ಗಲಾಟೆ ಪ್ರಕರಣವೊಂದರ ಮಾಹಿತಿ ಕಲೆಹಾಕಿ ಮಗಳ ಮನೆಗೆ ಹೊರಟಿದ್ದ ಎಎಸ್​ಐ ಮಾರ್ಗ ಮಧ್ಯ ದುರಂತ ಅಂತ್ಯ

ಗಲಾಟೆಯೊಂದರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ತನಿಖೆ ಮಾಡಿ ಮಗಳ ನಿವಾಸಕ್ಕೆ ಹೋಗುತ್ತಿದ್ದ ಎಎಸ್​ಐ ಮಾರ್ಗಮಧ್ಯ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಗಲಾಟೆ ಪ್ರಕರಣವೊಂದರ ಮಾಹಿತಿ ಕಲೆಹಾಕಿ ಮಗಳ ಮನೆಗೆ ಹೊರಟಿದ್ದ ಎಎಸ್​ಐ ಮಾರ್ಗ ಮಧ್ಯ ದುರಂತ ಅಂತ್ಯ
ಮೃತ ಎಎಸ್​ಐ ಶಬೀರ್ ಹುಸೇನ್
Follow us
| Updated By: ರಮೇಶ್ ಬಿ. ಜವಳಗೇರಾ

Updated on: Feb 04, 2023 | 4:55 PM

ದಾವಣಗೆರೆ: ಸಾವು ಹೇಗೆ ಎಲ್ಲಿ ಬರುತ್ತೆ ಅಂತೆಲ್ಲಾ ಊಹೆ ಮಾಡೋಕು ಆಗಲ್ಲ ಎನ್ನುವುದಕ್ಕೆ ಈ ಸುದ್ದಿ ಉದಾಹರಣೆ. ಹೌದು..ಇತ್ತೀಚೆಗೆ ಕೊಟ್ಟೂರು ತರಳುಬಾಳು ಹುಣ್ಣಿಮೆ ಮೆರವಣಿಗೆ ವೇಳೆ ನಡೆದಿದ್ದ ಗಲಾಟೆ ಪ್ರಕರಣದ ಸಂಬಂಧ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿಕೊಂಡು ಮಗಳ ಮನೆಗೆ ಹೊರಟಿದ್ದ ASI ಶಬ್ಬೀರ್ ಹುಸೇನ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಜಗಳೂರು ತಾಲೂಕಿನ ಚಿನ್ನು ಡಾಬಾ ಬಳಿ ಇಂದು(ಫೆಬ್ರವರಿ 04) ಸಂಭವಿಸಿದ ಬೈಕ್​ ಅಪಘಾತದಲ್ಲಿ ಹೊಸಪೇಟೆ ಠಾಣೆಯ ಎಎಸ್​ಐ ಶಬ್ಬೀರ್ ಹುಸೇನ್(59) ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಗಂಡನನ್ನ ಬಿಟ್ಟು ಓಡಿ ಬಂದಿದ್ದ ಮಹಿಳೆ ಪ್ರಿಯಕರನ ಜೊತೆ ದುರಂತ ಅಂತ್ಯಕಂಡಳು: ಮಕ್ಕಳು ಅನಾಥ

ಇತ್ತೀಚೆಗೆ ಅಷ್ಟೇ ಕೊಟ್ಟೂರು ತರಳುಬಾಳು ಹುಣ್ಣಿಮೆ ಮೆರವಣಿಗೆ ವೇಳೆ ಕಲ್ಲು ತೂರಾಟವಾಗಿ ಗಲಾಟೆಯಾಗಿತ್ತು. ಈ ಪ್ರಕರಣ ಸಂಬಂಧ ಹೊಸಪೇಟೆ ಠಾಣೆಯ ಎಎಸ್​ಐ ಶಬ್ಬೀರ್ ಹುಸೇನ್ ಮಾಹಿತಿ ಕಲೆಹಾಕಲು ಸ್ಥಳಕ್ಕೆ ಭೇಟಿ ನೀಡಿದ್ದರು. ಎಲ್ಲಾ ತನಿಖೆ ಮಾಡಿ ಬಳಿಕ ಅಲ್ಲಿಂದ ಚಿತ್ರದುರ್ಗದ ಮಗಳ ನಿವಾಸಕ್ಕೆ ಹೋಗುವಾಗ ಜಗಳೂರು ತಾಲೂಕಿನ ಚಿನ್ನು ಡಾಬಾ ಬಳಿ ಇನ್ನೊಂದು ಬೈಕ್​ ಡಿಕ್ಕಿ ಹೊಡೆದಿದೆ.

ಬೈಕ್ ಡಿಕ್ಕಿ ರಭಸಕ್ಕೆ ತೀವ್ರ ರಕ್ತಸ್ರಾವದಿಂದ ವಿಜಯನಗರ ಜಿಲ್ಲೆ ಹಂಪಿ ನಿವಾಸಿ ಶಬ್ಬೀರ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮತ್ತೊಂದು ಬೈಕ್​ನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಅವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಜಗಳೂರು ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ಸಂತೋಷದಿಂದ ಮಗಳ ನೋಡಲು ಹೊರಟಿದ್ದ ಎಎಸ್​ಐ ವಿಧಿ ಮಸಣಕ್ಕೆ ಕರೆದೊಯ್ದಿದೆ.

ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ