AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲಾಟೆ ಪ್ರಕರಣವೊಂದರ ಮಾಹಿತಿ ಕಲೆಹಾಕಿ ಮಗಳ ಮನೆಗೆ ಹೊರಟಿದ್ದ ಎಎಸ್​ಐ ಮಾರ್ಗ ಮಧ್ಯ ದುರಂತ ಅಂತ್ಯ

ಗಲಾಟೆಯೊಂದರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ತನಿಖೆ ಮಾಡಿ ಮಗಳ ನಿವಾಸಕ್ಕೆ ಹೋಗುತ್ತಿದ್ದ ಎಎಸ್​ಐ ಮಾರ್ಗಮಧ್ಯ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಗಲಾಟೆ ಪ್ರಕರಣವೊಂದರ ಮಾಹಿತಿ ಕಲೆಹಾಕಿ ಮಗಳ ಮನೆಗೆ ಹೊರಟಿದ್ದ ಎಎಸ್​ಐ ಮಾರ್ಗ ಮಧ್ಯ ದುರಂತ ಅಂತ್ಯ
ಮೃತ ಎಎಸ್​ಐ ಶಬೀರ್ ಹುಸೇನ್
TV9 Web
| Edited By: |

Updated on: Feb 04, 2023 | 4:55 PM

Share

ದಾವಣಗೆರೆ: ಸಾವು ಹೇಗೆ ಎಲ್ಲಿ ಬರುತ್ತೆ ಅಂತೆಲ್ಲಾ ಊಹೆ ಮಾಡೋಕು ಆಗಲ್ಲ ಎನ್ನುವುದಕ್ಕೆ ಈ ಸುದ್ದಿ ಉದಾಹರಣೆ. ಹೌದು..ಇತ್ತೀಚೆಗೆ ಕೊಟ್ಟೂರು ತರಳುಬಾಳು ಹುಣ್ಣಿಮೆ ಮೆರವಣಿಗೆ ವೇಳೆ ನಡೆದಿದ್ದ ಗಲಾಟೆ ಪ್ರಕರಣದ ಸಂಬಂಧ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿಕೊಂಡು ಮಗಳ ಮನೆಗೆ ಹೊರಟಿದ್ದ ASI ಶಬ್ಬೀರ್ ಹುಸೇನ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಜಗಳೂರು ತಾಲೂಕಿನ ಚಿನ್ನು ಡಾಬಾ ಬಳಿ ಇಂದು(ಫೆಬ್ರವರಿ 04) ಸಂಭವಿಸಿದ ಬೈಕ್​ ಅಪಘಾತದಲ್ಲಿ ಹೊಸಪೇಟೆ ಠಾಣೆಯ ಎಎಸ್​ಐ ಶಬ್ಬೀರ್ ಹುಸೇನ್(59) ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಗಂಡನನ್ನ ಬಿಟ್ಟು ಓಡಿ ಬಂದಿದ್ದ ಮಹಿಳೆ ಪ್ರಿಯಕರನ ಜೊತೆ ದುರಂತ ಅಂತ್ಯಕಂಡಳು: ಮಕ್ಕಳು ಅನಾಥ

ಇತ್ತೀಚೆಗೆ ಅಷ್ಟೇ ಕೊಟ್ಟೂರು ತರಳುಬಾಳು ಹುಣ್ಣಿಮೆ ಮೆರವಣಿಗೆ ವೇಳೆ ಕಲ್ಲು ತೂರಾಟವಾಗಿ ಗಲಾಟೆಯಾಗಿತ್ತು. ಈ ಪ್ರಕರಣ ಸಂಬಂಧ ಹೊಸಪೇಟೆ ಠಾಣೆಯ ಎಎಸ್​ಐ ಶಬ್ಬೀರ್ ಹುಸೇನ್ ಮಾಹಿತಿ ಕಲೆಹಾಕಲು ಸ್ಥಳಕ್ಕೆ ಭೇಟಿ ನೀಡಿದ್ದರು. ಎಲ್ಲಾ ತನಿಖೆ ಮಾಡಿ ಬಳಿಕ ಅಲ್ಲಿಂದ ಚಿತ್ರದುರ್ಗದ ಮಗಳ ನಿವಾಸಕ್ಕೆ ಹೋಗುವಾಗ ಜಗಳೂರು ತಾಲೂಕಿನ ಚಿನ್ನು ಡಾಬಾ ಬಳಿ ಇನ್ನೊಂದು ಬೈಕ್​ ಡಿಕ್ಕಿ ಹೊಡೆದಿದೆ.

ಬೈಕ್ ಡಿಕ್ಕಿ ರಭಸಕ್ಕೆ ತೀವ್ರ ರಕ್ತಸ್ರಾವದಿಂದ ವಿಜಯನಗರ ಜಿಲ್ಲೆ ಹಂಪಿ ನಿವಾಸಿ ಶಬ್ಬೀರ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮತ್ತೊಂದು ಬೈಕ್​ನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಅವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಜಗಳೂರು ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ಸಂತೋಷದಿಂದ ಮಗಳ ನೋಡಲು ಹೊರಟಿದ್ದ ಎಎಸ್​ಐ ವಿಧಿ ಮಸಣಕ್ಕೆ ಕರೆದೊಯ್ದಿದೆ.

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ