ದಾವಣಗೆರೆ ರಾಗಿ ಖರೀದಿ ಕೇಂದ್ರದಲ್ಲಿ ಗೋಲ್​ಮಾಲ್​ ಆರೋಪ; ಎಪಿಎಂಸಿ ಆವರಣದಲ್ಲಿ ರೈತರ ಪ್ರತಿಭಟನೆ

ಖರೀದಿ ಕೇಂದ್ರದಲ್ಲಿ ಪ್ರತಿ ಕ್ವಿಂಟಾಲ್ ರಾಗಿಗೆ 3,377 ರೂ. ದರ ನಿಗದಿಯಾಗಿದೆ. ಓಪನ್ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ರಾಗಿ ದರ 1,800 ರಿಂದ 1,900 ರೂಪಾಯಿ ಇದೆ. ಕೂಡಲೇ ರಾಗಿ ಖರೀದಿ ನಿಲ್ಲಿಸಿ ನ್ಯಾಯ ಕೊಡಿಸುವಂತೆ ರೈತರು ಆಗ್ರಹಿಸುತ್ತಿದ್ದಾರೆ.

ದಾವಣಗೆರೆ ರಾಗಿ ಖರೀದಿ ಕೇಂದ್ರದಲ್ಲಿ ಗೋಲ್​ಮಾಲ್​ ಆರೋಪ; ಎಪಿಎಂಸಿ ಆವರಣದಲ್ಲಿ ರೈತರ ಪ್ರತಿಭಟನೆ
ರಾಗಿ ಖರೀದಿ ಕೇಂದ್ರಕ್ಕೆ ಮುತ್ತಿಗೆ ಹಾಕಿದ ರೈತರು
Follow us
| Updated By: sandhya thejappa

Updated on:Apr 27, 2022 | 12:03 PM

ದಾವಣೆಗೆರೆ: ಜಿಲ್ಲೆಯ ರಾಗಿ (Millet) ಖರೀದಿ ಕೇಂದ್ರದಲ್ಲಿ ಗೋಲ್ಮಾಲ್ ನಡೆದಿರುವ ಆರೋಪ ಕೇಳಿಬಂದಿದ್ದು, ಎಪಿಎಂಸಿ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರಕ್ಕೆ ಇಂದು (ಏಪ್ರಿಲ್ 27) ರೈತರು (Farmers) ಮುತ್ತಿಗೆ ಹಾಕಿದ್ದಾರೆ. ಕೇಂದ್ರದಲ್ಲಿ ಮಧ್ಯವರ್ತಿಗಳ ಮೂಲಕ ಬಂದವರ ರಾಗಿ ಮಾತ್ರ ಖರೀದಿ ಮಾಡುತ್ತಾರೆ. ನೇರವಾಗಿ ಖರೀದಿ ಕೇಂದ್ರಕ್ಕೆ ಬಂದ ರೈತರ ರಾಗಿಯನ್ನು ಖರೀದಿಸಲು ನಿರಾಕರಿಸುತ್ತಿದ್ದಾರೆ ಅಂತ ಆರೋಪಿಸಿರುವ ರೈತರು ಧರಣಿ ನಡೆಸುತ್ತಿದ್ದದಾರೆ. ಆಲೂರು, ಮಲ್ಲಾಪುರ ಸೇರಿ ಹಲವು ಗ್ರಾಮಗಳಿಂದ ರೈತರು ಬಂದಿದ್ದಾರೆ.

ಖರೀದಿ ಕೇಂದ್ರದಲ್ಲಿ ಪ್ರತಿ ಕ್ವಿಂಟಾಲ್ ರಾಗಿಗೆ 3,377 ರೂ. ದರ ನಿಗದಿಯಾಗಿದೆ. ಓಪನ್ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ರಾಗಿ ದರ 1,800 ರಿಂದ 1,900 ರೂಪಾಯಿ ಇದೆ. ಕೂಡಲೇ ರಾಗಿ ಖರೀದಿ ನಿಲ್ಲಿಸಿ ನ್ಯಾಯ ಕೊಡಿಸುವಂತೆ ರೈತರು ಆಗ್ರಹಿಸುತ್ತಿದ್ದು, ಖರೀದಿ ಕೇಂದ್ರಕ್ಕೆ ನೇರವಾಗಿ ಬಂದ ರಾಗಿ ಖರೀದಿಗೆ ರೈತರು ಪಟ್ಟು ಬಿದ್ದಿದ್ದಾರೆ.

ಕಾಂಗ್ರೆಸ್​ನಿಂದ ವಿನೂತನ ಪ್ರತಿಭಟನೆ: ಹುಬ್ಬಳ್ಳಿ: ರಸ್ತೆ ದುರಸ್ಥಿಗೆ ಆಗ್ರಹಿಸಿ ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ಕಾಂಗ್ರೆಸ್​ನಿಂದ ವಿನೂತನ ಪ್ರತಿಭಟನೆ ನಡೆಯಿತು. ಗುಂಡಿ ಬಿದ್ದ ರಸ್ತೆಯಲ್ಲಿ ರಂಗೋಲಿ ಬಿಡಿಸಿ ಆಕ್ರೋಶ‌ ಹೊರಹಾಕಿದ್ದಾರೆ. ರಸ್ತೆ ತುಂಬೆಲ್ಲ ಗುಂಡಿ ಬಿದ್ದು ಸಾರ್ವಜನಿಕರಿಗೆ ತೀರಾ ತೊಂದರೆಯಾಗುತ್ತಿದೆ. ಹೀಗಾಗಿ ಕೂಡಲೇ ರಸ್ತೆ ದುರಸ್ತಿ ಮಾಡಿಸಬೇಕೆಂದು ಒತ್ತಾಯಿಸಿದ್ದಾರೆ.

ಸರ್ಕಾರಿ ರಸ್ತೆಗೆ ಬೇಲಿ ಹಾಕಿದ ಗ್ರಾಮ ಪಂಚಾಯಿತಿ ಸದಸ್ಯ: ತುಮಕೂರು ತಾಲೂಕಿನ ಮುದ್ದರಾಮಯ್ಯಪಾಳ್ಯ ಗ್ರಾಮದಲ್ಲಿ ಸರ್ಕಾರಿ ನಕಾಶೆ ರಸ್ತೆಗೆ ಗ್ರಾಮ ಪಂಚಾಯತಿ ಸದಸ್ಯ ಬೇಲಿ ಹಾಕಿದ್ದಾರೆ. ಗ್ರಾಮ ಪಂಚಾಯತಿ ಸದಸ್ಯ ಆನಂದ್ ಎಂಬುವರು ರಸ್ತೆಗೆ ಬೇಲಿ ಹಾಕಿ ಬಂದ್ ಮಾಡಿದ್ದಾರೆ. ಹಲವು ವರ್ಷಗಳಿಂದ ಇದ್ದ ರಸ್ತೆಗೆ ಬೇಲಿ ಹಾಕಿ ದೌರ್ಜನ್ಯ ಎಸಗಿದ್ದಾರೆ ಅಂತ ಆರೋಪ ಕೇಳಿಬಂದಿದೆ.

ಇದನ್ನೂ ಓದಿ

ನರಗುಂದ: ಸಚಿವ ಸಿಸಿ ಪಾಟೀಲ ಮನೆ ಎದುರು ಬಿಗಿ ಪೊಲೀಸ್ ಬಂದೋಬಸ್ತ್; ದಿಂಗಾಲೇಶ್ವಶ್ರೀ ಭಕ್ತರ ಆಕ್ರೋಶ

IPL 2022 VIDEO: ಏನೋ ಮಾಡ್ತೀಯಾ..? ಮೈದಾನದಲ್ಲೇ ಜಗಳಕ್ಕಿಳಿದ ಹರ್ಷಲ್-ಪರಾಗ್

Published On - 11:55 am, Wed, 27 April 22

ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ