Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಕಾಮುಕ ಶಿಕ್ಷಕನಿಗೆ ಸ್ಥಳೀಯರಿಂದ ಧರ್ಮದೇಟು

ವಿದ್ಯಾರ್ಥಿನಿಯರು ಮನೆಯಲ್ಲಿ ಹೇಳಿದ ಹಿನ್ನೆಲೆ ಶಾಲೆಗೆ ಬಂದು ಆರೋಪಿ ಶಿಕ್ಷಕನಿಗೆ ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಕೆಲ ದಿನಗಳಿಂದ ವಿದ್ಯಾರ್ಥಿಯರಿಗೆ ಶಿಕ್ಷಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಕಾಮುಕ ಶಿಕ್ಷಕನಿಗೆ ಸ್ಥಳೀಯರಿಂದ ಧರ್ಮದೇಟು
ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ಲೋಕೇಶ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Oct 01, 2022 | 11:14 AM

ದಾವಣಗೆರೆ: ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ (sexual harassment) ನೀಡಿದ್ದು, ಸ್ಥಳೀಯರು ಶಿಕ್ಷಕನಿಗೆ ಗೂಸಾ ನೀಡಿರುವಂತಹ ಘಟನೆ ಜಿಲ್ಲೆ ಚನ್ನಗಿರಿ ತಾಲೂಕಿನ ಯರಗಟ್ಟೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಲೋಕೇಶ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಾಥಮಿಕ ಶಾಲೆ ಶಿಕ್ಷಕ. ಈ ವಿಚಾರವನ್ನು ವಿದ್ಯಾರ್ಥಿನಿಯರು ಮನೆಯಲ್ಲಿ ಹೇಳಿದ ಹಿನ್ನೆಲೆ ಶಾಲೆಗೆ ಬಂದು ಆರೋಪಿ ಶಿಕ್ಷಕನಿಗೆ ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಕೆಲ ದಿನಗಳಿಂದ ವಿದ್ಯಾರ್ಥಿಯರಿಗೆ ಶಿಕ್ಷಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಬಟ್ಟೆ ಖರೀದಿ ಮಾಡಿ ದುಡ್ಡು‌ಕೊಡದೇ ಯುವತಿ ಪರಾರಿಯಾಗಿರುವಂತಹ ಘಟನೆ ಕೂಡ ದಾವಣಗೆರೆ ನಗರದ ನಿಟ್ಟುವಳಿಯಲ್ಲಿನ ಎ2 ಫ್ಯಾಷನ್ ಅಂಗಡಿಯಲ್ಲಿ ನಡೆದಿದೆ. 2600 ಬೆಲೆ ಬಾಳು ಮೂರು ಟೀ ಶರ್ಟ, ಮೂರು ಬರ್ಮೋಡ ಖರೀದಿಸಿದ ಯುವತಿ‌, ಪೇಟಿಯಂ ವರ್ಕ ಮಾಡುತ್ತಿಲ್ಲ ಸ್ಕೂಟಿಯಲ್ಲಿ ದುಡ್ಡಿದೆ ಎಂದು ಹೇಳಿ ಪರಾರಿಯಾಗಿದ್ದಾಳೆ. ಯುವತಿಯ ಚಲನವಲನ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಕೆಟಿಜೆನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ವಸೂಲಿಗೆ ಬಂದಿದ್ದ ನಕಲಿ ಪತ್ರಕರ್ತನಿಗೆ ಮಹಿಳೆಯಿಂದ ಧರ್ಮದೇಟು 

ತುಮಕೂರು: ಪತ್ರಕರ್ತನ ಹೆಸರೇಳಿಕೊಂಡು ವಸೂಲಿಗೆ ಬಂದವನಿಗೆ ಮಹಿಳೆಯರು ಚಪ್ಪಲಿ ಏಟು ನೀಡಿರುವಂತಹ ಘಟನೆ ತುಮಕೂರಿನಲ್ಲಿ ನಡೆದಿದೆ. ನಗರ ಜೀವನೋಪಾಯ ಕೇಂದ್ರದಲ್ಲಿ ಸಿಆರ್​ಪಿ ಆಗಿ ಮಹಿಳೆ ಕೆಲಸ ಮಾಡುತ್ತಿದ್ದಳು. ಮಹಿಳೆ ಜೊತೆ ಮಾತನಾಡುತ್ತ ಲಂಚದಾಸೆ ತೋರಿಸಿ ನಕಲಿ ಪತ್ರಕರ್ತ ವಿಡಿಯೋ ಮಾಡಿಕೊಂಡಿದ್ದ. ಬಳಿಕ ವಿಡಿಯೋ ತೋರಿಸಿ ವಸೂಲಿಗೆ ಇಳಿದಿದ್ದ. ಮಹಿಳೆಗೆ ವಿಡಿಯೋ ಕಳಿಸಿ 4 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ. ಹಣ ಕೊಡದಿದ್ದಕ್ಕೆ ನನ್ನ ಜೊತೆ ಒಂದು ರಾತ್ರಿ ಕಳಿಯಬೇಕು ಎಂದು ಮೆಸೇಜ್ ಮಾಡಿದ್ದನಂತೆ. ಮಹಿಳೆ ಕೆಲಸ ಮಾಡುವ ಜಾಗಕ್ಕೆ ಬಂದು ಬೆದರಿಕೆ ಹಾಕುತ್ತಿದ್ದಾಗ ಧರ್ಮದೇಟು ನೀಡಲಾಗಿದೆ. ಸದ್ಯ ನಾಲ್ವರಿಗೆ ಭರ್ಜರಿ ಗೂಸಾ ಬಿದಿದ್ದು, ನಾಲ್ವರನ್ನು ತುಮಕೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಕೌಟುಂಬಿಕ ಕಲಹ ಮನನೊಂದ ವ್ಯಕ್ತಿ ನೇಣಿಗೆ ಶರಣು;

ನೆಲಮಂಗಲ: ಕೌಟುಂಬಿಕ ಕಲಹ ಮನನೊಂದು ವ್ಯಕ್ತಿ ನೇಣಿಗೆ ಶರಣಾಗಿರುವಂತಹ ಘಟನೆ ತಾಲೂಕಿನ ಘಂಟೆಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಚೌಡಯ್ಯ (39) ಮೃತ ದುರ್ದೈವಿ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ. ಕಳೆದೊಂದು ವಾರದಿಂದ ಪತಿ ಪತ್ನಿ ನಡುವೆ ಜಗಳ ಉಂಟಾಗಿದೆ. ಜಗಳಕ್ಕೆ ಬೇಸತ್ತು ತವರು ಮನೆಗೆ ಪತ್ನಿ ತೆರಳಿದ್ದಾಳೆ. ಸ್ಥಳಕ್ಕೆ ದಾಬಸ್‌ಪೇಟೆ ಪೊಲೀಸರ ಭೇಟಿ, ಪ್ರಕರಣ ದಾಖಲು ಮಾಡಲಾಗಿದೆ.

ಬಳಗಾನೂರಿನಲ್ಲಿ ಮಳೆಯಿಂದ ಮನೆ ಕುಸಿದು ವೃದ್ಧ ಸಾವು

ರಾಯಚೂರು: ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದಲ್ಲಿ ರಾತ್ರಿ ಸುರಿದ ಮಳೆಯಿಂದಾಗಿ ಮನೆ‌ ಕುಸಿದು ಚಿನಿವಾಲ್(60) ಎನ್ನುವವರು ಸಾವನ್ನಪ್ಪಿದ್ದಾರೆ. ಮನೆಯಲ್ಲಿ ಮಲಗಿದ್ದಾಗ ಏಕಾಏಕಿ ಮನೆ ಕುಸಿದು ದುರಂತ ಸಂಭವಿಸಿದೆ. ಬಳಗಾನೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:13 am, Sat, 1 October 22

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್