AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Davanagere: ಬಿಜೆಪಿ ಪರ ಕಾರ್ಯನಿರ್ವಹಿಸುತ್ತಿದ್ದ ಟೆಲಿಕಾಲಿಂಗ್ ಸೆಂಟರ್ ಮೇಲೆ ದಾಳಿ; 59 ಕಂಪ್ಯೂಟರ್​ಗಳ ಜಪ್ತಿ

ಬಿಜೆಪಿ ಪರ ಕಾರ್ಯನಿರ್ವಹಿಸುತ್ತಿದ್ದ ಟೆಲಿಕಾಲಿಂಗ್ ಸೆಂಟರ್ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ದಾಳಿ ನಡೆಸಿದ್ದು, 59 ಕಂಪ್ಯೂಟರ್​​ಗಳನ್ನು ಜಪ್ತಿ ಮಾಡಿದ್ದಾರೆ.

Davanagere: ಬಿಜೆಪಿ ಪರ ಕಾರ್ಯನಿರ್ವಹಿಸುತ್ತಿದ್ದ ಟೆಲಿಕಾಲಿಂಗ್ ಸೆಂಟರ್ ಮೇಲೆ ದಾಳಿ; 59 ಕಂಪ್ಯೂಟರ್​ಗಳ ಜಪ್ತಿ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Apr 12, 2023 | 10:24 PM

Share

ದಾವಣಗೆರೆ: ಬಿಜೆಪಿ ಪರ ಕಾರ್ಯನಿರ್ವಹಿಸುತ್ತಿದ್ದ ಟೆಲಿಕಾಲಿಂಗ್ ಸೆಂಟರ್ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ದಾಳಿ ನಡೆಸಿದ್ದು, 59 ಕಂಪ್ಯೂಟರ್​​ಗಳನ್ನು ಜಪ್ತಿ ಮಾಡಿದ್ದಾರೆ. ಪರವಾನಿಗೆ ಇಲ್ಲದೆ ಟೆಲಿಕಾಲಿಂಗ್ ಸೆಂಟರ್ ನಡೆಸುತ್ತಿದ್ದ ದೂರು ದಾಖಲಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆ(Davanagere) ಚೇತನಾ ಕಾಂಪ್ಲೆಕ್ಸ್ ಎದುರಿನ ಕಟ್ಟದಲ್ಲಿ ಟೆಲಿಕಾಲಿಂಗ್ ಸೆಂಟರ್ ಕಾರ್ಯನಿರ್ವಹಿಸುತ್ತಿತ್ತು. ಕಚೇರಿಯಲ್ಲಿ 60 ಕ್ಕೂ ಹೆಚ್ಚು ಯುವಕ ಯುವತಿಯರು ಕೆಲಸ ಮಾಡುತ್ತಿದ್ದರು.

ಬಿಜೆಪಿ ಸರ್ಕಾರದ ಸಾಧನೆಗಳನ್ನು ಫಲಾನುಭವಿಗಳಿಗೆ ತಿಳಿಸಿ ಬಿಜೆಪಿ ಬೆಂಬಲಿಸುವಂತೆ ಕರೆ ಮಾಡುವ ಕೆಲಸವನ್ನು ಈ ಕಚೇರಿ ಮೂಲಕ ನಡೆಸಲಾಗುತ್ತಿತ್ತು. ಈ ವಿಚಾರವಾಗಿ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದರು. ಇದರ ಆಧಾರದಲ್ಲಿ ದಾಳಿ ನಡೆಸಲಾಗಿತ್ತು. ಸದ್ಯ ಕಂಪ್ಯೂಟರ್​​​​ಗಳನ್ನುವ ವಶಕ್ಕೆ ಪಡೆದಿರುವ ಚುನಾವಣಾ ಅಧಿಕಾರಿಗಳು ಕಚೇರಿ ಸೀಜ್ ಮಾಡಿದ್ದಾರೆ.

ಹರಿಹರದಲ್ಲಿ ಬಿಜೆಪಿ‌ ಚುನಾವಣಾ ಕಚೇರಿ ಉದ್ಘಾಟನೆ

ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಬಿಜೆಪಿ ಟಿಕೆಟ್ ಘೋಷಣೆ ಹಿನ್ನೆಲೆಯಲ್ಲಿ ಅಲ್ಲಿ ಬುಧವಾರ ಬಿಜೆಪಿ‌ ಚುನಾವಣಾ ಕಚೇರಿ ಉದ್ಘಾಟನೆ ಮಾಡಲಾಯಿತು. ಬಿಜೆಪಿ ಅಭ್ಯರ್ಥಿ ಬಿಪಿ ಹರೀಶ್ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾದ ವೀರೇಶ ಹನಗವಾಡ ಮತ್ತು ಚಂದ್ರಶೇಖರ ಪೂಜಾರ ಕಚೇರಿ ಉದ್ಘಾಟನೆ ವೇಳೆ ನಡೆದ ಪೂಜೆಯಲ್ಲಿ ಭಾಗವಹಿಸಿದರು.

ಇದನ್ನೂ ಓದಿ: ಪಂಜಾಬ್​ನ ಬಟಿಂಡಾದಲ್ಲಿ ಫೈರಿಂಗ್​ ಪ್ರಕರಣ: ಬಾಗಲಕೋಟೆ ಮೂಲದ ಯೋಧ ಹುತಾತ್ಮ

ಈಗಾಗಲೇ ಹರಿಹರ ಕ್ಷೇತ್ರದಿಂದ ಆರು ಸಲ ಸ್ಪರ್ಧೆ ಮಾಡಿರುವೆ. ಇದು ಎಳನೇ ಚುನಾವಣೆ. ಈ ಸಲ ಟಿಕೆಟ್​​ಗಾಗಿ ಯಾವುದೇ ನಾಯಕರ ಹಿಂದೆ ಸುತ್ತಾಡಿಲ್ಲ. ಬದಲಿಗೆ ಸರ್ವೇಯಲ್ಲಿ ನನ್ನ ಹೆಸರು ಮುನ್ನೆಲೆಗೆ ಬಂದ ಕಾರಣ ಟಿಕೆಟ್ ನೀಡಿದ್ದಾರೆ‌. ಈ ಸಲ ಗೆಲ್ಲುವ ವಿಶ್ವಾಸ ಇದೆ. ಈಗಾಗಲೇ ಇಬ್ಬರು ಆಕಾಂಕ್ಷಿಗಳ ಜೊತೆ ಕ್ಷೇತ್ರದಲ್ಲಿ ಮನೆ ಮನೆ ಪ್ರಚಾರ ಮುಕ್ತಾಯವಾಗಿದೆ. ಮೂರು ಜನರಲ್ಲಿ ಯಾರಿಗೆ ಟಿಕೆಟ್ ಸಿಕ್ಕರೂ ಒಟ್ಟಾಗಿ ದುಡಿಯುವುದಾಗಿ ಪ್ರತಿಜ್ಞೆ ಮಾಡಿದ್ದೇವು. ಅದೇ ರೀತಿ ಪ್ರಚಾರ ಮಾಡಿ ಹರಿಹರ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಬಿಪಿ ಹರೀಶ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್