AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ದಾವಣಗೆರೆ ಜಿಲ್ಲೆಯಲ್ಲಿ ನಿಲ್ಲದ ಪ್ರವಾಹ: ಸಾಲಬಾಳು-ಗಂಜೇನಹಳ್ಳಿ ನಡುವೆ ಸಂಪರ್ಕ ಕಡಿತ

ನ್ಯಾಮತಿ ತಾಲ್ಲೂಕಿನ ಸಾಲಬಾಳು-ಗಂಜೇನಹಳ್ಳಿ ನಡುವೆ ವಾರದಿಂದ ಸಂಪರ್ಕ ಕಡಿತಗೊಂಡಿದೆ. ಸಂಪರ್ಕ ಕಡಿತಗೊಂಡ ರಸ್ತೆಗೆ ಶಾಸಕ ರೇಣುಕಾಚಾರ್ಯ ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು.

Karnataka Rains: ದಾವಣಗೆರೆ ಜಿಲ್ಲೆಯಲ್ಲಿ ನಿಲ್ಲದ ಪ್ರವಾಹ: ಸಾಲಬಾಳು-ಗಂಜೇನಹಳ್ಳಿ ನಡುವೆ ಸಂಪರ್ಕ ಕಡಿತ
ತಾಲ್ಲೂಕಿನ ಚಿಕ್ಕಬಿದರಿ, ಸಾರಥಿ ಗ್ರಾಮಗಳ ಮಧ್ಯೆ ರಸ್ತೆ ಸಂಪರ್ಕ ಕಡಿತಗೊಂಡಿದೆ.
TV9 Web
| Edited By: |

Updated on: Jul 25, 2021 | 5:59 PM

Share

ದಾವಣಗೆರೆ: ರಾಜ್ಯದಲ್ಲಿ ಮಳೆ ತುಸು ಇಳಿಮುಖವಾಗಿದ್ದರೂ, ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಹ ಕಡಿಮೆಯಾಗಿಲ್ಲ. ನ್ಯಾಮತಿ ತಾಲ್ಲೂಕಿನ ಸಾಲಬಾಳು-ಗಂಜೇನಹಳ್ಳಿ ನಡುವೆ ವಾರದಿಂದ ಸಂಪರ್ಕ ಕಡಿತಗೊಂಡಿದೆ. ಸಂಪರ್ಕ ಕಡಿತಗೊಂಡ ರಸ್ತೆಗೆ ಶಾಸಕ ರೇಣುಕಾಚಾರ್ಯ ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು.

ಪದೇಪದೆ ಸಂಪರ್ಕ ಕಡಿತಗೊಳ್ಳುವ ಈ ಸ್ಥಳದಲ್ಲಿ ಸೇತುವೆ ಕಂ ಬ್ಯಾರೇಜ್ ನಿರ್ಮಿಸುವಂತೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯೂ ಆಗಿರುವ ರೇಣುಕಾಚಾರ್ಯ ಅಧಿಕಾರಿಗಳಿಗೆ ಸಲಹೆ ಮಾಡಿದರು. ಅತಿವೃಷ್ಟಿಯಿಂದಾಗಿ ನ್ಯಾಮತಿ-ಹೊನ್ನಾಳಿ ಅವಳಿ ತಾಲ್ಲೂಕಿನಲ್ಲಿ ಅಪಾರ ಪ್ರಮಾಣದ ಹಾನಿಯಾಗಿದೆ. ಹೊನ್ನಾಳಿ, ನ್ಯಾಮತಿ ತಾಲೂಕನ್ನು ಅತಿವೃಷ್ಟಿ ಪೀಡಿತವೆಂದು ಘೋಷಿಸಲು ಮುಖ್ಯಮಂತ್ರಿಗೆ ಮನವಿ ಮಾಡಿದರು.

ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಹರಿಹರ ತಾಲ್ಲೂಕಿನ ಚಿಕ್ಕಬಿದರಿ, ಸಾರಥಿ ಗ್ರಾಮಗಳ ಮಧ್ಯೆ ರಸ್ತೆ ಸಂಪರ್ಕ ಕಡಿತಗೊಂಡಿದೆ. 10 ವರ್ಷವಾದರೂ ಸೇತುವೆ ಕಾಮಗಾರಿ ಪೂರ್ಣವಾಗಿಲ್ಲ. ಈಗ ಮಳೆ ಹೆಚ್ಚಾದ ಹಿನ್ನೆಲೆ ರಸ್ತೆ ಸಂಪರ್ಕ ಕಡಿತವಾಗಿದೆ. ಹೀಗಾಗಿ ಗ್ರಾಮಸ್ಥರು ದೋಣಿಗಳ ಮೊರೆ ಹೋಗಿದ್ದು, ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಜನರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Gadag dog

ಮಲಪ್ರಭಾ ನದಿಯಲ್ಲಿ ಈಜಿ ದಡ ಸೇರಿದ ಶ್ವಾನ

ಮಲಪ್ರಭಾ ನದಿಯಲ್ಲಿ ಶ್ವಾನ ಬಚಾವ್ ಗದಗ ಜಿಲ್ಲೆಯ ನರಗುಂದ ತಾಲೂಕಿನ ಲಖಮಾಪೂರು ಗ್ರಾಮದ ಸೇತುವೆ ಬಳಿ ಮಲಪ್ರಭಾ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಶ್ವಾನವೊಂದು ಸೇತುವೆ ಬಳಿ ಈಜಿ ದಡ ಸೇರಿತು. ನೀರಿನ ರಭಸಕ್ಕೆ ತೆಲಿ ಹೋಗುತ್ತಿದ್ದ ಶ್ವಾನ ಬಚಾವ್ ಆಗಿದ್ದು ಕಂಡ ಜನರು ಸದ್ಯ ಬದುಕಿತು ಬಡಜೀವ ಎಂದುಕೊಂಡರು.

(Floods in Davanagere District Road between Salabalu Ganjenahalli cut)

ಇದನ್ನೂ ಓದಿ: ಕಾರವಾರ: ಮಳೆಗೆ ಮನೆ ಕುಸಿತ; ನೆಲಸಮ‌ವಾದ ಸೂರು ನೋಡಿ ಭಾವುಕರಾದ ದಂಪತಿ

ಇದನ್ನೂ ಓದಿ: ಮಳೆ ಅಬ್ಬರ ತಗ್ಗಿದರೂ ಬೆಳಗಾವಿಯಲ್ಲಿ ನಿಲ್ಲದ ಭೀತಿ; ಬೆಳೆ ಹಾನಿಗೆ ಪರಿಹಾರ ನೀಡುವಂತೆ ರೈತರ ಆಗ್ರಹ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​