಡಿಕೊಂಡಿದ್ದ ಡಾ. ಚನ್ನೇಶಪ್ಪ, ರಾಮೇಶ್ವರ ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ. ಡಾ.ಚನ್ನೇಶಪ್ಪ ಕುಡಿತ ಮತ್ತು ಜೂಜಿನ ದಾಸನಾಗಿದ್ದು, ವೈದ್ಯನಾಗಿ ವಾಮಾಚಾರದಲ್ಲಿಯೂ ನಂಬಿಕೆ ಹೊಂದಿದ್ದ.

ಪತ್ನಿಯನ್ನು ಕೊಲೆ ಮಾಡಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದ ಡಾ. ಚನ್ನೇಶಪ್ಪ, ಕಳೆದ ಫೆಬ್ರುವರಿ 11ಕ್ಕೆ ಶಿಲ್ಪಾಗೆ ಲೋ ಬಿಪಿಯಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದೇನೆ ಎಂದು ತಿಳಿಸಿದ್ದ. ಇದಾದ ಬಳಿಕ ಮಾರ್ಗ ಮಧ್ಯೆ ನಿಮ್ಮ ಮಗಳು ತೀರಿಕೊಂಡಿದ್ದಾಳೆ ಎಂದು ಶಿಲ್ಪಾ ಪೋಷಕರಿಗೆ ತಿಳಿಸಿದ್ದಾನೆ.

ಡಾ. ಚನ್ನೇಶಪ್ಪ ಶವವನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗದೆ ಮನೆಗೆ ತಂದಿದ್ದ. ಅಲ್ಲದೇ ಶಿಲ್ಪಾಳ ಎಡ ಭುಜದ ಮೇಲೆ ಸೂಜಿಯಿಂದ ಚುಚ್ಚಿದ ಗುರುತುಗಳು, ಬಾಯಿಂದ ರಕ್ತ ಮಿಶ್ರಿತ ನೊರೆ ಬಂದಿದ್ದರಿಂದ ಅನುಮಾನಗೊಂಡಿದ್ದ ಪೋಷಕರು, ನ್ಯಾಮತಿ ಠಾಣೆಯಲ್ಲಿ ಡಾ.ಚನ್ನೇಶಪ್ಪ ವಿರುದ್ಧ ದೂರು ದಾಖಲಿಸಿದ್ದರು.

ಪೋಸ್ಟ್ ಮಾರ್ಟಮ್ ರಿಪೋರ್ಟ್ ಬರುತ್ತಲೇ ದೇಹದಲ್ಲಿನ ಗುರುತುಗಳ ಬಗ್ಗೆ ಎಫ್​ಎಸ್​ಎಲ್​ಗೂ ಕಳಿಸಿದ್ದ ಪೊಲೀಸರು.ಇವೆರಡೂ ವರದಿ ಮ್ಯಾಚ್ ಆಗಿದ್ದ ಕಾರಣ ಇದು ಕೊಲೆ ಪ್ರಕರಣ ಎಂಬುವುದು ಬೆಳಕಿಗೆ ಬಂದಿದೆ. ಜೀವ ಉಳಿಸಬೇಕಾದ ವೈದ್ಯನೇ ತನ್ನ ಹೆಂಡತಿಯನ್ನು ಕೊಲೆ ಮಾಡಿದ್ದು ಎಫ್​ಎಸ್​ಎಲ್​ ವರದಿಯಿಂದ ಪತ್ತೆಯಾಗಿದೆ.

ಇದನ್ನೂ ಓದಿ: ಹಳೇ ದ್ವೇಷ ಹಿನ್ನೆಲೆ ಗ್ಯಾಂಗ್ ವಾರ್; ಓರ್ವನ ಕೊಲೆ, ಇಬ್ಬರ ಸ್ಥಿತಿ ಗಂಭೀರ

ಅನ್ನಪೂರ್ಣೇಶ್ವರಿ ನಗರದಲ್ಲಿ ಪತ್ನಿ ಕೊಲೆ ಪ್ರಕರಣ; ಸಿನಿಮೀಯ ಶೈಲಿಯಲ್ಲಿ ನಡೆದಿತ್ತು ಮರ್ಡರ್ ಸ್ಕೆಚ್

Published On - 1:20 pm, Sun, 24 October 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ