AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ದಾವಣಗೆರೆ ಜಿಲ್ಲೆಯಲ್ಲಿ ನಿಲ್ಲದ ಪ್ರವಾಹ: ಸಾಲಬಾಳು-ಗಂಜೇನಹಳ್ಳಿ ನಡುವೆ ಸಂಪರ್ಕ ಕಡಿತ

ನ್ಯಾಮತಿ ತಾಲ್ಲೂಕಿನ ಸಾಲಬಾಳು-ಗಂಜೇನಹಳ್ಳಿ ನಡುವೆ ವಾರದಿಂದ ಸಂಪರ್ಕ ಕಡಿತಗೊಂಡಿದೆ. ಸಂಪರ್ಕ ಕಡಿತಗೊಂಡ ರಸ್ತೆಗೆ ಶಾಸಕ ರೇಣುಕಾಚಾರ್ಯ ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು.

Karnataka Rains: ದಾವಣಗೆರೆ ಜಿಲ್ಲೆಯಲ್ಲಿ ನಿಲ್ಲದ ಪ್ರವಾಹ: ಸಾಲಬಾಳು-ಗಂಜೇನಹಳ್ಳಿ ನಡುವೆ ಸಂಪರ್ಕ ಕಡಿತ
ತಾಲ್ಲೂಕಿನ ಚಿಕ್ಕಬಿದರಿ, ಸಾರಥಿ ಗ್ರಾಮಗಳ ಮಧ್ಯೆ ರಸ್ತೆ ಸಂಪರ್ಕ ಕಡಿತಗೊಂಡಿದೆ.
TV9 Web
| Edited By: |

Updated on: Jul 25, 2021 | 5:59 PM

Share

ದಾವಣಗೆರೆ: ರಾಜ್ಯದಲ್ಲಿ ಮಳೆ ತುಸು ಇಳಿಮುಖವಾಗಿದ್ದರೂ, ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಹ ಕಡಿಮೆಯಾಗಿಲ್ಲ. ನ್ಯಾಮತಿ ತಾಲ್ಲೂಕಿನ ಸಾಲಬಾಳು-ಗಂಜೇನಹಳ್ಳಿ ನಡುವೆ ವಾರದಿಂದ ಸಂಪರ್ಕ ಕಡಿತಗೊಂಡಿದೆ. ಸಂಪರ್ಕ ಕಡಿತಗೊಂಡ ರಸ್ತೆಗೆ ಶಾಸಕ ರೇಣುಕಾಚಾರ್ಯ ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು.

ಪದೇಪದೆ ಸಂಪರ್ಕ ಕಡಿತಗೊಳ್ಳುವ ಈ ಸ್ಥಳದಲ್ಲಿ ಸೇತುವೆ ಕಂ ಬ್ಯಾರೇಜ್ ನಿರ್ಮಿಸುವಂತೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯೂ ಆಗಿರುವ ರೇಣುಕಾಚಾರ್ಯ ಅಧಿಕಾರಿಗಳಿಗೆ ಸಲಹೆ ಮಾಡಿದರು. ಅತಿವೃಷ್ಟಿಯಿಂದಾಗಿ ನ್ಯಾಮತಿ-ಹೊನ್ನಾಳಿ ಅವಳಿ ತಾಲ್ಲೂಕಿನಲ್ಲಿ ಅಪಾರ ಪ್ರಮಾಣದ ಹಾನಿಯಾಗಿದೆ. ಹೊನ್ನಾಳಿ, ನ್ಯಾಮತಿ ತಾಲೂಕನ್ನು ಅತಿವೃಷ್ಟಿ ಪೀಡಿತವೆಂದು ಘೋಷಿಸಲು ಮುಖ್ಯಮಂತ್ರಿಗೆ ಮನವಿ ಮಾಡಿದರು.

ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಹರಿಹರ ತಾಲ್ಲೂಕಿನ ಚಿಕ್ಕಬಿದರಿ, ಸಾರಥಿ ಗ್ರಾಮಗಳ ಮಧ್ಯೆ ರಸ್ತೆ ಸಂಪರ್ಕ ಕಡಿತಗೊಂಡಿದೆ. 10 ವರ್ಷವಾದರೂ ಸೇತುವೆ ಕಾಮಗಾರಿ ಪೂರ್ಣವಾಗಿಲ್ಲ. ಈಗ ಮಳೆ ಹೆಚ್ಚಾದ ಹಿನ್ನೆಲೆ ರಸ್ತೆ ಸಂಪರ್ಕ ಕಡಿತವಾಗಿದೆ. ಹೀಗಾಗಿ ಗ್ರಾಮಸ್ಥರು ದೋಣಿಗಳ ಮೊರೆ ಹೋಗಿದ್ದು, ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಜನರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Gadag dog

ಮಲಪ್ರಭಾ ನದಿಯಲ್ಲಿ ಈಜಿ ದಡ ಸೇರಿದ ಶ್ವಾನ

ಮಲಪ್ರಭಾ ನದಿಯಲ್ಲಿ ಶ್ವಾನ ಬಚಾವ್ ಗದಗ ಜಿಲ್ಲೆಯ ನರಗುಂದ ತಾಲೂಕಿನ ಲಖಮಾಪೂರು ಗ್ರಾಮದ ಸೇತುವೆ ಬಳಿ ಮಲಪ್ರಭಾ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಶ್ವಾನವೊಂದು ಸೇತುವೆ ಬಳಿ ಈಜಿ ದಡ ಸೇರಿತು. ನೀರಿನ ರಭಸಕ್ಕೆ ತೆಲಿ ಹೋಗುತ್ತಿದ್ದ ಶ್ವಾನ ಬಚಾವ್ ಆಗಿದ್ದು ಕಂಡ ಜನರು ಸದ್ಯ ಬದುಕಿತು ಬಡಜೀವ ಎಂದುಕೊಂಡರು.

(Floods in Davanagere District Road between Salabalu Ganjenahalli cut)

ಇದನ್ನೂ ಓದಿ: ಕಾರವಾರ: ಮಳೆಗೆ ಮನೆ ಕುಸಿತ; ನೆಲಸಮ‌ವಾದ ಸೂರು ನೋಡಿ ಭಾವುಕರಾದ ದಂಪತಿ

ಇದನ್ನೂ ಓದಿ: ಮಳೆ ಅಬ್ಬರ ತಗ್ಗಿದರೂ ಬೆಳಗಾವಿಯಲ್ಲಿ ನಿಲ್ಲದ ಭೀತಿ; ಬೆಳೆ ಹಾನಿಗೆ ಪರಿಹಾರ ನೀಡುವಂತೆ ರೈತರ ಆಗ್ರಹ

Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ