AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಗಳು ನಾಟಕ: ಇಟಲಿಯಿಂದ ಶುರುವಾಗುವ ಸನ್ನಿವೇಶ ಶ್ರೀರಂಗಪಟ್ಟಣದಲ್ಲಿ ಅಂತ್ಯ, ಏನಿದರ ತಿರುಳು?

ಇಟಲಿಯ ಸನ್ನಿವೇಶದೊಂದಿಗೆ ಆರಂಭವಾಗುವ ಗಾಯಗಳು ಎಂಬ ನಾಟಕ ಶ್ರೀರಂಗಪಟ್ಟಣದ ಸನ್ನಿವೇಶದೊಂದಿಗೆ ಅಂತ್ಯಗೊಳ್ಳುತ್ತದೆ. ಕುವೆಂಪು ಅವರ ಸ್ಮಶಾನ ಕುರುಕ್ಷೇತ್ರ, ‘ಅಜ್ಞಾತನೊಬ್ಬನ ಆತ್ಮಚರಿತ್ರೆ’ ಸೇರಿದಂತೆ ಹಲವರು ರಚಿಸಿದ ಭಾಗಗಳನ್ನು ಈ ನಾಟಕದಲ್ಲಿ ಬಳಸಿಕೊಳ್ಳಲಾಗಿದೆ.

ಗಾಯಗಳು ನಾಟಕ: ಇಟಲಿಯಿಂದ ಶುರುವಾಗುವ ಸನ್ನಿವೇಶ ಶ್ರೀರಂಗಪಟ್ಟಣದಲ್ಲಿ ಅಂತ್ಯ, ಏನಿದರ ತಿರುಳು?
ಗಾಯಗಳು ನಾಟಕ ಪ್ರದರ್ಶನ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Aug 18, 2023 | 6:05 PM

Share

ದಾವಣಗೆರೆ, ಆಗಸ್ಟ್ 18: ಇಲ್ಲಿನ ಬಿಐಇಟಿ ಕಾಲೇಜಿನ ಎಸ್‌.ಎಸ್‌. ಮಲ್ಲಿಕಾರ್ಜುನ್ ಸಭಾಂಗಣದಲ್ಲಿ ನಿರ್ದಿಗಂತ ರಂಗಪಯಣದ ಕಲಾವಿದರು ಅಭಿನಯಿಸಿದ ಗಾಯಗಳು (Gayagalu) ಎಂಬ ನಾಟಕ ಜನರ ಮನಸೂರೆಗೊಳಿಸಿತು. ರಂಗ ನಿರ್ದೇಶಕ ಶ್ರೀಪಾದ ಭಟ್ ನಿರ್ದೇಶನದ ಈ ನಾಟಕವನ್ನು ಒಂದು ಮುಕ್ಕಾಲು ಗಂಟೆಗಳ ಕಾಲ ಪ್ರೇಕ್ಷಕರು ಕುತೂಹಲದಿಂದ ವೀಕ್ಷಿಸಿದರು.

ಕಲಾವಿದರು ತಮ್ಮ ಅಭಿನಯದ ಮೂಲಕ ಸಭಾಂಗಣದಲ್ಲಿ ಸೇರಿದ್ದ ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿದರು. ಉಪನ್ಯಾಸಕರು, ವಿದ್ಯಾರ್ಥಿಗಳು, ವಕೀಲರು, ಕಲಾವಿದರು, ಶಿಕ್ಷಕರು ಕುಟುಂಬ ಸಮೇತ ಬಂದು ಪ್ರದರ್ಶನ ವೀಕ್ಷಿಸಿದರು.

ಇಟಲಿಯ ಸನ್ನಿವೇಶದೊಂದಿಗೆ ಆರಂಭವಾಗುವ ನಾಟಕವು ಶ್ರೀರಂಗಪಟ್ಟಣದ ಸನ್ನಿವೇಶದೊಂದಿಗೆ ಅಂತ್ಯಗೊಳ್ಳುತ್ತದೆ. ಕುವೆಂಪು ಅವರ ಸ್ಮಶಾನ ಕುರುಕ್ಷೇತ್ರ, ‘ಅಜ್ಞಾತನೊಬ್ಬನ ಆತ್ಮಚರಿತ್ರೆ’ ಸೇರಿದಂತೆ ಹಲವರು ರಚಿಸಿದ ಭಾಗಗಳನ್ನು ನಾಟಕದಲ್ಲಿ ಬಳಸಿಕೊಳ್ಳಲಾಗಿದೆ.

ಕೋಮುಗಲಭೆ, ಜಾತಿ, ಹಿಂಸೆಯಿಂದ ಸಮಾಜದಲ್ಲಿ ಗಾಯಗಳು ಆಗಿವೆ. ಈ ಗಾಯಗಳಿಗೆ ಕಾರಣವಾಗಿರುವ ಆಯುಧಗಳನ್ನು ಒಂದು ಶವಪೆಟ್ಟಿಗೆಯಲ್ಲಿ ತುಂಬಿಕೊಂಡು ಹೋಗುವ ಕೊನೆಯ ದೃಶ್ಯರೂಪಕದ ಮೂಲಕ ನಾಟಕ ಅಂತ್ಯವಾಗುತ್ತದೆ. ಆ ಬಳಿಕ ಮಹಿಳೆಯರು ದೀಪ ಹಿಡಿದು ಬರುತ್ತಾರೆ. ಸಮಾಜದಲ್ಲಿ ಹಿಂಸೆ ಬೇಡ, ಶಾಂತಿ ಬೇಕು ಎಂಬುದನ್ನು ಇದು ಬಿಂಬಿಸಿತು.

ಇದನ್ನೂ ಓದಿ: ದುರ್ಗದ ಕಾವಾಡಿಗರ ಹಟ್ಟಿಯಲ್ಲಿ ಸರಣಿ ಸಾವಿಗೆ ದಾವಣಗೆರೆಯ ಸೂಳೆಕೆರೆ ನೀರು ಕಾರಣವಾ? ಲ್ಯಾಬ್ ವರದಿ ಫಲಿತಾಂಶ ಇಲ್ಲಿದೆ

ನಾಟಕ ವೀಕ್ಷಿಸಿದ ಎಸ್.ಎಸ್. ಕೇರ್ ಲೈಫ್ ಟ್ರಸ್ಟಿ ಡಾ.ಪ್ರಭಾ ಮಲ್ಲಿಕಾರ್ಜುನ್, ಸಮಾಜದಲ್ಲಿ ನಡೆಯುವ ಕೋಮುವಾದ, ಜಾತಿ ಗಲಭೆಯನ್ನು ಕೊನೆಗಾಣಿಸಬೇಕು ಎಂಬ ಧಾಟಿಯಲ್ಲಿ ಈ ನಾಟಕ ಇದೆ. ಯುವಕರೇ ಅಭಿನಯಿಸಿರುವ ಈ ನಾಟಕ ಯುವಜನರ ಮೇಲೆ ಒಳ್ಳೆಯ ಪರಿಣಾಮ ಬೀರಲಿದೆ. ನಾಟಕದ ಕಥಾವಸ್ತು ಉತ್ತಮವಾಗಿದ್ದು, ಪ್ರಸ್ತುತ ಸಮಾಜದ ಸಮಸ್ಯೆಗಳೆಂಬ ಗಾಯಗಳಿಗೆ ಮುಲಾಮು ಹಚ್ಚುವಂತಿದೆ ಎಂದರು.

ಇವತ್ತಿನ ಜ್ವಲಂತ ಸಮಸ್ಯೆಗೆ ಮನುಷ್ಯತ್ವದ ಗುಣಗಳನ್ನು ಇಟ್ಟುಕೊಂಡು ಮಾನವೀಯ ನೆಲೆಗಟ್ಟಿನ ಮೇಲೆ ಸಮಾಜದೊಂದಿಗೆ ಕಲಾವಿದರ ಮೂಲಕ ಸಂವಾದಿಸಿದ್ದೇವೆ. ವಿವಿಧ ನಾಟಕಗಳ ಕಲಾ ಪ್ರಕಾರಗಳು, ತುಣುಕುಗಳನ್ನು, ಕಥೆಗಳನ್ನು ತೆಗೆದುಕೊಂಡು ಹೊಸ ಕಲಾವಿದರು ಅಭಿನಯಿಸಿದ್ದಾರೆ. ಕೋಮುದ್ವೇಷವಾಗಲಿ, ಯುದ್ಧವಾಗಲಿ ಅಥವಾ ಎರಡು ಮನಸ್ಸಿನ ಕಂದಕಗಳಾಗಲಿ, ಇವತ್ತಿನ ಜಗತ್ತಿಗೆ ಅನವಶ್ಯಕ. ನಾಟಕವೂ ಇದನ್ನೇ ಹೇಳುತ್ತಿದೆ ಎಂದು ನಿರ್ದಿಗಂತದ ಸೃಜನಶೀಲ ನಿರ್ದೇಶಕಿ ಪ್ರೀತಿ ನಾಗರಾಜ ತಿಳಿಸಿದರು.

ರಂಗ ಬಳಗ, ಅನ್ವೇಷಕರು ಆರ್ಟ್ಸ್ ಫೌಂಡೇಷನ್, ಎಸ್‌.ಎಸ್.ಕೇರ್ ಟ್ರಸ್ಟ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಈ ನಾಟಕ ಪ್ರದರ್ಶನ ನಡೆಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?