AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಹೈಡೋಸ್ ಇಂಜೆಕ್ಷನ್ ನೀಡಿ ಪತ್ನಿಯನ್ನೇ ಕೊಂದ ವೈದ್ಯ; 9 ತಿಂಗಳ ಬಳಿಕ ಸತ್ಯ ಬಯಲು

ಡಾ. ಚನ್ನೇಶಪ್ಪ ಶವವನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗದೆ ಮನೆಗೆ ತಂದಿದ್ದ. ಅಲ್ಲದೇ ಶಿಲ್ಪಾಳ ಎಡ ಭುಜದ ಮೇಲೆ ಸೂಜಿಯಿಂದ ಚುಚ್ಚಿದ ಗುರುತುಗಳು, ಬಾಯಿಂದ ರಕ್ತ ಮಿಶ್ರಿತ ನೊರೆ ಬಂದಿದ್ದರಿಂದ ಅನುಮಾನಗೊಂಡಿದ್ದ ಪೋಷಕರು, ನ್ಯಾಮತಿ ಠಾಣೆಯಲ್ಲಿ ಡಾ.ಚನ್ನೇಶಪ್ಪ ವಿರುದ್ಧ ದೂರು ದಾಖಲಿಸಿದ್ದರು.

ದಾವಣಗೆರೆ: ಹೈಡೋಸ್ ಇಂಜೆಕ್ಷನ್ ನೀಡಿ ಪತ್ನಿಯನ್ನೇ ಕೊಂದ ವೈದ್ಯ; 9 ತಿಂಗಳ ಬಳಿಕ ಸತ್ಯ ಬಯಲು
ಡಾ. ಚನ್ನೇಶಪ್ಪ ಮತ್ತು ಶಿಲ್ಪಾ
TV9 Web
| Edited By: |

Updated on:Oct 24, 2021 | 1:20 PM

Share

ದಾವಣಗೆರೆ: ಕಳೆದ 9 ತಿಂಗಳ ಹಿಂದೆ ಗೃಹಿಣಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ತಿರುವು ಸಿಕ್ಕಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ರಾಮೇಶ್ವರ ಗ್ರಾಮದಲ್ಲಿ ವೈದ್ಯ ಪತಿಯೇ ಹೈಡೋಸ್ ಇಂಜೆಕ್ಷನ್ ನೀಡಿ ಪತ್ನಿ ಹತ್ಯೆಗೈದಿರುವ ಸತ್ಯ ಬೆಳಕಿಗೆ ಬಂದಿದೆ. ಫೆಬ್ರವರಿ 11ರಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಶಿಲ್ಪಾ(36)ಳನ್ನು ಪತಿಯೇ ಕೊಲೆ ಮಾಡಿದ್ದಾನೆ.

ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಶಿಲ್ಪ ಎಂಬುವವರನ್ನು ಮದುವೆ ಮಾಡಿಕೊಂಡಿದ್ದ ಡಾ. ಚನ್ನೇಶಪ್ಪ, ರಾಮೇಶ್ವರ ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ. ಡಾ.ಚನ್ನೇಶಪ್ಪ ಕುಡಿತ ಮತ್ತು ಜೂಜಿನ ದಾಸನಾಗಿದ್ದು, ವೈದ್ಯನಾಗಿ ವಾಮಾಚಾರದಲ್ಲಿಯೂ ನಂಬಿಕೆ ಹೊಂದಿದ್ದ.

ಪತ್ನಿಯನ್ನು ಕೊಲೆ ಮಾಡಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದ ಡಾ. ಚನ್ನೇಶಪ್ಪ, ಕಳೆದ ಫೆಬ್ರುವರಿ 11ಕ್ಕೆ ಶಿಲ್ಪಾಗೆ ಲೋ ಬಿಪಿಯಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದೇನೆ ಎಂದು ತಿಳಿಸಿದ್ದ. ಇದಾದ ಬಳಿಕ ಮಾರ್ಗ ಮಧ್ಯೆ ನಿಮ್ಮ ಮಗಳು ತೀರಿಕೊಂಡಿದ್ದಾಳೆ ಎಂದು ಶಿಲ್ಪಾ ಪೋಷಕರಿಗೆ ತಿಳಿಸಿದ್ದಾನೆ.

ಡಾ. ಚನ್ನೇಶಪ್ಪ ಶವವನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗದೆ ಮನೆಗೆ ತಂದಿದ್ದ. ಅಲ್ಲದೇ ಶಿಲ್ಪಾಳ ಎಡ ಭುಜದ ಮೇಲೆ ಸೂಜಿಯಿಂದ ಚುಚ್ಚಿದ ಗುರುತುಗಳು, ಬಾಯಿಂದ ರಕ್ತ ಮಿಶ್ರಿತ ನೊರೆ ಬಂದಿದ್ದರಿಂದ ಅನುಮಾನಗೊಂಡಿದ್ದ ಪೋಷಕರು, ನ್ಯಾಮತಿ ಠಾಣೆಯಲ್ಲಿ ಡಾ.ಚನ್ನೇಶಪ್ಪ ವಿರುದ್ಧ ದೂರು ದಾಖಲಿಸಿದ್ದರು.

ಪೋಸ್ಟ್ ಮಾರ್ಟಮ್ ರಿಪೋರ್ಟ್ ಬರುತ್ತಲೇ ದೇಹದಲ್ಲಿನ ಗುರುತುಗಳ ಬಗ್ಗೆ ಎಫ್​ಎಸ್​ಎಲ್​ಗೂ ಕಳಿಸಿದ್ದ ಪೊಲೀಸರು.ಇವೆರಡೂ ವರದಿ ಮ್ಯಾಚ್ ಆಗಿದ್ದ ಕಾರಣ ಇದು ಕೊಲೆ ಪ್ರಕರಣ ಎಂಬುವುದು ಬೆಳಕಿಗೆ ಬಂದಿದೆ. ಜೀವ ಉಳಿಸಬೇಕಾದ ವೈದ್ಯನೇ ತನ್ನ ಹೆಂಡತಿಯನ್ನು ಕೊಲೆ ಮಾಡಿದ್ದು ಎಫ್​ಎಸ್​ಎಲ್​ ವರದಿಯಿಂದ ಪತ್ತೆಯಾಗಿದೆ.

ಇದನ್ನೂ ಓದಿ: ಹಳೇ ದ್ವೇಷ ಹಿನ್ನೆಲೆ ಗ್ಯಾಂಗ್ ವಾರ್; ಓರ್ವನ ಕೊಲೆ, ಇಬ್ಬರ ಸ್ಥಿತಿ ಗಂಭೀರ

ಅನ್ನಪೂರ್ಣೇಶ್ವರಿ ನಗರದಲ್ಲಿ ಪತ್ನಿ ಕೊಲೆ ಪ್ರಕರಣ; ಸಿನಿಮೀಯ ಶೈಲಿಯಲ್ಲಿ ನಡೆದಿತ್ತು ಮರ್ಡರ್ ಸ್ಕೆಚ್

Published On - 1:20 pm, Sun, 24 October 21

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್