
ದಾವಣಗೆರೆ, (ಮೇ 19): ಹರಿಹರ (Harihara) ಪಂಚಮಸಾಲಿ ಪೀಠದ ವಚನಾನಂದಶ್ರೀ (Vachananand Shri) ವಿರುದ್ಧ ಫೋಕ್ಸೋ ಪ್ರಕರಣದ ತನಿಖೆ ಮುಂದುವರೆದಿದ್ದು, ಈಗಾಗಲೇ ಆರೋಪಿ ಸ್ಥಾನದಲ್ಲಿರುವ ವಚನಾನಂದ ಸ್ವಾಮೀಜಿಯನ್ನು ಎರಡು ಬಾರಿ ವಿಚಾರಣೆಗೊಳಪಡಿಸಲಾಗಿದೆ. ಪ್ರಕರಣದ ತನಿಖೆ ಚುರುಕೊಂಡಿರುವ ನಡುವೆ ತನಿಖಾಧಿಕಾರಿ ವರ್ಗಾವಣೆಯಾಗಿದೆ. ಹೌದು… ವಚನಾನಂದಶ್ರೀ ವಿರುದ್ಧದ ಪೋಕ್ಸೋ ಕೇಸ್ನ ತನಿಖಾಧಿಕಾರಿಯಾಗಿದ್ದ ಹರಿಹರ ಗ್ರಾಮಾಂತರ ಠಾಣೆ ಪಿಎಸ್ಐ ಮಂಜುಳಾ ಅವರನ್ನ ದಿಢೀರ್ ವರ್ಗಾವಣೆ ಮಾಡಿ ದಾವಣಗೆರೆ (Davanagere) ಎಸ್ಪಿ H.T.ಶೇಖರ್ ಆದೇಶ ಹೊರಡಿಸಿದ್ದಾರೆ.
ಮುಖ್ಯಾಂಶ
ಪ್ರಕರಣದ ತನಿಖೆ ಸರಿಯಾಗಿ ಮಾಡುತ್ತಿಲ್ಲ ಎಂದು ಹರಿಹರ (Harihara) ಪಂಚಮಸಾಲಿ ಪೀಠ ಟ್ರಸ್ಟ್ನ ಪದಾಧಿಕಾರಿಗಳು ಪೂರ್ವ ವಲಯ ಐಜಿಪಿ ಬಿ.ಆರ್.ರವಿಕಾಂತೇಗೌಡ ಅವರಿಗೆ ದೂರು ನೀಡಿದ್ದು, ಈ ದೂರಿನ ಮೇರೆಗೆ ತನಿಖಾಧಿಕಾರಿಯನ್ನು ಬದಲಾವಣೆ ಮಾಡುವಂತೆ ಎಸ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಇದರ ಮೇರೆಗೆ ದಾವಣಗೆರೆ ಎಸ್ಪಿ H.T.ಶೇಖರ್ ಅವರು ಪಿಎಸ್ಐ ಮಂಜುಳಾ ಅವರನ್ನು ವರ್ಗಾವಣೆ ಮಾಡಿದ್ದು, ಇವರ ಜಾಗಕ್ಕೆ ದಾವಣಗೆರೆಯ ಆಜಾದ್ನಗರ ಠಾಣೆಯ ಪಿಎಸ್ಐ ಜಯರತ್ನಮ್ಮ ಅವರನ್ನ ನೇಮಕ ಮಾಡಿ ಆದೇಶ ಹೊಡಿಸಿದ್ದಾರೆ.
ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಪೋಸ್ಕೋ ಪ್ರಕರಣದ ತನಿಖಾಧಿಕಾರಿ ಆಗಿದ್ದ ಎಸ್ ಐ ಮಂಜುಳಾ ಅವರನ್ನ ದಾವಣಗೆರೆ ಅಜಾದ್ ನಗರ ಠಾಣೆಗೆ ವರ್ಗಾವಣೆ ಮಾಡಲಾಗಿದ್ದು, ಇವರ ಸ್ಥಾನಕ್ಕೆ ದಾವಣಗೆರೆ ಅಜಾದ್ ನಗರ ಠಾಣೆ ಎಸ್ ಐ ಜಯರತ್ನಮ್ಮ ಅವರನ್ನ ನೇಮಕ ಮಾಡಲಾಗಿದ್ದು, ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣದ ತನಿಖೆ ಜವಾಬ್ದಾರಿಯನ್ನು ಜಯರತ್ನಮ್ಮ ಅವರಿಗೆ ನೀಡಲಾಗಿದೆ.
ವಚನಾನಂದ ಸ್ವಾಮೀಜಿ ವಿರುದ್ಧ ಮಕ್ಕಳ ಮೇಲಿನ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಇದರ ಬೆನ್ನಲ್ಲೇ ಹರಿಹರ ಗ್ರಾಮಾಂತರ ಠಾಣೆ ಪಿಎಸ್ಐ ಮಂಜುಳಾ ಅವರ ವಚನಾನಂದಶ್ರೀ ವಿರುದ್ಧ ಫೋಕ್ಸೋ ಪ್ರಕರಣ ದಾಖಲಿಸಿದ್ದರು. ಅಲ್ಲದೇ ಪ್ರಕರಣದ ತನಿಖೆ ಸಲುವಾಗಿ ಸ್ವಾಮೀಜಿಯನ್ನು ಹರಿಹರ ಠಾಣೆಗೆ 2 ಸಲ ಕರೆಸಿಕೊಂಡು ವಿಚಾರಣೆ ನಡೆಸಿದ್ದರು. ಇದೀಗ ಹೊಸ ತನಿಖಾಧಿಕಾರಿ ಬಂದಿದ್ದು, ಯಾವ ರೀತಿ ತನಿಖೆ ನಡೆಯುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.
Published On - 7:13 pm, Tue, 19 May 26