AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೂವಿನಿಂದಲೂ ಗಾಯ ಆಗಬಹುದು; ನೆಚ್ಚಿನ ನಾಯಕನಿಗೆ ಪುಷ್ಪಾರ್ಚನೆ ಮಾಡುವ ಅಭಿಮಾನಿಗಳೆ ಎಚ್ಚರ

ಸನ್ಮಾನ ಮಾಡುತ್ತಿದ್ದಂತೆ ತಲೆಯ ಮೇಲೆ ಹೂವು ಹಾಕುವುದು ಎಂದು ನಿರ್ಧರಿಸಲಾಗಿತ್ತು. ಜೊತೆಗೆ ಹೂವನ್ನು ಮುರಿದು ಸನ್ಮಾನಿತರ ಮೇಲೆ ಹಾಕಲು ಅನುಕೂಲ ಆಗುವಂತೆ ಮಾಡಲಾಗಿತ್ತು. ಆದರೆ ಹೀಗೆ ಹೂವು ಹಾಕಿದ್ದೇ ತಡ ಅದು ಸಂಸದರಿಗೆ ಅಲರ್ಜಿ ಉಂಟು ಮಾಡಿದೆ.

ಹೂವಿನಿಂದಲೂ ಗಾಯ ಆಗಬಹುದು; ನೆಚ್ಚಿನ ನಾಯಕನಿಗೆ ಪುಷ್ಪಾರ್ಚನೆ ಮಾಡುವ ಅಭಿಮಾನಿಗಳೆ ಎಚ್ಚರ
ಕೊರೊನಾ ವಾರಿಯರ್​ಗಳಿಗೆ ಸನ್ಮಾನ
TV9 Web
| Edited By: |

Updated on: Oct 27, 2021 | 7:45 AM

Share

ದಾವಣಗೆರೆ: ಇತ್ತೀಚಿಗೆ ತಮ್ಮ ನೆಚ್ಚಿನ ನಾಯಕರಿಗೆ ಪುಷ್ಪಾರ್ಚನೆ ಮಾಡುವುದು. ಕ್ವಿಂಟಾಲ್ ತೂಕ ಸೇಬಿನ ಹಾರ ಹಾಕುವುದು ಹೆಚ್ಚಾಗಿದೆ. ಅದರಲ್ಲೂ ಜೆಸಿಬಿಗಳಲ್ಲಿ ಹೂವು ತುಂಬಿಕೊಂಡು ಸುರಿಸುವುದು ಜೋರಾಗಿದೆ. ಆದರೆ ಇದು ಎಂತಹ ಅಪಾಯಕಾರಿ ಎಂಬುವುದನ್ನು ದಾವಣಗೆರೆ ಸಂಸದ , ಅವರನ್ನು ಕೇಳಿದರೆ ಗೊತ್ತಾಗುತ್ತದೆ. ಏಕೆಂದರೆ ಹೂ ಮಳೆಯಿಂದ ಅವರ ಮುಖದ ಬಹುತೇಕ ಕಡೆ ಗಾಯವಾದಂತಾಗಿದೆ. ಮೇಲಾಗಿ ಮುಖ ಉದಿಕೊಂಡಿದೆ. ಕಣ್ಣಿಗೂ ಸ್ವಲ್ಪ ತೊಂದರೆ ಆಗಿದೆ. ಇದಕ್ಕೆಲ್ಲಾ ಕಾರಣ ಹೂವು. ಅದು ಹೇಗೆ ಎಂದು ಹುಬ್ಬೇರಿಸುವವರಿಗೆ ಇಲ್ಲಿದೆ ಉತ್ತರ.

ಇತ್ತೀಚಿಗೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸುರಹೊನ್ನೆಯಲ್ಲಿ ಕೊರೊನಾ ವಾರಿಯರ್​ಗಳಿಗೆ ಸನ್ಮಾನವಿತ್ತು. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಹ ಬಂದಿದ್ದರು. ಇಲ್ಲಿನ ಆಕರ್ಷಣೆ ಅಂದರೆ ಹತ್ತಾರು ಕ್ವಿಂಟಾಲ್ ಚಂಡು ಹೂವು.  ಅದು ಸನ್ಮಾನಿತರಿಗಾಗಿ ತರಲಾಗಿತ್ತು. ಸನ್ಮಾನ ಮಾಡುತ್ತಿದ್ದಂತೆ ತಲೆಯ ಮೇಲೆ ಹೂವು ಹಾಕುವುದು ಎಂದು ನಿರ್ಧರಿಸಲಾಗಿತ್ತು. ಜೊತೆಗೆ ಹೂವನ್ನು ಮುರಿದು ಸನ್ಮಾನಿತರ ಮೇಲೆ ಹಾಕಲು ಅನುಕೂಲ ಆಗುವಂತೆ ಮಾಡಲಾಗಿತ್ತು. ಆದರೆ ಹೀಗೆ ಹೂವು ಹಾಕಿದ್ದೇ ತಡ ಅದು ಸಂಸದರಿಗೆ ಅಲರ್ಜಿ ಉಂಟು ಮಾಡಿದೆ.

ನೇರವಾಗಿ ಜಮೀನಿನಿಂದ ಹೂವು ತಂದು ಅತಿಥಿಗಳ ಮೇಲೆ ಹಾಕುವುದು ಇತ್ತೀಚಿನ ದೊಡ್ಡ ಪ್ರತಿಷ್ಠೆ ಆಗಿದೆ. ಬಹುತೇಕ ನಾಯಕರಿಗೆ ಇಂತಹ ಹೂವು ಹಾಕುವುದನ್ನು ನೋಡಿದ್ದೇವೆ. ಮೇಲಾಗಿ ಜನ ಪ್ರತಿನಿಧಿಗಳು ಆದ ಹಿನ್ನೆಲೆ ಯಾರಿಗೂ ಹೂವು ಹಾಕಬೇಡಿ ಎನ್ನುವಂತಿಲ್ಲ. ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಮೈಮೇಲೆ ಹೂವು ಹಾಕಿಸಿಕೊಂಡ ಹಿನ್ನೆಲೆ ಸಂಸದರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಗುಣಮಟ್ಟದ ಹಾಗೂ ನೀರಿನಿಂದ ಸ್ವಚ್ಛ ಮಾಡಿದ ಹೂವುಗಳನ್ನು ಹಾಕುವತ್ತ ಅಭಿಮಾನಿಗಳು ಗಮನ ಹರಿಸಬೇಕಾಗಿದೆ. ಏಕೆಂದರೆ ಬೆಳೆಸುವಾಗ ಕೆಲವು ಹೂವುಗಳಿಗೆ ಔಷಧಿ ಬಳಸುತ್ತಾರೆ. ಇದು ಹೀಗೆ ತೊಂದರೆಯನ್ನು ಉಂಟು ಮಾಡುವ ಸಾಧ್ಯತೆ ಇದೆ.

ವರದಿ: ಬಸವರಾಜ್ ದೊಡ್ಮನಿ

ಇದನ್ನೂ ಓದಿ: ದಾವಣಗೆರೆ: ಸೂಳೆಕೆರೆ ಕೋಡಿ ಬಿದ್ದ ಹಿನ್ನೆಲೆ ಕೆಂಗಾಪುರ ಕಣಿವೆ ಬಿಳಚಿ ಮಧ್ಯೆ ಇರುವ ಸೇತುವೆ​ ಜಲಾವೃತ

ಕರ್ನಾಟಕ ಬಂದ್​ ಮಧ್ಯೆ ಮರಾಠಿಗರ ವಿಜಯೋತ್ಸವ: ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ, ಸಿಹಿ ಹಂಚಿಕೆ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ