AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Davanagere: ಬಿಜೆಪಿ ಪರ ಕಾರ್ಯನಿರ್ವಹಿಸುತ್ತಿದ್ದ ಟೆಲಿಕಾಲಿಂಗ್ ಸೆಂಟರ್ ಮೇಲೆ ದಾಳಿ; 59 ಕಂಪ್ಯೂಟರ್​ಗಳ ಜಪ್ತಿ

ಬಿಜೆಪಿ ಪರ ಕಾರ್ಯನಿರ್ವಹಿಸುತ್ತಿದ್ದ ಟೆಲಿಕಾಲಿಂಗ್ ಸೆಂಟರ್ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ದಾಳಿ ನಡೆಸಿದ್ದು, 59 ಕಂಪ್ಯೂಟರ್​​ಗಳನ್ನು ಜಪ್ತಿ ಮಾಡಿದ್ದಾರೆ.

Davanagere: ಬಿಜೆಪಿ ಪರ ಕಾರ್ಯನಿರ್ವಹಿಸುತ್ತಿದ್ದ ಟೆಲಿಕಾಲಿಂಗ್ ಸೆಂಟರ್ ಮೇಲೆ ದಾಳಿ; 59 ಕಂಪ್ಯೂಟರ್​ಗಳ ಜಪ್ತಿ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Apr 12, 2023 | 10:24 PM

Share

ದಾವಣಗೆರೆ: ಬಿಜೆಪಿ ಪರ ಕಾರ್ಯನಿರ್ವಹಿಸುತ್ತಿದ್ದ ಟೆಲಿಕಾಲಿಂಗ್ ಸೆಂಟರ್ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ದಾಳಿ ನಡೆಸಿದ್ದು, 59 ಕಂಪ್ಯೂಟರ್​​ಗಳನ್ನು ಜಪ್ತಿ ಮಾಡಿದ್ದಾರೆ. ಪರವಾನಿಗೆ ಇಲ್ಲದೆ ಟೆಲಿಕಾಲಿಂಗ್ ಸೆಂಟರ್ ನಡೆಸುತ್ತಿದ್ದ ದೂರು ದಾಖಲಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆ(Davanagere) ಚೇತನಾ ಕಾಂಪ್ಲೆಕ್ಸ್ ಎದುರಿನ ಕಟ್ಟದಲ್ಲಿ ಟೆಲಿಕಾಲಿಂಗ್ ಸೆಂಟರ್ ಕಾರ್ಯನಿರ್ವಹಿಸುತ್ತಿತ್ತು. ಕಚೇರಿಯಲ್ಲಿ 60 ಕ್ಕೂ ಹೆಚ್ಚು ಯುವಕ ಯುವತಿಯರು ಕೆಲಸ ಮಾಡುತ್ತಿದ್ದರು.

ಬಿಜೆಪಿ ಸರ್ಕಾರದ ಸಾಧನೆಗಳನ್ನು ಫಲಾನುಭವಿಗಳಿಗೆ ತಿಳಿಸಿ ಬಿಜೆಪಿ ಬೆಂಬಲಿಸುವಂತೆ ಕರೆ ಮಾಡುವ ಕೆಲಸವನ್ನು ಈ ಕಚೇರಿ ಮೂಲಕ ನಡೆಸಲಾಗುತ್ತಿತ್ತು. ಈ ವಿಚಾರವಾಗಿ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದರು. ಇದರ ಆಧಾರದಲ್ಲಿ ದಾಳಿ ನಡೆಸಲಾಗಿತ್ತು. ಸದ್ಯ ಕಂಪ್ಯೂಟರ್​​​​ಗಳನ್ನುವ ವಶಕ್ಕೆ ಪಡೆದಿರುವ ಚುನಾವಣಾ ಅಧಿಕಾರಿಗಳು ಕಚೇರಿ ಸೀಜ್ ಮಾಡಿದ್ದಾರೆ.

ಹರಿಹರದಲ್ಲಿ ಬಿಜೆಪಿ‌ ಚುನಾವಣಾ ಕಚೇರಿ ಉದ್ಘಾಟನೆ

ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಬಿಜೆಪಿ ಟಿಕೆಟ್ ಘೋಷಣೆ ಹಿನ್ನೆಲೆಯಲ್ಲಿ ಅಲ್ಲಿ ಬುಧವಾರ ಬಿಜೆಪಿ‌ ಚುನಾವಣಾ ಕಚೇರಿ ಉದ್ಘಾಟನೆ ಮಾಡಲಾಯಿತು. ಬಿಜೆಪಿ ಅಭ್ಯರ್ಥಿ ಬಿಪಿ ಹರೀಶ್ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾದ ವೀರೇಶ ಹನಗವಾಡ ಮತ್ತು ಚಂದ್ರಶೇಖರ ಪೂಜಾರ ಕಚೇರಿ ಉದ್ಘಾಟನೆ ವೇಳೆ ನಡೆದ ಪೂಜೆಯಲ್ಲಿ ಭಾಗವಹಿಸಿದರು.

ಇದನ್ನೂ ಓದಿ: ಪಂಜಾಬ್​ನ ಬಟಿಂಡಾದಲ್ಲಿ ಫೈರಿಂಗ್​ ಪ್ರಕರಣ: ಬಾಗಲಕೋಟೆ ಮೂಲದ ಯೋಧ ಹುತಾತ್ಮ

ಈಗಾಗಲೇ ಹರಿಹರ ಕ್ಷೇತ್ರದಿಂದ ಆರು ಸಲ ಸ್ಪರ್ಧೆ ಮಾಡಿರುವೆ. ಇದು ಎಳನೇ ಚುನಾವಣೆ. ಈ ಸಲ ಟಿಕೆಟ್​​ಗಾಗಿ ಯಾವುದೇ ನಾಯಕರ ಹಿಂದೆ ಸುತ್ತಾಡಿಲ್ಲ. ಬದಲಿಗೆ ಸರ್ವೇಯಲ್ಲಿ ನನ್ನ ಹೆಸರು ಮುನ್ನೆಲೆಗೆ ಬಂದ ಕಾರಣ ಟಿಕೆಟ್ ನೀಡಿದ್ದಾರೆ‌. ಈ ಸಲ ಗೆಲ್ಲುವ ವಿಶ್ವಾಸ ಇದೆ. ಈಗಾಗಲೇ ಇಬ್ಬರು ಆಕಾಂಕ್ಷಿಗಳ ಜೊತೆ ಕ್ಷೇತ್ರದಲ್ಲಿ ಮನೆ ಮನೆ ಪ್ರಚಾರ ಮುಕ್ತಾಯವಾಗಿದೆ. ಮೂರು ಜನರಲ್ಲಿ ಯಾರಿಗೆ ಟಿಕೆಟ್ ಸಿಕ್ಕರೂ ಒಟ್ಟಾಗಿ ದುಡಿಯುವುದಾಗಿ ಪ್ರತಿಜ್ಞೆ ಮಾಡಿದ್ದೇವು. ಅದೇ ರೀತಿ ಪ್ರಚಾರ ಮಾಡಿ ಹರಿಹರ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಬಿಪಿ ಹರೀಶ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ