AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶ್ವರಾನಂದಪುರಿ ಸ್ವಾಮೀಜಿಗೆ ಗರ್ಭಗುಡಿ ಪ್ರವೇಶ ನಿಷೇಧ ವಿಚಾರ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು

ದಾವಣಗೆರೆಯಲ್ಲಿ ಜಾತಿ ಕಾರಣಕ್ಕೆ ಗರ್ಭಗುಡಿಗೆ ಪ್ರವೇಶ ಕೊಡಲಿಲ್ಲ ಎಂಬ ಈಶ್ವರಾನಂದಪುರಿಶ್ರೀ ಹೇಳಿಕೆ ವಿಚಾರವಾಗಿ ಮಾತನಾಡಿದ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಶ್ರೀಗಳಿಗೆ ಗರ್ಭಗುಡಿಯಲ್ಲಿ ಪೂಜೆ ಮಾಡುವುದಕ್ಕೆ ಅವಕಾಶ ಕೊಟ್ಟಿಲ್ಲ. ಆದರೆ ಶ್ರೀಗಳು ಬಂದ ನಂತರ ಗರ್ಭಗುಡಿ ಶುಚಿಗೊಳಿಸಿದ್ದರೆ ಅದು ತಪ್ಪು ಎಂದು ಹೇಳಿದ್ದಾರೆ.

ಈಶ್ವರಾನಂದಪುರಿ ಸ್ವಾಮೀಜಿಗೆ ಗರ್ಭಗುಡಿ ಪ್ರವೇಶ ನಿಷೇಧ ವಿಚಾರ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಚಿವ ರಾಮಲಿಂಗಾರೆಡ್ಡಿ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Feb 03, 2024 | 9:06 PM

Share

ದಾವಣಗೆರೆ, ಫೆಬ್ರವರಿ 3: ದೇವಸ್ಥಾನಗಳ ಪ್ರವೇಶಕ್ಕೆ ಅವಕಾಶ ಕುರಿತು ಮೊದಲಿಂದಲೂ ಇದೆ. ಶ್ರೀಗಳಿಗೆ ಗರ್ಭಗುಡಿಯಲ್ಲಿ ಪೂಜೆ ಮಾಡುವುದಕ್ಕೆ ಅವಕಾಶ ಕೊಟ್ಟಿಲ್ಲ. ಆದರೆ ಶ್ರೀಗಳು ಬಂದ ನಂತರ ಗರ್ಭಗುಡಿ ಶುಚಿಗೊಳಿಸಿದ್ದರೆ ಅದು ತಪ್ಪು ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹೇಳಿದ್ದಾರೆ. ಜಾತಿ ಕಾರಣಕ್ಕೆ ಗರ್ಭಗುಡಿಗೆ ಪ್ರವೇಶ ಕೊಡಲಿಲ್ಲ ಎಂಬ ಈಶ್ವರಾನಂದಪುರಿಶ್ರೀ ಹೇಳಿಕೆಗೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಮುಜರಾಯಿ ಆಯುಕ್ತರಿಗೆ ವರದಿ ಕೇಳಿದ್ದೇನೆ ಎಂದು ಹೇಳಿದ್ದಾರೆ.

ನಾನು ಚಾಮುಂಡಿ ಬೆಟ್ಟಕ್ಕೆ ಹೋದಾಗ ಗರ್ಭಗುಡಿವರೆಗೆ ಮಾತ್ರ ಅವಕಾಶ ಇದೆ. ಕೆಲ ದೇವಸ್ಥಾನಗಳಲ್ಲಿ ಗರ್ಭಗುಡಿ ಒಳಗೆ ನಮ್ಮಿಂದ ಪೂಜೆ ಮಾಡಿಸುತ್ತಾರೆ ಎಂದರು.

100 ರಾಮಮಂದಿರ ಕಟ್ಟಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದೇವೆ: ರಾಮಲಿಂಗಾರೆಡ್ಡಿ

100 ರಾಮಮಂದಿರ ಕಟ್ಟಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದೇವೆ. ರಾಮ ಹುಟ್ಟಿ 7500 ಸಾವಿರ ವರ್ಷ ಆಯಿತು. ರಾಮ ಮಂದಿರ ಎಷ್ಟು ಕಟ್ಟಿದ್ದಾರೆ? ಬಿಜೆಪಿಯವರು ಈಗ ರಾಮ ರಾಮ ಅಂತಾ ಓಡಾಡುತ್ತಿದ್ದಾರೆ.

ಇದನ್ನೂ ಓದಿ: ಜಾತಿ ಕಾರಣಕ್ಕೆ ಚನ್ನಕೇಶವ ದೇವಸ್ಥಾನದ ಗರ್ಭಗುಡಿಗೆ ಬಿಡಲಿಲ್ಲ: ಈಶ್ವರಾನಂದಪುರಿ ಸ್ವಾಮೀಜಿ ಬೇಸರ

ಅಯೋಧ್ಯೆ ರಾಮ ಮಂದಿರ ಬಾಗಿಲು ತೆಗೆದು ಪೂಜೆಗೆ ಅವಕಾಶ ನೀಡಿದ್ದು ನಮ್ಮ ರಾಜೀವ್ ಗಾಂಧಿ. ನಮ್ಮ ಅಧಿಕಾರಾವಧಿಯಲ್ಲಿ ಎಷ್ಟು ದೇವಸ್ಥಾನಗಳಿಗೆ ಅನುದಾನ ಕೊಟ್ಟಿದ್ದೇವೆ ಎನ್ನುವ ಬಗ್ಗೆ ಪಟ್ಟಿ ಬಿಡುಗಡೆಗೊಳಿಸುತ್ತೇನೆ ಎಂದು ತಿಳಿಸಿದ್ದಾರೆ.

ಸಮಾಜದಲ್ಲಿ ನಾವೆಲ್ಲರೂ ಮನುಷ್ಯರೇ ಎನ್ನುವ ಭಾವನೆ ಬರಬೇಕಿದೆ: ಸಚಿವ ಸತೀಶ್ ಜಾರಕಿಹೊಳಿ

ಈ ವಿಚಾರವಾಗಿ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು, ಇದರ ವಿರುದ್ಧ ಹೋರಾಟ, ಜಾಗೃತಿ ಆಗಬೇಕಿದೆ. ನಮ್ಮ ಸಮಾಜದಲ್ಲಿ ನಾವೆಲ್ಲರೂ ಮನುಷ್ಯರೇ ಎನ್ನುವ ಭಾವನೆ ಬರಬೇಕಿದೆ. ಆ ನಿಟ್ಟಿನಲ್ಲಿ ಎಲ್ಲರೂ ಒಂದೇ ವೇದಿಕೆಯಲ್ಲಿ ಚರ್ಚೆ ಮಾಡಬೇಕಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಾತಿ ಕಾರಣಕ್ಕೆ ನಮ್ಮನ್ನ ಚನ್ನಕೇಶವ ದೇಗುಲದ ಗರ್ಭಗುಡಿಗೆ ಬಿಟ್ಟಿರಲಿಲ್ಲ – ಕನಕ ಪೀಠದ ಈಶ್ವರಾನಂದಪುರಿ ಶ್ರೀ

ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಬಿಜೆಪಿಗೆ ಹೋಗುತ್ತಾರೆ ಎಂಬ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರು ಬರುತ್ತಾರೆ ಅಂತಾರೆ, ನಾವು ಹೋಗಲ್ಲ ಅಂತೀವಿ ಅಷ್ಟೇ ಎಂದಿದ್ದಾರೆ.

ಈಶ್ವರಾನಂದಪುರಿ ಶ್ರೀಗಳ ಹೇಳಿಕೆಗೆ ಬಾಗೂರು ಚನ್ನಕೇಶವ ದೇಗುಲದ ಅರ್ಚಕ ಶ್ರೀನಿವಾಸ್ ಅವರು ಪ್ರತಿಕ್ರಿಯೆ ನೀಡಿದ್ದು, ಶ್ರೀಗಳು ಹೇಳಿದಂತೆ ಜಾತಿ ಕಾರಣಕ್ಕೆ ತಾರತಮ್ಯ ನಡೆದಿಲ್ಲ. ಈಶ್ವರಾನಂದಪುರಿಶ್ರೀ ತೆರಳಿದ ಬಳಿಕ ದೇಗುಲ ಸ್ವಚ್ಛಗೊಳಿಸಿಲ್ಲ. ಈಶ್ವರಾನಂದಪುರಿಶ್ರೀ ಹಲವು ವರ್ಷಗಳಿಂದ ಬರುತ್ತಿದ್ದಾರೆ. ಕಳೆದ ತಿಂಗಳು ನಡೆದ ವೈಕುಂಠ ಏಕಾದಶಿಗೂ ಶ್ರೀಗಳು ಬಂದಿದ್ದರು. ಸ್ವಾಮೀಜಿ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಎಣ್ಣೆ ಕೊಡಿಸಿಲ್ಲವೆಂದು ಮಚ್ಚು ಹಿಡಿದು ನಡುರಸ್ತೆಯಲ್ಲೇ ವ್ಯಕ್ತಿ ಪುಂಡಾಟ
ಎಣ್ಣೆ ಕೊಡಿಸಿಲ್ಲವೆಂದು ಮಚ್ಚು ಹಿಡಿದು ನಡುರಸ್ತೆಯಲ್ಲೇ ವ್ಯಕ್ತಿ ಪುಂಡಾಟ
ಮಾಲ್ಡಾದಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಮೋದಿ ಚಾಲನೆ
ಮಾಲ್ಡಾದಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಮೋದಿ ಚಾಲನೆ
ನಿಧಿ ಸಿಕ್ಕ ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಪುರಾತನ ವಸ್ತು ಪತ್ತೆ!
ನಿಧಿ ಸಿಕ್ಕ ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಪುರಾತನ ವಸ್ತು ಪತ್ತೆ!
ಬೆಂಗಳೂರಿನಲ್ಲಿ ಮುಗಿಯುತ್ತಿಲ್ಲ ರಸ್ತೆ ಗುಂಡಿ ಗೋಳು
ಬೆಂಗಳೂರಿನಲ್ಲಿ ಮುಗಿಯುತ್ತಿಲ್ಲ ರಸ್ತೆ ಗುಂಡಿ ಗೋಳು
ಶ್ರೀ ಮಹಾಕಾಳೇಶ್ವರನಿಗೆ ವಿರಾಟ್ ಕೊಹ್ಲಿ ವಿಶೇಷ ಪೂಜೆ
ಶ್ರೀ ಮಹಾಕಾಳೇಶ್ವರನಿಗೆ ವಿರಾಟ್ ಕೊಹ್ಲಿ ವಿಶೇಷ ಪೂಜೆ
ಗದಗ: ಆಂಜನೇಯ ದೇಗುಲದಲ್ಲಿ 3 ದಿನಗಳಿಂದ ನಿರಂತರ ನಿಗೂಢ ಗೆಜ್ಜೆ ಶಬ್ದ!
ಗದಗ: ಆಂಜನೇಯ ದೇಗುಲದಲ್ಲಿ 3 ದಿನಗಳಿಂದ ನಿರಂತರ ನಿಗೂಢ ಗೆಜ್ಜೆ ಶಬ್ದ!
ಬೆಳ್ಳಂಬೆಳಗ್ಗೆ ಗುದ್ದಲಿ, ಪೊರಕೆ ಹಿಡಿದು ಬೀದಿಗಿಳಿದ ಟೆಕ್ಕಿಗಳು!
ಬೆಳ್ಳಂಬೆಳಗ್ಗೆ ಗುದ್ದಲಿ, ಪೊರಕೆ ಹಿಡಿದು ಬೀದಿಗಿಳಿದ ಟೆಕ್ಕಿಗಳು!
ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಹೇಗಿದೆ ಗೊತ್ತಾ? ವಿಡಿಯೋ ನೋಡಿ
ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಹೇಗಿದೆ ಗೊತ್ತಾ? ವಿಡಿಯೋ ನೋಡಿ
ಪೌರಾಯುಕ್ತೆಗೆ ಅವಾಚ್ಯ ಶಬ್ದ ನಿಂದನೆ ಪ್ರಕರಣ; ಕ್ಷಮೆ ಕೇಳಿದ ನಟ ಝೈದ್ ಖಾನ್
ಪೌರಾಯುಕ್ತೆಗೆ ಅವಾಚ್ಯ ಶಬ್ದ ನಿಂದನೆ ಪ್ರಕರಣ; ಕ್ಷಮೆ ಕೇಳಿದ ನಟ ಝೈದ್ ಖಾನ್
ಸ್ಮಿತ್ ಸಿಡಿಲಬ್ಬರ... ಒಂದೇ ಓವರ್​ನಲ್ಲಿ ದಾಖಲೆ ಉಡೀಸ್
ಸ್ಮಿತ್ ಸಿಡಿಲಬ್ಬರ... ಒಂದೇ ಓವರ್​ನಲ್ಲಿ ದಾಖಲೆ ಉಡೀಸ್