AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಂಗು ಬೆಲೆ ಗಗನಕ್ಕೆ: ಎಳನೀರು ದರ ಏರಿಕೆಗೆ ಕಾರಣ ರಿವೀಲ್​

ಬೇಸಿಗೆ ಬಂದರೆ ಸಾಕು ಎಳನೀರಿನ ಬೆಲೆ ಗಗನಕ್ಕೆ ಏರುತ್ತದೆ. ಆದರೆ, ಈ ಚಳಿಗಾಲದಲ್ಲೂ ಎಳನೀರಿನ ಬೆಲೆ ಅಧಿಕವಾಗಿದೆ. ಒಂದು ಎಳನೀರಿನ ಕಾಯಿಗೆ 40 ರಿಂದ 60 ರೂಪಾಯಿ ಇದೆ. ದಿಢೀರನೆ ಬೆಲೆ ಏರಿಕೆಯಿಂದ ಜನರು ಕಂಗಾಲ ಆಗಿದ್ದಾರೆ. ಹಾಗಿದ್ದರೆ ಬೆಲೆ ಏರಿಕೆಗೆ ಕಾರಣವೇನು? ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ತೆಂಗು ಬೆಲೆ ಗಗನಕ್ಕೆ: ಎಳನೀರು ದರ ಏರಿಕೆಗೆ ಕಾರಣ ರಿವೀಲ್​
ತೆಂಗು ಬೆಳೆಗೆ ರೋಗ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Nov 19, 2024 | 10:57 AM

Share

ದಾವಣಗೆರೆ, ನವೆಂಬರ್​ 19: ಕಂದು ಹುಳು ಕಾಟದಿಂದ ಹರಿಹರ (Harihar) ತಾಲೂಕಿನ ರೈತರು (Farmers) ರೋಸಿ ಹೋಗಿದ್ದಾರೆ. ಇಲ್ಲಿನ ರೈತರ ಮೂಲ ಬೆಳೆಯಾದ ತೆಂಗಿಗೆ ಹುಳು ಕಾಟ ಶುರುವಾಗಿದೆ. ಕಂದು ಹುಳುಗಳು ತೆಂಗಿನ ಗರಿಗಳನ್ನು ತಿಂದು ಹಾಳು ಮಾಡುತ್ತವೆ. ಇದರಿಂದ, ಕೈಗೆ ಬಂದ ಬಳೆ ಬಾಯಿಗೆ ಬರದಂತಾಗಿದೆ. ಕಳೆದ ನಾಲ್ಕು ವರ್ಷಗಳಿಂದ ರೈತರಿಗೆ ಇದೇ ಬಾಧೆಯಾಗಿದೆ. ಅಲ್ಲದೇ ಈ ಕಂದು ಹುಳುಗಳು ದಿನಕ್ಕೆ ಸಾವಿರಾರು ಮೊಟ್ಟೆ ಹಾಕುವುದರಿಂದ, ಇವುಗಳ ಸಂತತಿ ಅಧಿಕವಾಗುತ್ತ ಹೋಗುತ್ತದೆ. ಇದರಿಂದ, ಬೆಳೆಗಳು ನಾಶವಾಗುತ್ತವೆ.

ಈ ಹುಳುಗಳನ್ನು ನಿಯಂತ್ರಿಸಲು ರೈತರು ಸಾವಿರಾರು ರೂಪಾಯಿ ಖರ್ಚು ಮಾಡಿ ಔಷಧಿ ಹಾಕಿದರೂ, ಯಾವುದೇ ಪ್ರಯೋಜನವಾಗಿಲ್ಲ. ರೈತರ ಸಂಕಷ್ಟಕ್ಕೆ ಪರಿಹಾರ ನೀಡಲು, ತೋಟಗಾರಿಕಾ ಇಲಾಖೆ ಮುಂದಾಗಿ, ಕಂದು ಹುಳು ತಿಂದು ಹಾಕುವ ಮತ್ತೊಂದು ಹುಳು ಅಭಿವೃದ್ಧಿ ಪಡಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಅಂತ ರೈತರು ಹೇಳುತ್ತಿದ್ದಾರೆ.

ಇದನ್ನೂ ಓದಿ: ಈರುಳ್ಳಿ ಬೆಲೆ ದಿಢೀರ್ ಇಳಿಕೆ, ಕ್ವಿಂಟಾಲ್​ಗೆ 4000 ಇದ್ದ ದರ 2000 ರೂ.ಗೆ ಕುಸಿತ, ರೈತರು ಕಂಗಾಲು

ಹೌದು, ಕಂದು ಹುಳುಗಳನ್ನು ನಾಶಕ್ಕೆ ತೋಟಗಾರಿಕೆ ಇಲಾಖೆ ಅಭಿವೃದ್ಧಿ ಪಡಿಸಿರುವ ಹುಳವನ್ನು ಬಿಟ್ಟರೂ, ಅಷ್ಟೊಂದು ಪ್ರಯೋಜನವಾಗಿಲ್ಲ ಎಂದು ರೈತರು ಹೇಳುತ್ತಿದ್ದಾರೆ. ಕಂದು ಹುಳು ಕಾಟದಿಂದ 10 ಸಾವಿರ ಕಾಯಿ ಬೆಳೆಯವ ತೋಟದಲ್ಲಿ, 3 ಸಾವಿರ ಕಾಯಿ ಬೆಳೆಯುತ್ತಿವೆ. ಶೇ70ರಷ್ಟು ಇಳುವರಿಗೆ ಹೊಡೆತ ಬಿದ್ದಿದೆ.

ತೆಂಗು

ಹೀಗಾಗಿ ತೆಂಗು ಬೆಳೆಗಾರರು ಬಂದಷ್ಟು ಬರಲು ಅಂತ ಸುಮ್ಮನಾಗಿದ್ದಾರೆ. ಕೆಲವರು ತೆಂಗಿನ ತೋಟಗಳನ್ನ ತೆಗೆದು ಅಡಿಕೆ ಮತ್ತು ಭತ್ತ ಬೆಳೆಯುತ್ತಿದ್ದಾರೆ. ಇನ್ನೂ ಕೆಲವರು ನಗರ ಪ್ರದೇಶಕ್ಕೆ ಹತ್ತಿರವಿದ್ದ ಜಮೀನುಗಳನ್ನು ನಿವೇಶನಗಳಾಗಿ ಪರಿವರ್ತಿಸಿ ಮಾರಾಟ ಮಾಡಲು ಮುಂದಾಗಿದ್ದಾರೆ. ವಿಜ್ಞಾನ ಇಷ್ಟು ಬೆಳೆದರೂ ಕಂದು ಬಣ್ಣದ ಹುಳು ನಿಯಂತ್ರಣಕ್ಕೆ ಸಾಧ್ಯವಾಗುತ್ತಿಲ್ಲ ಎಂಬುವುದೇ ಆತಂಕದ ವಿಚಾರ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?