AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ದಾವಣಗೆರೆ ಜಿಲ್ಲೆಯಲ್ಲಿ ನಿಲ್ಲದ ಪ್ರವಾಹ: ಸಾಲಬಾಳು-ಗಂಜೇನಹಳ್ಳಿ ನಡುವೆ ಸಂಪರ್ಕ ಕಡಿತ

ನ್ಯಾಮತಿ ತಾಲ್ಲೂಕಿನ ಸಾಲಬಾಳು-ಗಂಜೇನಹಳ್ಳಿ ನಡುವೆ ವಾರದಿಂದ ಸಂಪರ್ಕ ಕಡಿತಗೊಂಡಿದೆ. ಸಂಪರ್ಕ ಕಡಿತಗೊಂಡ ರಸ್ತೆಗೆ ಶಾಸಕ ರೇಣುಕಾಚಾರ್ಯ ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು.

Karnataka Rains: ದಾವಣಗೆರೆ ಜಿಲ್ಲೆಯಲ್ಲಿ ನಿಲ್ಲದ ಪ್ರವಾಹ: ಸಾಲಬಾಳು-ಗಂಜೇನಹಳ್ಳಿ ನಡುವೆ ಸಂಪರ್ಕ ಕಡಿತ
ತಾಲ್ಲೂಕಿನ ಚಿಕ್ಕಬಿದರಿ, ಸಾರಥಿ ಗ್ರಾಮಗಳ ಮಧ್ಯೆ ರಸ್ತೆ ಸಂಪರ್ಕ ಕಡಿತಗೊಂಡಿದೆ.
TV9 Web
| Edited By: |

Updated on: Jul 25, 2021 | 5:59 PM

Share

ದಾವಣಗೆರೆ: ರಾಜ್ಯದಲ್ಲಿ ಮಳೆ ತುಸು ಇಳಿಮುಖವಾಗಿದ್ದರೂ, ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಹ ಕಡಿಮೆಯಾಗಿಲ್ಲ. ನ್ಯಾಮತಿ ತಾಲ್ಲೂಕಿನ ಸಾಲಬಾಳು-ಗಂಜೇನಹಳ್ಳಿ ನಡುವೆ ವಾರದಿಂದ ಸಂಪರ್ಕ ಕಡಿತಗೊಂಡಿದೆ. ಸಂಪರ್ಕ ಕಡಿತಗೊಂಡ ರಸ್ತೆಗೆ ಶಾಸಕ ರೇಣುಕಾಚಾರ್ಯ ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು.

ಪದೇಪದೆ ಸಂಪರ್ಕ ಕಡಿತಗೊಳ್ಳುವ ಈ ಸ್ಥಳದಲ್ಲಿ ಸೇತುವೆ ಕಂ ಬ್ಯಾರೇಜ್ ನಿರ್ಮಿಸುವಂತೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯೂ ಆಗಿರುವ ರೇಣುಕಾಚಾರ್ಯ ಅಧಿಕಾರಿಗಳಿಗೆ ಸಲಹೆ ಮಾಡಿದರು. ಅತಿವೃಷ್ಟಿಯಿಂದಾಗಿ ನ್ಯಾಮತಿ-ಹೊನ್ನಾಳಿ ಅವಳಿ ತಾಲ್ಲೂಕಿನಲ್ಲಿ ಅಪಾರ ಪ್ರಮಾಣದ ಹಾನಿಯಾಗಿದೆ. ಹೊನ್ನಾಳಿ, ನ್ಯಾಮತಿ ತಾಲೂಕನ್ನು ಅತಿವೃಷ್ಟಿ ಪೀಡಿತವೆಂದು ಘೋಷಿಸಲು ಮುಖ್ಯಮಂತ್ರಿಗೆ ಮನವಿ ಮಾಡಿದರು.

ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಹರಿಹರ ತಾಲ್ಲೂಕಿನ ಚಿಕ್ಕಬಿದರಿ, ಸಾರಥಿ ಗ್ರಾಮಗಳ ಮಧ್ಯೆ ರಸ್ತೆ ಸಂಪರ್ಕ ಕಡಿತಗೊಂಡಿದೆ. 10 ವರ್ಷವಾದರೂ ಸೇತುವೆ ಕಾಮಗಾರಿ ಪೂರ್ಣವಾಗಿಲ್ಲ. ಈಗ ಮಳೆ ಹೆಚ್ಚಾದ ಹಿನ್ನೆಲೆ ರಸ್ತೆ ಸಂಪರ್ಕ ಕಡಿತವಾಗಿದೆ. ಹೀಗಾಗಿ ಗ್ರಾಮಸ್ಥರು ದೋಣಿಗಳ ಮೊರೆ ಹೋಗಿದ್ದು, ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಜನರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Gadag dog

ಮಲಪ್ರಭಾ ನದಿಯಲ್ಲಿ ಈಜಿ ದಡ ಸೇರಿದ ಶ್ವಾನ

ಮಲಪ್ರಭಾ ನದಿಯಲ್ಲಿ ಶ್ವಾನ ಬಚಾವ್ ಗದಗ ಜಿಲ್ಲೆಯ ನರಗುಂದ ತಾಲೂಕಿನ ಲಖಮಾಪೂರು ಗ್ರಾಮದ ಸೇತುವೆ ಬಳಿ ಮಲಪ್ರಭಾ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಶ್ವಾನವೊಂದು ಸೇತುವೆ ಬಳಿ ಈಜಿ ದಡ ಸೇರಿತು. ನೀರಿನ ರಭಸಕ್ಕೆ ತೆಲಿ ಹೋಗುತ್ತಿದ್ದ ಶ್ವಾನ ಬಚಾವ್ ಆಗಿದ್ದು ಕಂಡ ಜನರು ಸದ್ಯ ಬದುಕಿತು ಬಡಜೀವ ಎಂದುಕೊಂಡರು.

(Floods in Davanagere District Road between Salabalu Ganjenahalli cut)

ಇದನ್ನೂ ಓದಿ: ಕಾರವಾರ: ಮಳೆಗೆ ಮನೆ ಕುಸಿತ; ನೆಲಸಮ‌ವಾದ ಸೂರು ನೋಡಿ ಭಾವುಕರಾದ ದಂಪತಿ

ಇದನ್ನೂ ಓದಿ: ಮಳೆ ಅಬ್ಬರ ತಗ್ಗಿದರೂ ಬೆಳಗಾವಿಯಲ್ಲಿ ನಿಲ್ಲದ ಭೀತಿ; ಬೆಳೆ ಹಾನಿಗೆ ಪರಿಹಾರ ನೀಡುವಂತೆ ರೈತರ ಆಗ್ರಹ

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ