AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: 20 ರೂಪಾಯಿ ಕುರ್‌ ಕುರೆ ವಿಚಾರಕ್ಕೆ ಮಾರಾಮಾರಿ, ಬಂಧನ ಭೀತಿಯಿಂದ ಗ್ರಾಮ ತೊರೆದ 25 ಜನ

ಮಕ್ಕಳ ನೆಚ್ಚಿನ ಕುರ್ ಕುರೆ ದಾವಣಗೆರೆಯ ಚನ್ನಗಿರಿ ತಾಲೂಕಿನ ಹೊನ್ನೆಬಾಗಿ ಎಂಬಲ್ಲಿ 25 ಜನ ಗ್ರಾಮ ತೊರೆಯುವಂತೆ ಮಾಡಿದೆ. ಅಷ್ಟೇ ಅಲ್ಲ, ಹತ್ತು ಜನ ಗಾಯಗೊಂಡು ಆಸ್ಪತ್ರೆ ಸೇರುವಂತೆ ಮಾಡಿದೆ. ಹಾಗಾದರೆ ಹೊನ್ನೆಬಾಗಿ ಗ್ರಾಮದಲ್ಲಿ ನಡೆದಿದ್ದೇನು? ಕುರ್ ಕುರೆ ಜಗಳ ವಿಕೋಪಕ್ಕೆ ಹೋಗಿದ್ದು ಹೇಗೆ? ವಿವರಗಳಿಗೆ ಮುಂದೆ ಓದಿ.

ದಾವಣಗೆರೆ: 20 ರೂಪಾಯಿ ಕುರ್‌ ಕುರೆ ವಿಚಾರಕ್ಕೆ ಮಾರಾಮಾರಿ, ಬಂಧನ ಭೀತಿಯಿಂದ ಗ್ರಾಮ ತೊರೆದ 25 ಜನ
ಎಡಭಾಗದಲ್ಲಿ ಕುರ್​​​ಕುರೆ (ಸಾಂದರ್ಭಿಕ ಚಿತ್ರ), ಮಧ್ಯದಲ್ಲಿ ಗಲಾಟೆಯ ಸಿಸಿಟಿವಿ ದೃಶ್ಯದ ಸ್ಕ್ರೀನ್​​ಗ್ರ್ಯಾಬ್ ಹಾಗೂ ಬಲ ಬದಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವಿನ ಚಿತ್ರ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Dec 23, 2024 | 1:00 PM

Share

ದಾವಣಗೆರೆ, ಡಿಸೆಂಬರ್ 23: ಕೇವಲ 20 ರೂಪಾಯಿ ಕುರ್‌ ಕುರೆ ವಿಚಾರವಾಗಿ ನಡೆದ ಗಲಾಟೆಯಿಂದ 25 ಜನ ಊರು ಬಿಟ್ಟಿದ್ದಾರೆ! ದಾವಣಗೆರೆಯ ಚನ್ನಗಿರಿ ತಾಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ಎರಡು ಕುಟುಂಬಗಳ ಮಧ್ಯೆ ಹೊಡೆದಾಟ ನಡೆದಿದ್ದು, ಗಲಾಟೆ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಷ್ಟಕ್ಕೂ ಆಗಿದ್ದೇನೆಂದರೆ, ಹೊನ್ನೇಬಾಗಿ ಗ್ರಾಮದಲ್ಲಿ ಅತೀಫ್ ಉಲ್ಲಾ ಎಂಬುವವರು ಕಿರಾಣಿ ಅಂಗಡಿ ಇಟ್ಟುಕೊಂಡಿದ್ದಾರೆ. ಇದೇ ಅಂಗಡಿಯಿಂದ ಸದ್ದಾಂ ಎಂಬುವವರ ಮಕ್ಕಳು ಕುರ್‌ ಕುರೆ ಖರೀದಿಸಿದ್ದಾರೆ. ಆದರೆ, ಕುರ್‌ ಕುರೆ ಎಕ್ಸ್‌ಪೈರಿ ಡೇಟ್ ಆಗಿದ್ದು ಬೇರೆ ಕುರ್‌ ಕುರೆ ನೀಡುವಂತೆ ಸದ್ದಾಂ ಮನೆಯವರು ಆಗ್ರಹಿಸಿದ್ದಾರೆ. ನಂತರ ಮಾತಿಗೆ ಮಾತು ಬೆಳೆದು ಎರಡು ಕುಟುಂಬಗಳ ಮಧ್ಯೆ ಹೊಡೆದಾಟ ನಡೆದುಹೋಗಿದೆ.

ಅಷ್ಟಕ್ಕೇ ಗಲಾಟೆ ಮುಗಿಯಲಿಲ್ಲ. ಮಾರನೇ ದಿನ ರಸ್ತೆ ಬದಿ ಹೋಟೆಲ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದ ಸದ್ದಾಂ, ಆತೀಫ್ ವಿರುದ್ಧ ದೂರು ನೀಡಿದ್ದಾರೆ. ದೂರು ನೀಡಿದ್ದಕ್ಕೆ ರೊಚ್ಚಿಗೆದ್ದ 30ಕ್ಕೂ ಹೆಚ್ಚು ಜನರು ಸದ್ದಾಂ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹೋಟೆಲ್ ಧ್ವಂಸಗೊಳಿಸಿದ್ದಾರೆ ಎಂದೂ ದೂರಲಾಗಿದೆ. ಈ ಗಲಾಟೆ ಬಿಡಿಸಲು ಬಂದವರ ಮೇಲೂ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಸದ್ಯ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಬಂಧನ ಬೀತಿಯಿಂದ ಗ್ರಾಮದ 25 ಜನ ಊರು ತೊರೆದಿದ್ದಾರೆ.

ಇದನ್ನೂ ಓದಿ: ತನ್ನನ್ನು ತಾನೇ ಕಿಡ್ನಾಪ್ ಮಾಡಿಸಿಕೊಂಡು ಮನೆಯವರನ್ನು ನಂಬಿಸಿದ ಯುವಕ; ಕಾರಣ ಕೇಳಿದ್ರೆ ಶಾಕ್ ಆಗ್ತೀರ

ಸದ್ಯ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದು, ಸ್ಥಳದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಎರಡೂ ಕಡೆಯವರಿಂದ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್