AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಕಳವಾಗಿರುವ ಮೊಬೈಲ್​ ಪತ್ತೆಹಚ್ಚುವುದು ಹೇಗೆ? ನಿಮ್ಮ ಮೊಬೈಲ್ ಮಿಸ್ ಆಗಿದ್ದರೆ ಈ ಆ್ಯಪ್​ ಮೂಲಕ ನೋಂದಾಯಿಸಿ

ದಾವಣಗೆರೆ ಜಿಲ್ಲೆಯಲ್ಲಿ ಕಳವಾಗಿದ್ದ ಅಥವಾ ಕಳೆದುಹೋಗಿದ್ದ ಸುಮಾರು 25 ಲಕ್ಷ ಮೌಲ್ಯದ 880 ಮೊಬೈಲ್​ಗಳನ್ನು ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗಾದರೆ, ಕಳವಾಗಿರುವ ಅಥವಾ ಮಿಸ್ ಆಗಿರುವ ಮೊಬೈಲ್​ಗಳನ್ನು ಪತ್ತೆಹಚ್ಚುವುದು ಹೇಗೆ? ಆ ಆ್ಯಪ್ ಯಾವುದು? ನಿಮ್ಮ ಮೊಬೈಲ್ ಕಳೆದುಹೋಗಿದ್ದರೆ ಕೂಡಲೇ ಈ ಆ್ಯಪ್ ಮೂಲಕ ನೋಂದಾಯಿಸಿಕೊಳ್ಳಿ.

ದಾವಣಗೆರೆ: ಕಳವಾಗಿರುವ ಮೊಬೈಲ್​ ಪತ್ತೆಹಚ್ಚುವುದು ಹೇಗೆ? ನಿಮ್ಮ ಮೊಬೈಲ್ ಮಿಸ್ ಆಗಿದ್ದರೆ ಈ ಆ್ಯಪ್​ ಮೂಲಕ ನೋಂದಾಯಿಸಿ
ಕಳವಾಗಿರುವ ಅಥವಾ ಕಳೆದು ಹೋಗಿದ್ದ ಮೊಬೈಲ್​ಗಳನ್ನು ದಾವಣಗೆರೆ ಎಸ್​ಪಿ ಉಮಾ ಪ್ರಶಾಂತ ಅವರು ಮಾಲೀಕರಿಗೆ ಹಿಂದಿರುಗಿಸಿದರು
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: Rakesh Nayak Manchi

Updated on: Jan 06, 2024 | 7:19 PM

ದಾವಣಗರೆ, ಜ.6: ಜಿಲ್ಲೆಯಲ್ಲಿ (Davanagere) ಕಳವಾಗಿದ್ದ ಅಥವಾ ಕಳೆದುಹೋಗಿದ್ದ ಸುಮಾರು 25 ಲಕ್ಷ ಮೌಲ್ಯದ 880 ಮೊಬೈಲ್​ಗಳನ್ನು ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಪತ್ತೆಹಚ್ಚಿದ ಮೊಬೈಲ್​ಗಳನ್ನು ಪೊಲೀಸರು ಸಂಬಂಧಪಟ್ಟವರಿಗೆ ಹಿಂದಿರುಗಿಸಿದ್ದಾರೆ. ಹಾಗಾದರೆ, ಕಳವಾಗಿರುವ ಅಥವಾ ಮಿಸ್ ಆಗಿರುವ ಮೊಬೈಲ್​ಗಳನ್ನು ಪತ್ತೆಹಚ್ಚುವುದು ಹೇಗೆ? ಆ ಆ್ಯಪ್ ಯಾವುದು? ನಿಮ್ಮ ಮೊಬೈಲ್ ಕಳೆದುಹೋಗಿದ್ದರೆ ಕೂಡಲೇ ಈ ಆ್ಯಪ್ ಮೂಲಕ ನೋಂದಾಯಿಸಿಕೊಳ್ಳಿ.

ಪೊಲೀಸ್ ಇಲಾಖೆಯ CEIR ಪೋರ್ಟಲ್​ನಲ್ಲಿ ಮೊಬೈಲ್ ಕಳೆದುಕೊಂಡವರು ಮಾಹಿತಿ ದಾಖಲಿಸಿದರೆ ಕಳೆದುಕೊಂಡ ಮೊಬೈಲ್ ಪತ್ತೆ ಮಾಡಲು ಅನುಕೂಲ ಆಗುತ್ತದೆ. ಈ ಬಗ್ಗೆ ಸಾರ್ವಜನಿಕರು ಗಮನ ಹರಿಸಬೇಕು ಎಂದು ಎಸ್​ಪಿ ಉಮಾ ಪ್ರಶಾಂತ ಹೇಳಿದರು.

ಕಳುವಾದ ಅಥವಾ ಕಳೆದು ಹೋದು ಮೊಬೈಲ್​ ಫೋನ್​ಗಳನ್ನು CEIR PORTAL ನಲ್ಲಿ ಮೊಬೈಲ್ ವಾರಸುದಾರರ ವಿವರಗಳನ್ನು ನಮೂದು ಮಾಡಿ ಮೊಬೈಲ್ IMEI ನಂಬರ್ ಅನ್ನು ಬ್ಲಾಕ್​ ಮಾಡಬೇಕು. ನಂತರ ಆ ಮೊಬೈಲ್​ನಲ್ಲಿ ಬೇರೊಂದು ಸಿಮ್ ಹಾಕಿದ ಕೂಡಲೇ ಪೋರ್ಟಲ್​ನಲ್ಲಿ ಲಕೇಶ್ ಸಹಿತ ಮೆಸೇಜ್ ಬರುತ್ತದೆ. ಈ ಮೂಲಕ ಕಳವಾದ ಅಥವಾ ಕಳೆದು ಹೋಗಿರುವ ಮೊಬೈಲ್​ಗಳನ್ನು ಪತ್ತೆಹಚ್ಚಲಾಗುತ್ತದೆ.

ಇದನ್ನೂ ಓದಿ; ದಾವಣಗೆರೆ: ಕಪ್ಪು ಬಣ್ಣಕ್ಕೆ ತಿರುಗಿದ ಸೂಳೆಕೆರೆ ನೀರು?; ಸಂತೇಬೆನ್ನೂರು ಗ್ರಾಮಸ್ಥರ ಆಕ್ರೋಶ

2023 ರಲ್ಲಿ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಕಳುವಾದ ಅಥವಾ ಕಳೆದು ಹೋದ ಮೊಬೈಲ್​ಗಳ ವಿವರಗಳನ್ನು ಮಾಲೀಕರು ಈ ಪೋರ್ಟಲ್​ನಲ್ಲಿ ನೋಂದಾಯಿಸಿ ಮೊಬೈಲ್ ಐಎಂಇಐ ನಂಬರ್ ಮೂಲಕ ಒಟ್ಟು 3880 ಮೊಬೈಲ್​ಗಳನ್ನು ಬ್ಲಾಕ್ ಮಾಡಲಾಗಿದೆ. ಈ ಪೈಕಿ 880 ಮೊಬೈಲ್​ಗಳನ್ನು ಪತ್ತೆಹಚ್ಚಿ ಸಂಬಂಧಪಟ್ಟವರಿಗೆ ಹಿಂದಿರುಗಿಸಲಾಗಿದೆ.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಸ್​ಪಿ ಉಮಾ ಅವರು ಪೊಲೀಸರು ಪತ್ತೆಹಚ್ಚಿರುವ ಮೊಬೈಲ್​ಗಳನ್ನು ಸಂಬಂಧಪಟ್ಟವರಿಗೆ ಹಿಂದಿರುಗಿಸಿರು. ಈ ವೇಳೆ ಸಾರ್ವಜನಿಕರಿಗೆ ಕಳುವಾದ ಅಥವಾ ಕಳೆದು ಹೋದ ಮೊಬೈಲ್ ಫೋನ್​ಗಳನ್ನು ಕೆಎಸ್​ಪಿ ಮೊಬೈಲ್ ಆ್ಯಪ್ ಮೂಲಕ e-lostನಲ್ಲಿ ದೂರು ದಾಖಲಿಸಿ, ದೂರಿನ ಪ್ರತಿಯನ್ನು ಡೌನ್​ಲೋಡ್ ಮಾಡಿಕೊಂಡು CEIR web portal (https://www.ceir.gov.in) ಗೆ ಭೇಟಿ ನೀಡಿ ಕೆಎಸ್​ಪಿ ಮೊಬೈಲ್ ಆ್ಯಪ್​ ಮೂಲಕ ಡೌನ್​ಲೋಡ್ ಮಾಡಿಕೊಂಡ ದೂರಿನ ಪ್ರತಿ, ಆಧಾರ್ ಅಥವಾ ಇತರೆ ಗುರುತಿನ ಚೀಟಿ ಅಪ್​ಲೋಡ್ ಮಾಡಿ ಮೊಬೈಲ್ ಬ್ಲಾಕ್ ಮಾಡುವ ವಿಧಾನವನ್ನು ತಿಳಿಸಲಾಯಿತು.

ಸಾರ್ವಜನಿಕರು ತಮ್ಮ ಮೊಬೈಲ್ ಕಳುವಾಗಿದ್ದಲ್ಲಿ ಅಥವಾ ಸುಲಿಗೆಯಾಗಿದ್ದಲ್ಲಿ ಅಥವಾ ಕಳೆದು ಹೋಗಿದ್ದಲ್ಲಿ ಕೂಡಲೇ CEIR ವೆಬ್​ ಪೋರ್ಟಲ್ ಮೂಲಕ ನೋಂದಾಯಿಸಿ ಹಾಗೂ ಇದರ ಸದುಪಯೋಗ ಮಾಡಿಕೊಳ್ಳುವಂತೆ ಪೊಲೀಸರು ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ