AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: 20 ರೂಪಾಯಿ ಕುರ್‌ ಕುರೆ ವಿಚಾರಕ್ಕೆ ಮಾರಾಮಾರಿ, ಬಂಧನ ಭೀತಿಯಿಂದ ಗ್ರಾಮ ತೊರೆದ 25 ಜನ

ಮಕ್ಕಳ ನೆಚ್ಚಿನ ಕುರ್ ಕುರೆ ದಾವಣಗೆರೆಯ ಚನ್ನಗಿರಿ ತಾಲೂಕಿನ ಹೊನ್ನೆಬಾಗಿ ಎಂಬಲ್ಲಿ 25 ಜನ ಗ್ರಾಮ ತೊರೆಯುವಂತೆ ಮಾಡಿದೆ. ಅಷ್ಟೇ ಅಲ್ಲ, ಹತ್ತು ಜನ ಗಾಯಗೊಂಡು ಆಸ್ಪತ್ರೆ ಸೇರುವಂತೆ ಮಾಡಿದೆ. ಹಾಗಾದರೆ ಹೊನ್ನೆಬಾಗಿ ಗ್ರಾಮದಲ್ಲಿ ನಡೆದಿದ್ದೇನು? ಕುರ್ ಕುರೆ ಜಗಳ ವಿಕೋಪಕ್ಕೆ ಹೋಗಿದ್ದು ಹೇಗೆ? ವಿವರಗಳಿಗೆ ಮುಂದೆ ಓದಿ.

ದಾವಣಗೆರೆ: 20 ರೂಪಾಯಿ ಕುರ್‌ ಕುರೆ ವಿಚಾರಕ್ಕೆ ಮಾರಾಮಾರಿ, ಬಂಧನ ಭೀತಿಯಿಂದ ಗ್ರಾಮ ತೊರೆದ 25 ಜನ
ಎಡಭಾಗದಲ್ಲಿ ಕುರ್​​​ಕುರೆ (ಸಾಂದರ್ಭಿಕ ಚಿತ್ರ), ಮಧ್ಯದಲ್ಲಿ ಗಲಾಟೆಯ ಸಿಸಿಟಿವಿ ದೃಶ್ಯದ ಸ್ಕ್ರೀನ್​​ಗ್ರ್ಯಾಬ್ ಹಾಗೂ ಬಲ ಬದಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವಿನ ಚಿತ್ರ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Dec 23, 2024 | 1:00 PM

Share

ದಾವಣಗೆರೆ, ಡಿಸೆಂಬರ್ 23: ಕೇವಲ 20 ರೂಪಾಯಿ ಕುರ್‌ ಕುರೆ ವಿಚಾರವಾಗಿ ನಡೆದ ಗಲಾಟೆಯಿಂದ 25 ಜನ ಊರು ಬಿಟ್ಟಿದ್ದಾರೆ! ದಾವಣಗೆರೆಯ ಚನ್ನಗಿರಿ ತಾಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ಎರಡು ಕುಟುಂಬಗಳ ಮಧ್ಯೆ ಹೊಡೆದಾಟ ನಡೆದಿದ್ದು, ಗಲಾಟೆ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಷ್ಟಕ್ಕೂ ಆಗಿದ್ದೇನೆಂದರೆ, ಹೊನ್ನೇಬಾಗಿ ಗ್ರಾಮದಲ್ಲಿ ಅತೀಫ್ ಉಲ್ಲಾ ಎಂಬುವವರು ಕಿರಾಣಿ ಅಂಗಡಿ ಇಟ್ಟುಕೊಂಡಿದ್ದಾರೆ. ಇದೇ ಅಂಗಡಿಯಿಂದ ಸದ್ದಾಂ ಎಂಬುವವರ ಮಕ್ಕಳು ಕುರ್‌ ಕುರೆ ಖರೀದಿಸಿದ್ದಾರೆ. ಆದರೆ, ಕುರ್‌ ಕುರೆ ಎಕ್ಸ್‌ಪೈರಿ ಡೇಟ್ ಆಗಿದ್ದು ಬೇರೆ ಕುರ್‌ ಕುರೆ ನೀಡುವಂತೆ ಸದ್ದಾಂ ಮನೆಯವರು ಆಗ್ರಹಿಸಿದ್ದಾರೆ. ನಂತರ ಮಾತಿಗೆ ಮಾತು ಬೆಳೆದು ಎರಡು ಕುಟುಂಬಗಳ ಮಧ್ಯೆ ಹೊಡೆದಾಟ ನಡೆದುಹೋಗಿದೆ.

ಅಷ್ಟಕ್ಕೇ ಗಲಾಟೆ ಮುಗಿಯಲಿಲ್ಲ. ಮಾರನೇ ದಿನ ರಸ್ತೆ ಬದಿ ಹೋಟೆಲ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದ ಸದ್ದಾಂ, ಆತೀಫ್ ವಿರುದ್ಧ ದೂರು ನೀಡಿದ್ದಾರೆ. ದೂರು ನೀಡಿದ್ದಕ್ಕೆ ರೊಚ್ಚಿಗೆದ್ದ 30ಕ್ಕೂ ಹೆಚ್ಚು ಜನರು ಸದ್ದಾಂ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹೋಟೆಲ್ ಧ್ವಂಸಗೊಳಿಸಿದ್ದಾರೆ ಎಂದೂ ದೂರಲಾಗಿದೆ. ಈ ಗಲಾಟೆ ಬಿಡಿಸಲು ಬಂದವರ ಮೇಲೂ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಸದ್ಯ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಬಂಧನ ಬೀತಿಯಿಂದ ಗ್ರಾಮದ 25 ಜನ ಊರು ತೊರೆದಿದ್ದಾರೆ.

ಇದನ್ನೂ ಓದಿ: ತನ್ನನ್ನು ತಾನೇ ಕಿಡ್ನಾಪ್ ಮಾಡಿಸಿಕೊಂಡು ಮನೆಯವರನ್ನು ನಂಬಿಸಿದ ಯುವಕ; ಕಾರಣ ಕೇಳಿದ್ರೆ ಶಾಕ್ ಆಗ್ತೀರ

ಸದ್ಯ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದು, ಸ್ಥಳದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಎರಡೂ ಕಡೆಯವರಿಂದ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್