ಗಡಿಯಲ್ಲಿ ದೇಶ ಸೇವೆ ಸಲ್ಲಿಸಿ ಬಂದ ಯೋಧರಿಗೆ ಅದ್ಧೂರಿ ಸ್ವಾಗತ

ದಾವಣಗೆರೆ: ಗಡಿಯಲ್ಲಿ ದೇಶಕ್ಕಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಯೋಧರಿಗೆ ನಗರದ ರೈಲ್ವೆ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ದೊರಕಿದೆ. ನಿವೃತ್ತ ಯೋಧರಾದ ಸಾಸಲು ಗ್ರಾಮದ ಜಯಣ್ಣ, ದಾವಣಗೆರೆಯ ಕೆಟಿಜೆ ನಗರದ ಸುಶೀಲಕುಮಾರ ಹಾಗು ತುರ್ಚುಘಟ ಗ್ರಾಮದ ಶ್ರೀನಿವಾಸ್​ಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಈ ಮೂವರು 20 ವರ್ಷಗಳ ಕಾಲ ಬಿಎಸ್ಎಫ್​ನಲ್ಲಿ ಸೇವೆ ಸಲ್ಲಿಸಿದ್ದರು. ನಿವೃತ್ತಿಯಾಗಿ ದಾವಣಗೆರೆಗೆ ಆಗಮಿಸಿದ ಯೋಧರಿಗೆ ಕುಟುಂಬಸ್ಥರು ಆರತಿ ಮಾಡಿ ತಿಲಕವಿಟ್ಟು ಸ್ವಾಗತ ಕೋರಿದ್ದಾರೆ. ನಿವೃತ್ತ ಯೋಧರ ಸಂಘ ಹಾಗು ಹಿಂದೂ ಜಾಗರಣ ವೇದಿಕೆಯಿಂದಲೂ ಅದ್ಧೂರಿ […]

ಗಡಿಯಲ್ಲಿ ದೇಶ ಸೇವೆ ಸಲ್ಲಿಸಿ ಬಂದ ಯೋಧರಿಗೆ ಅದ್ಧೂರಿ ಸ್ವಾಗತ
ಸಾಧು ಶ್ರೀನಾಥ್​

Updated on: Jan 06, 2020 | 12:13 PM

ದಾವಣಗೆರೆ: ಗಡಿಯಲ್ಲಿ ದೇಶಕ್ಕಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಯೋಧರಿಗೆ ನಗರದ ರೈಲ್ವೆ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ದೊರಕಿದೆ. ನಿವೃತ್ತ ಯೋಧರಾದ ಸಾಸಲು ಗ್ರಾಮದ ಜಯಣ್ಣ, ದಾವಣಗೆರೆಯ ಕೆಟಿಜೆ ನಗರದ ಸುಶೀಲಕುಮಾರ ಹಾಗು ತುರ್ಚುಘಟ ಗ್ರಾಮದ ಶ್ರೀನಿವಾಸ್​ಗೆ ಭರ್ಜರಿ ಸ್ವಾಗತ ಸಿಕ್ಕಿದೆ.

ಈ ಮೂವರು 20 ವರ್ಷಗಳ ಕಾಲ ಬಿಎಸ್ಎಫ್​ನಲ್ಲಿ ಸೇವೆ ಸಲ್ಲಿಸಿದ್ದರು. ನಿವೃತ್ತಿಯಾಗಿ ದಾವಣಗೆರೆಗೆ ಆಗಮಿಸಿದ ಯೋಧರಿಗೆ ಕುಟುಂಬಸ್ಥರು ಆರತಿ ಮಾಡಿ ತಿಲಕವಿಟ್ಟು ಸ್ವಾಗತ ಕೋರಿದ್ದಾರೆ. ನಿವೃತ್ತ ಯೋಧರ ಸಂಘ ಹಾಗು ಹಿಂದೂ ಜಾಗರಣ ವೇದಿಕೆಯಿಂದಲೂ ಅದ್ಧೂರಿ ಸ್ವಾಗತ ಕೋರಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us