ತಾವು ವ್ಯಾಸಂಗ ಮಾಡಿದ ಬಡ ಶಾಲೆಯನ್ನು ಫಳ ಫಳ ಹೊಳೆಯುವಂತೆ ಮಾಡಿರುವ ಹೃದಯ ಶ್ರೀಮಂತ ಹಳೆಯ ವಿದ್ಯಾರ್ಥಿಗಳು

ಹೀಗೆ ಹಲವಾರು ಕಾರ್ಯಗಳನ್ನ ಮಾಡುತ್ತಿರುವ ಶಾಮನೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಈ ಹಳೇ ವಿದ್ಯಾರ್ಥಿಗಳ ಪೈಕಿ ಬಹುತೇಕರು ಈಗ ದೇಶವಿದೇಶಗಳಲ್ಲಿ ಇದ್ದಾರೆ. ಸ್ಥಳೀಯವಾಗಿ ಇರುವ ಸೇಹಿತರಿಗೆ ಇಲ್ಲಿನ ಕಾಮಗಾರಿ ಹಾಗೂ ಕಾರ್ಯಕ್ರಮಗಳ ಉಸ್ತುವಾರಿ ನೀಡಲಾಗಿದೆ. ಈ ಶಾಲೆಯಲ್ಲಿ ಕಡುಬಡವರ ಮಕ್ಕಳು ಇದ್ದಾರೆ.

ತಾವು ವ್ಯಾಸಂಗ ಮಾಡಿದ ಬಡ ಶಾಲೆಯನ್ನು ಫಳ ಫಳ ಹೊಳೆಯುವಂತೆ ಮಾಡಿರುವ ಹೃದಯ ಶ್ರೀಮಂತ ಹಳೆಯ ವಿದ್ಯಾರ್ಥಿಗಳು
ಸ್ಮಾರ್ಟ್​​ ಸಿಟಿ ದಾವಣಗೆರೆಯ ಶಾಮನೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ
Follow us
| Updated By: ಸಾಧು ಶ್ರೀನಾಥ್​

Updated on: Dec 20, 2023 | 5:34 PM

ತಾವು ಕಲಿತ ಶಾಲೆಗಳನ್ನ ದತ್ತು ಪಡೆದು ಸುಧಾರಣೆ ಮಾಡುತ್ತಿರುವ ಹತ್ತಾರು ಪ್ರಕರಣಗಳನ್ನ ಇತ್ತೀಚಿಗೆ ಹೆಚ್ಚು ಹೆಚ್ಚು ನೋಡಿದ್ದೀರಿ. ಆದ್ರೆ ಇಲ್ಲೊಂದಿಷ್ಟು ಮಂದಿ, ಒಂದಷ್ಟು ದಿನ ಪ್ರತಿಷ್ಠಿತ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದು (Alumni), ಅವರೆಲ್ಲಾ ಒಂದಿಲ್ಲೊಂದು ಪ್ರತಿಷ್ಠಿತ ಹುದ್ದೆಯಲ್ಲಿದ್ದಾರೆ. ಈಗ ಅವರೆಲ್ಲಾ ಸೇರಿ ಸರ್ಕಾರಿ ಶಾಲೆ ಉದ್ಧಾರ ಮಾಡಲು ಮುಂದಾಗಿದ್ದಾರೆ. ಅದೇ ಇಲ್ಲಿನ ಶಾಮನೂರು ಶಾಲೆ, ಅದೀಗ ಫಳ ಫಳ ಹೊಳೆಯುತ್ತಿರುವ ಕುರಿತಾದ ಸ್ಟೋರಿ ಇಲ್ಲಿದೆ. ಜೊತೆಗೆ ಅದು ಸ್ಮಾರ್ಟ್​​ ಸಿಟಿ ದಾವಣಗೆರೆಯಲ್ಲಿ (Davanagere) ಇರುವ ಶಾಮನೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (Government Higher Primary School, Shamanur). ಇಂತಹ ಶಾಲೆ ಎಲ್ಲಿ ನೋಡಿದರಲ್ಲಿ ಫಳ ಫಳ ಎನ್ನುತಿದೆ ಈಗ. ಶಾಲೆಯ ಗೋಡೆಗಳು ಹತ್ತಾರು ಚಿತ್ತಾರಗಳಿಂದ ಮಕ್ಕಳನ್ನ ಆಕರ್ಷಿಸುತ್ತಿದೆ. ಜೊತೆಗೆ ಅಲ್ಲಿ ಇಲ್ಲಿ ಗೋಡೆ ಬಿರುಕು ಬಿಟ್ಟ ಕಾರಣ ಭಯ ಪಡುತ್ತಿದ್ದ ಮಕ್ಕಳು (Students) ಈಗ ನೆಮ್ಮದಿಯಾಗಿದ್ದಾರೆ.

ಕಾರಣ ಆ ಗೋಡೆಗಳನ್ನ ದುರಸ್ಥಿ ಮಾಡಲಾಗಿದೆ. ಶಾಲೆಗೆ ಬೇಕಾದ ಪರಿಕರಗಳನ್ನ ಕೊಡಿಸಲಾಗಿದೆ. ದಾವಣಗೆರೆ ಬಾಪೂಜಿ ಸಿಬಿಎಸ್ಸಿ ಶಾಲೆಯ ಹಳೇ ವಿದ್ಯಾರ್ಥಿಗಳು ಅಂದರೆ 1988ರಿಂದ 2022ರವರೆಗೆ ಬಾಪೂಜಿ ಶಾಲೆಯಲ್ಲಿ ಓದಿದ ಬಹುತೇಕರು ಸೇರಿ ಈ ಸರ್ಕಾರ ಶಾಲೆಯನ್ನು ದತ್ತು ಪಡೆದು ನಿತ್ಯ ಒಂದಿಲ್ಲೊಂದು ಕಾಮಗಾರಿ ಕೆಲಸ ಮಾಡಿಸುತ್ತಿದ್ದಾರೆ.

ಹೀಗೆ ಹಲವಾರು ಕಾರ್ಯಗಳನ್ನ ಮಾಡುತ್ತಿರುವ ಈ ಹಳೇ ವಿದ್ಯಾರ್ಥಿಗಳ ಪೈಕಿ ಬಹುತೇಕರು ಈಗ ದೇಶವಿದೇಶಗಳಲ್ಲಿ ಇದ್ದಾರೆ. ಸ್ಥಳೀಯವಾಗಿ ಇರುವ ಸೇಹಿತರಿಗೆ ಇಲ್ಲಿನ ಕಾಮಗಾರಿ ಹಾಗೂ ಕಾರ್ಯಕ್ರಮಗಳ ಉಸ್ತುವಾರಿ ನೀಡಲಾಗಿದೆ. ಈ ಶಾಲೆಯಲ್ಲಿ ಕಡುಬಡವರ ಮಕ್ಕಳು ಇದ್ದಾರೆ.

Good News: ಪೋಷಕರ ಕಾನ್ವೆಂಟ್ ಮೋಹದಿಂದ ಮುಚ್ಚಿಹೋಗಿದ್ದ 84 ವರ್ಷಗಳ ಇತಿಹಾಸವಿರೋ ಶಾಲೆಗೆ ಮರುಜೀವ

ಇವರಿಗೆ ಆರ್ಥಿಕ ಸಂಕಷ್ಟ ಇರುತ್ತದೆ. ಇಂತಹ ಮಕ್ಕಳಿಗೆ ಆರ್ಥಿಕ ಸಹಾಯ ಸಹ ನೀಡಲಾಗುತ್ತಿದೆ. ಕೆಲ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕೋಚಿಂಗ್ ಸಹ ಕೊಡಿಸಲಾಗುತ್ತಿದೆ. ಜೊತೆಗೆ ಅಧ್ಯಯನದಲ್ಲಿ ಹಿಂದೆ ಉಳಿದ ಮಕ್ಕಳಿಗೆ ಹೆಚ್ಚುವರಿ ತರಗತಿ ತೆಗೆದುಕೊಂಡು ಕಲಿಕಾ ಆಸಕ್ತಿ ಹೆಚ್ಚಿಸುವುದು ಇವರ ಉದ್ದೇಶವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ