AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕ ಬಿಪಿ ಹರೀಶ್ ವಿರುದ್ಧ ಜಾತಿನಿಂದನೆ ಆರೋಪ: ಎಫ್​ಐಆರ್​ ದಾಖಲು

ಜಾತಿನಿಂದನೆ ಆರೋಪದಡಿ ಜಿಲ್ಲೆಯ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್​ ವಿರುದ್ಧ ಹರಿಹರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ.

ಬಿಜೆಪಿ ಶಾಸಕ ಬಿಪಿ ಹರೀಶ್ ವಿರುದ್ಧ ಜಾತಿನಿಂದನೆ ಆರೋಪ: ಎಫ್​ಐಆರ್​ ದಾಖಲು
ಬಿ.ಪಿ.ಹರೀಶ್
ಗಂಗಾಧರ​ ಬ. ಸಾಬೋಜಿ
|

Updated on: May 17, 2023 | 9:58 PM

Share

ದಾವಣಗೆರೆ: ಜಾತಿನಿಂದನೆ ಆರೋಪದಡಿ ಜಿಲ್ಲೆಯ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ (BP Harish)​ ವಿರುದ್ಧ ಹರಿಹರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ. ‘ಅಪ್ಪನಿಗೆ ಹುಟ್ಟಿದ ಮಾದರು ಮಾತ್ರ ಬಿಜೆಪಿಗೆ ಮತ ಹಾಕಿದ್ದಾರೆ’ ಎಂದು ಚುನಾವಣೆಯಲ್ಲಿ ಗೆದ್ದ ಎರಡೇ ದಿನದಲ್ಲಿ ಹರೀಶ್ ವಿವಾದಿತ ಹೇಳಿಕೆ ನೀಡಿದ್ದರು. ದಲಿತ ಮುಖಂಡರು ದೂರು ಹಿನ್ನೆಲೆ ಎಫ್​ಐಆರ್ ದಾಖಲಾಗಿದ್ದು, ಬಿ.ಪಿ.ಹರೀಶ್​​ ಬಂಧನ ಭೀತಿಯಲ್ಲಿದ್ದಾರೆ. ಮಾದಿಗ ಸಮುದಾಯಕ್ಕೆ ಬಿಜೆಪಿ ಸರ್ಕಾರ ಒಳಮೀಸಲಾತಿ ನೀಡಿದೆ. ಆದರೆ ಮಾದಿಗರು ಬಿಜೆಪಿಗೆ ಮತ ಹಾಕಿಲ್ಲವೆಂದು ಹರೀಶ್ ವಾಗ್ದಾಳಿ ಮಾಡಿದ್ದರು.

ಬಿ.ಪಿ.ಹರೀಶ್ ನೀಡಿದ್ದ ಅವಹೇಳನಕಾರಿ ಹೇಳಿಕೆ ವೈರಲ್ ಆಗಿತ್ತು. 7 ಬಾರಿ ಚುನಾವಣೆಗೆ ಸ್ಪರ್ಧಿಸಿರುವ ಬಿ.ಪಿ.ಹರೀಶ್, 2 ಬಾರಿ ಗೆದಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್​ ಸಿಎಂ ಆಗಬೇಕು, ರಾಮನಗರದಲ್ಲಿ ಬೆಂಬಲಿಗರಿಂದ ಪ್ರತಿಭಟನೆ

ಚಪ್ಪಲಿ ಹಾರ ಪ್ರಕರಣ: ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿದ ನಳಿನ್ ಕುಮಾರ್ ಕಟೀಲ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ನಳಿನ್ ಕುಮಾರ್ ಕಟೀಲ್ ಮತ್ತು ಸಂಸದ ಡಿವಿ ಸದಾನಂದ ಗೌಡ ಅವರ ಬ್ಯಾನರ್​ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದಕ್ಕೆ ಸಂಬಂಧಿಸಿ ಕೊನೆಗೂ ನಳಿನ್ ಕುಮಾರ್ ಕಟೀಲ್ ಮೌನ ಮುರಿದಿದ್ದಾರೆ. ಪ್ರಕರಣದಲ್ಲಿ ಪೊಲೀಸರು ನಡೆದುಕೊಂಡಿರುವ ರೀತಿಯನ್ನು ಖಂಡಿಸಿ ಟ್ವೀಟ್ ಮಾಡಿರುವ ಅವರು, ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Kodagu Rain: ಕೊಡಗಿನ ನಾಪೋಕ್ಲು ವ್ಯಾಪ್ತಿಯಲ್ಲಿ ವರುಣಾರ್ಭಟ; ಧರೆಗುರುಳಿದ ಮರ, ವಿದ್ಯುತ್ ಕಂಬಗಳು

‘ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ. ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದನ್ನು ಖಂಡಿಸುತ್ತೇನೆ. ಉನ್ನತ ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು’ ಎಂದು ಕಟೀಲ್ ಟ್ವೀಟ್ ಮಾಡಿದ್ದಾರೆ.

ಏನಿದು ಪ್ರಕರಣ?

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತ ಬಳಿಕ ಪುತ್ತೂರು ಬಸ್​ ನಿಲ್ದಾಣದ ಬಳಿಯಲ್ಲಿ ರಾತ್ರೋರಾತ್ರಿ ನಳಿನ್ ಕುಮಾರ್ ಕಟೀಲ್ ಹಾಗೂ ಸಂಸದ ಡಿವಿ ಸದಾನಂದ ಗೌಡ ಅವರ ಭಾವಚಿತ್ರ ಇರುವ ಶ್ರದ್ಧಾಂಜಲಿ ಬ್ಯಾನರ್ ಹಾಕಲಾಗಿದ್ದು, ಅದಕ್ಕೆ ಚಪ್ಪಲಿ ಹಾರ ಹಾಕಲಾಗಿತ್ತು. ಈ ಬಗ್ಗೆ ಪುತ್ತೂರು ನಗರಸಭಾ ಆಯುಕ್ತ ಮಧು ಮನೋಹರ್ ಹಾಗೂ ಇತರರು ಪೊಲೀಸರಿಗೆ ದೂರು ನೀಡಿದ್ದರು. ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ