AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: 20 ರೂಪಾಯಿ ಕುರ್‌ ಕುರೆ ವಿಚಾರಕ್ಕೆ ಮಾರಾಮಾರಿ, ಬಂಧನ ಭೀತಿಯಿಂದ ಗ್ರಾಮ ತೊರೆದ 25 ಜನ

ಮಕ್ಕಳ ನೆಚ್ಚಿನ ಕುರ್ ಕುರೆ ದಾವಣಗೆರೆಯ ಚನ್ನಗಿರಿ ತಾಲೂಕಿನ ಹೊನ್ನೆಬಾಗಿ ಎಂಬಲ್ಲಿ 25 ಜನ ಗ್ರಾಮ ತೊರೆಯುವಂತೆ ಮಾಡಿದೆ. ಅಷ್ಟೇ ಅಲ್ಲ, ಹತ್ತು ಜನ ಗಾಯಗೊಂಡು ಆಸ್ಪತ್ರೆ ಸೇರುವಂತೆ ಮಾಡಿದೆ. ಹಾಗಾದರೆ ಹೊನ್ನೆಬಾಗಿ ಗ್ರಾಮದಲ್ಲಿ ನಡೆದಿದ್ದೇನು? ಕುರ್ ಕುರೆ ಜಗಳ ವಿಕೋಪಕ್ಕೆ ಹೋಗಿದ್ದು ಹೇಗೆ? ವಿವರಗಳಿಗೆ ಮುಂದೆ ಓದಿ.

ದಾವಣಗೆರೆ: 20 ರೂಪಾಯಿ ಕುರ್‌ ಕುರೆ ವಿಚಾರಕ್ಕೆ ಮಾರಾಮಾರಿ, ಬಂಧನ ಭೀತಿಯಿಂದ ಗ್ರಾಮ ತೊರೆದ 25 ಜನ
ಎಡಭಾಗದಲ್ಲಿ ಕುರ್​​​ಕುರೆ (ಸಾಂದರ್ಭಿಕ ಚಿತ್ರ), ಮಧ್ಯದಲ್ಲಿ ಗಲಾಟೆಯ ಸಿಸಿಟಿವಿ ದೃಶ್ಯದ ಸ್ಕ್ರೀನ್​​ಗ್ರ್ಯಾಬ್ ಹಾಗೂ ಬಲ ಬದಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವಿನ ಚಿತ್ರ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: Ganapathi Sharma|

Updated on: Dec 23, 2024 | 1:00 PM

Share

ದಾವಣಗೆರೆ, ಡಿಸೆಂಬರ್ 23: ಕೇವಲ 20 ರೂಪಾಯಿ ಕುರ್‌ ಕುರೆ ವಿಚಾರವಾಗಿ ನಡೆದ ಗಲಾಟೆಯಿಂದ 25 ಜನ ಊರು ಬಿಟ್ಟಿದ್ದಾರೆ! ದಾವಣಗೆರೆಯ ಚನ್ನಗಿರಿ ತಾಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ಎರಡು ಕುಟುಂಬಗಳ ಮಧ್ಯೆ ಹೊಡೆದಾಟ ನಡೆದಿದ್ದು, ಗಲಾಟೆ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಷ್ಟಕ್ಕೂ ಆಗಿದ್ದೇನೆಂದರೆ, ಹೊನ್ನೇಬಾಗಿ ಗ್ರಾಮದಲ್ಲಿ ಅತೀಫ್ ಉಲ್ಲಾ ಎಂಬುವವರು ಕಿರಾಣಿ ಅಂಗಡಿ ಇಟ್ಟುಕೊಂಡಿದ್ದಾರೆ. ಇದೇ ಅಂಗಡಿಯಿಂದ ಸದ್ದಾಂ ಎಂಬುವವರ ಮಕ್ಕಳು ಕುರ್‌ ಕುರೆ ಖರೀದಿಸಿದ್ದಾರೆ. ಆದರೆ, ಕುರ್‌ ಕುರೆ ಎಕ್ಸ್‌ಪೈರಿ ಡೇಟ್ ಆಗಿದ್ದು ಬೇರೆ ಕುರ್‌ ಕುರೆ ನೀಡುವಂತೆ ಸದ್ದಾಂ ಮನೆಯವರು ಆಗ್ರಹಿಸಿದ್ದಾರೆ. ನಂತರ ಮಾತಿಗೆ ಮಾತು ಬೆಳೆದು ಎರಡು ಕುಟುಂಬಗಳ ಮಧ್ಯೆ ಹೊಡೆದಾಟ ನಡೆದುಹೋಗಿದೆ.

ಅಷ್ಟಕ್ಕೇ ಗಲಾಟೆ ಮುಗಿಯಲಿಲ್ಲ. ಮಾರನೇ ದಿನ ರಸ್ತೆ ಬದಿ ಹೋಟೆಲ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದ ಸದ್ದಾಂ, ಆತೀಫ್ ವಿರುದ್ಧ ದೂರು ನೀಡಿದ್ದಾರೆ. ದೂರು ನೀಡಿದ್ದಕ್ಕೆ ರೊಚ್ಚಿಗೆದ್ದ 30ಕ್ಕೂ ಹೆಚ್ಚು ಜನರು ಸದ್ದಾಂ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹೋಟೆಲ್ ಧ್ವಂಸಗೊಳಿಸಿದ್ದಾರೆ ಎಂದೂ ದೂರಲಾಗಿದೆ. ಈ ಗಲಾಟೆ ಬಿಡಿಸಲು ಬಂದವರ ಮೇಲೂ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಸದ್ಯ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಬಂಧನ ಬೀತಿಯಿಂದ ಗ್ರಾಮದ 25 ಜನ ಊರು ತೊರೆದಿದ್ದಾರೆ.

ಇದನ್ನೂ ಓದಿ: ತನ್ನನ್ನು ತಾನೇ ಕಿಡ್ನಾಪ್ ಮಾಡಿಸಿಕೊಂಡು ಮನೆಯವರನ್ನು ನಂಬಿಸಿದ ಯುವಕ; ಕಾರಣ ಕೇಳಿದ್ರೆ ಶಾಕ್ ಆಗ್ತೀರ

ಸದ್ಯ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದು, ಸ್ಥಳದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಎರಡೂ ಕಡೆಯವರಿಂದ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ