AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಹೋರಾಟಕ್ಕೆ ಮಣಿದ ಸರ್ಕಾರ; ಭದ್ರಾ ಬಲದಂಡೆ , ಎಡದಂಡೆ ನಾಲೆಗಳಿಗೆ ನೀರು ಬಿಡುಗಡೆ

ಭದ್ರಾ ಜಲಾಶಯದಿಂದ ಬೆಳೆಗಳಿಗೆ ನೀರು ಬಿಡುವಂತೆ ಆಗ್ರಹಿಸಿ ಜಿಲ್ಲೆಯಾದ್ಯಂತ ರೈತರು ಪ್ರತಿಭಟನೆ ನಡೆಸಿದ್ದರು. ಅಷ್ಟೇ ಅಲ್ಲದೇ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೇಬೆನ್ನೂರಿನಲ್ಲಿ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಕೂಡ ಯತ್ನಿಸಿದ್ದರು. ಇದೀಗ ರೈತರ ಹೋರಾಟಕ್ಕೆ ಮಣಿದ ಸರ್ಕಾರ ನೀರು ಬಿಡುಗಡೆಗೆ ಅನುಮತಿ ನೀಡಿದೆ.

ರೈತರ ಹೋರಾಟಕ್ಕೆ ಮಣಿದ ಸರ್ಕಾರ; ಭದ್ರಾ ಬಲದಂಡೆ , ಎಡದಂಡೆ ನಾಲೆಗಳಿಗೆ ನೀರು ಬಿಡುಗಡೆ
ಭದ್ರಾ ಜಲಾಶಯ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Sep 26, 2023 | 5:37 PM

Share

ದಾವಣಗೆರೆ, ಸೆ.26: 2023-24 ನೇ ಸಾಲಿನಲ್ಲಿ ಶಿವಮೊಗ್ಗ ಭದ್ರಾ ಜಲಾಶಯ(Bhadra Dam) ದ ಮುಂಗಾರು ಬೆಳೆಗಳಿಗೆ ಬಲದಂಡೆ ಹಾಗೂ ಎಡದಂಡೆ ನಾಲೆಗಳಿಗೆ ನೀರನ್ನು ಸರದಿಯನ್ವಯ ಹರಿಸಲಾಗುವುದು ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ(KNNL) ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಸುಜಾತ ಅವರು ತಿಳಿಸಿದ್ದಾರೆ. ಭದ್ರಾ ಬಲದಂಡೆ ನಾಲೆಗಳಿಗೆ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 15 ರವರೆಗೆ ಒಟ್ಟು 20 ದಿನಗಳು ಹಾಗೂ ಅಕ್ಟೋಬರ್ 26 ರಿಂದ ನವೆಂಬರ್ 17 ರವರೆಗೆ ಒಟ್ಟು 23 ದಿನಗಳು ನೀರನ್ನು ಹರಿಸಲಾಗುವುದು ಎಂದಿದ್ದಾರೆ.

ಭದ್ರಾ ಎಡದಂಡೆ ನಾಲೆಗಳಿಗೆ ಈಗಾಗಲೇ ನೀರನ್ನು ಹರಿಸಲಾಗಿದ್ದು, ಅಕ್ಟೋಬರ್ 1 ರವರೆಗೆ ಒಟ್ಟು 15 ದಿನಗಳು ನೀರನ್ನು ಹರಿಸಲಾಗುತ್ತದೆ. ನಂತರ ಅಕ್ಟೋಬರ್ 12 ರಿಂದ 26 ರವರೆಗೆ ಒಟ್ಟು 15 ದಿನಗಳು ಹಾಗೂ ನವೆಂಬರ್ 6 ರಿಂದ 17 ರವರೆಗೆ ಒಟ್ಟು 12 ದಿನಗಳು ನೀರನ್ನು ಹರಿಸಲಾಗುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ:4 ಜಿಲ್ಲೆಗಳ ರೈತರ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಕೇವಲ 24 ಗಂಟೆಯಲ್ಲಿ ಹರಿದುಬಂತು 5 TMC ನೀರು

ಹೌದು, ಭದ್ರಾ ಜಲಾಶಯದಿಂದ ಬೆಳೆಗಳಿಗೆ ನೀರು ಬಿಡುವಂತೆ ಆಗ್ರಹಿಸಿ ಜಿಲ್ಲೆಯಾದ್ಯಂತ ರೈತರು ಪ್ರತಿಭಟನೆ ನಡೆಸಿದ್ದರು. ಅಷ್ಟೇ ಅಲ್ಲದೇ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೇಬೆನ್ನೂರಿನಲ್ಲಿ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಕೂಡ ಯತ್ನಿಸಿದ್ದರು. ಕೂಡಲೇ ಪೊಲೀಸರು ರೈತನ ಕೈಯಿಂದ ಕ್ರಿಮಿನಾಶಕದ ಬಾಟಲ್ ಕಸಿದುಕೊಂಡಿದ್ದರು. ಬಳಿಕ ರೈತರ ಪ್ರತಿಭಟನೆಯಿಂದ ಎಚ್ಚೆತ್ತ ಸಚಿವ ಎಸ್​ಎಸ್ ಮಲ್ಲಿಕಾರ್ಜುನ ಅವರು ಭದ್ರಾ ನೀರಿನ ಬಗ್ಗೆ ಮತ್ತೊಮ್ಮೆ ಸ್ಪಷ್ಟನೆ ನೀಡಿ, ‘ಇನ್ನೇರಡು ದಿನಗಳಲ್ಲಿ ನೀರಿನ ಸಮಸ್ಯೆಗೆ ಪರಿಹಾರ ಸಿಗುತ್ತದೆ. ದಾವಣಗೆರೆ ಜಿಲ್ಲೆಗೆ ಭದ್ರಾ ನೀರು ಬರುತ್ತದೆ. ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದ್ದರು.

ಇನ್ನು ಇದೇ ಆಗಸ್ಟ್​ 10 ರಂದು ನೀರಾವರಿ ಸಲಹಾ ಸಮಿತಿಯವರು ನೀರು ಹರಿಸುವ ಸಂಬಂಧ ಸಭೆ ಆಯೋಜಿಸದೆಯೇ ಭದ್ರಾ ಬಲದಂಡೆ ಕಾಲುವೆಗೆ ನೀರು ಹರಿಸುವ ತೀರ್ಮಾನ ಕೈಗೊಂಡಿತ್ತು. ಅದರಂತೆ ಸತತ 100 ದಿನಗಳ ಕಾಲ ನೀರು ಹರಿಸುವ ಅಧಿಸೂಚನೆಯನ್ನೂ ಹೊರಡಿಸಲಾಗಿತ್ತು. ಭದ್ರ ಬಲ ಮತ್ತು ಎಡದಂಡೆ ಕಾಲುವೆಗಳಿಗೆ ನೀರು ಹರಿಸಿದ್ದರಿಂದ ದಾವಣಗೆರೆ ಜಿಲ್ಲೆಯಲ್ಲಿ 53 ಸಾವಿರ ಹೆಕ್ಟೇರ್​ ಪ್ರದೇಶದಲ್ಲಿ ಭತ್ತ ನಾಟಿ ಮಾಡಲಾಗಿತ್ತು. ಇದೀಗ ನೀರು ಬಿಟ್ಟಿರುವುದು ರೈತರಿಗೆ ಬಲ ಬಂದಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?