AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು: ಕಾರಣ ನಿಗೂಢ

ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ, ಬಿಸಿ ಪಾಟೀಲ್ ದೊಡ್ಡ ಮಗಳ ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಲ್ಲಿಸಿ ವಿಷ ಸೇವಿಸಿದ್ದಾರೆ. ಆದ್ರೆ, ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾದರೂ ಜೀವ ಉಳಿಯಲಿಲ್ಲ.

ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು: ಕಾರಣ ನಿಗೂಢ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Jul 08, 2024 | 7:32 PM

Share

ದಾವಣಗೆರೆ, (ಜುಲೈ 08): ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್​ ಕೆಜಿ (41) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.  ಬಿಜೆಪಿ ನಾಯಕ ಬಿಸಿ ಪಾಟೀಲ್ ಅವರ ದೊಡ್ಡ ಮಗಳ ಗಂಡ  ಪ್ರತಾಪ್ ಕುಮಾರ್​ ಇಂದು (ಜುಲೈ 08) ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಲ್ಲಿಸಿ ವಿಷ ಸೇವಿಸಿದ್ದಾರೆ. ಇದನ್ನು ಗಮಿಸಿದ ಸ್ಥಳೀಯರು ಪ್ರತಾಪ್ ಕುಮಾರ್​ ನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಕುಮಾರ್ ಮೃತಪಟ್ಟಿದ್ದಾರೆ.

ದಾವಣಗೆರೆ ಕತ್ತಲಗೆರೆ ಗ್ರಾಮದ ಮೃತ ಪ್ರತಾಪ್ ಕುಮಾರ್,  15 ವರ್ಷದ ಹಿಂದೆ ಬಿಸಿ ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯಳನ್ನು ಮದುವೆಯಾಗಿದ್ದರು. ಆದ್ರೆ, ಇದೀಗ ಏಕಾಏಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇದನ್ನೂ ಓದಿ: ಆ ಒಂದು ಕಾರಣಕ್ಕೆ ಬಿ.ಸಿ ಪಾಟೀಲ್ ಅಳಿಯ ಆತ್ಮಹತ್ಯೆ ಮಾಡಿಕೊಂಡ್ರಾ? ಅಸಲಿಗೆ ನಡೆದಿದ್ದೇನು? ಎಸ್ಪಿ ಹೇಳಿದ್ದಿಷ್ಟು

KA 68 M 1458 ನಂಬರಿನ Venue ಕಾರಿನಲ್ಲಿ ಬಂದಿದ್ದ ಪ್ರತಾಪಕುಮಾರ, ಹರಿಹರ-ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ಬರುವ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಬಳಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದಾರೆ. ಕಾರಿನಲ್ಲಿ ವಿಷದ ಬಾಟಲಿ ಪತ್ತೆಯಾಗಿದೆ. ಆದ್ರೆ, ಪ್ರತಾಪಕುಮಾರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು‌ ಬಂದಿಲ್ಲ.

ಪ್ರತಾಪ್ ಕುಮಾರ್ ಬೇರೆ ಯಾರು ಅಲ್ಲ. ಬಿ.ಸಿ ಪಾಟೀಲ್ ಪತ್ನಿ ವನಜಾ ಅವರ ಸಹೋದರ. ಇನ್ನು ತಮಗೆ ಗಂಡು ಮಕ್ಕಳು ಇಲ್ಲದಿದ್ದರಿಂದ ಸಂಬಂಧಿ ಪ್ರತಾಪ್ ಕುಮಾರ್​ಗೆ ಬಿ.ಸಿ. ಪಾಟೀಲ್ ತಮ್ಮ ಹಿರಿ ಪುತ್ರಿ ಸೌಮ್ಯಳನ್ನು ಮದುವೆ ಮಾಡಿಕೊಟ್ಟಿದ್ದರು. ಮದುವೆ ಬಳಿಕ ಪ್ರತಾಪ್, ತಮ್ಮ ಮಾವ ಬಿ.ಸಿ ಪಾಟೀಲ್ ಅವರ ಕೃಷಿಗೆ ಸಂಬಂಧಿಸಿದ ವ್ಯವಹಾರ ನೋಡಿಕೊಳ್ಳುತ್ತಿದ್ದರು. ಆದ್ರೆ, ಇದೀಗ ಅಳಿಯ ದಿಢೀರ್ ಆತ್ಮಹತ್ಯೆಗೆ ಶರಣಾಗಿದ್ದರಿಂದ ಬಿ.ಸಿ. ಪಾಟೀಲ್, ಕುಗ್ಗಿ ಹೋಗಿದ್ದು, ಹಿರೇಕೆರೂರಿನಲ್ಲಿ ಇದ್ದ ಬಿ.ಸಿ ಪಾಟೀಲ್ ಇದೀಗ ಮೃತದೇಹವಿರುವ ಶಿಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:19 pm, Mon, 8 July 24

Follow Us
Basavaraj Doddamani
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?