AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಅಡುಗೆ ಮಾಡೋದು ಗೊತ್ತು, ದೇಶ ಸೇವೆಯೂ ಗೊತ್ತು; ಶಾಮನೂರು ಶಿವಶಂಕರಪ್ಪಗೆ ಗಾಯತ್ರಿ ಸಿದ್ದೇಶ್ವರ್ ಟಾಂಗ್​

ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರಗೆ ಜಿಲ್ಲೆ ಬಗ್ಗೆ ಗಂಧಗಾಲಿ ಗೊತ್ತಿಲ್ಲ ಅವರು ಅಡಿಕೆ ಮಾಡಲು ಮಾತ್ರ ಲಾಯಕ್ಕು ಎಂಬ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಗಾಯತ್ರಿ ಸಿದ್ದೇಶ್ವರ್ ತಿರುಗೇಟು ನೀಡಿದ್ದಾರೆ. ನನಗೆ ಅಡುಗೆ ಮಾಡೋದು ಗೊತ್ತು, ದೇಶ ಸೇವೆಯೂ ಗೊತ್ತು ಎಂದು ಟಾಂಗ್ ಕೊಟ್ಟಿದ್ದಾರೆ. ಅಲ್ಲದೆ ಅಡಿಗೆ ಮಾಡಲು ರೆಡಿ ದೇಶ ಸೇವೆಗೂ ರೆಡಿ ಘೋಷಣೆಯೊಂದಿಗೆ ಅಭಿಯಾನ ನಡೆಸಲು ಬಿಜೆಪಿ ಮುಂದಾಗಿದೆ.

ನನಗೆ ಅಡುಗೆ ಮಾಡೋದು ಗೊತ್ತು, ದೇಶ ಸೇವೆಯೂ ಗೊತ್ತು; ಶಾಮನೂರು ಶಿವಶಂಕರಪ್ಪಗೆ ಗಾಯತ್ರಿ ಸಿದ್ದೇಶ್ವರ್ ಟಾಂಗ್​
ಗಾಯತ್ರಿ ಸಿದ್ದೇಶ್ವರ್
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಆಯೇಷಾ ಬಾನು

Updated on: Apr 02, 2024 | 11:57 AM

ದಾವಣಗೆರೆ, ಏಪ್ರಿಲ್.02: ಶಕ್ತಿ ಯೋಜನೆ, ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಇತರೆ ಅನೇಕ ಯೋಜನೆಗಳ ಮೂಲಕ ಕಾಂಗ್ರೆಸ್ ಮಹಿಳೆಯರಿಗೆ ಹೆಚ್ಚಿನ ಆಧ್ಯತೆ ನೀಡುತ್ತಿದೆ. ಆದರೆ ಇತ್ತ ಕಾಂಗ್ರೆಸ್ಸಿನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರು (Shamanur Shivashankarappa) ಬಿಜೆಪಿ ಮಹಿಳಾ ಅಭ್ಯರ್ಥಿ ಬಗ್ಗೆ ಹೇಳಿಕೆ ನೀಡಿ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದ್ದರು. ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರಗೆ (Gayatri Siddeshwara) ಜಿಲ್ಲೆ ಬಗ್ಗೆ ಗಂಧಗಾಲಿ ಗೊತ್ತಿಲ್ಲ ಅವರು ಅಡಿಕೆ ಮಾಡಲು ಮಾತ್ರ ಲಾಯಕ್ಕು ಎಂದು ಹೇಳಿಕೆ ನೀಡಿದ್ದರು. ನನಗೆ ಅಡುಗೆ ಮಾಡೋದು ಗೊತ್ತು, ದೇಶ ಸೇವೆಯೂ ಗೊತ್ತು ಎನ್ನುವ ಮೂಲಕ ಶಾಸಕ ಶಾಮನೂರು ಶಿವಶಂಕರಪ್ಪಗೆ ಗಾಯತ್ರಿ ಸಿದ್ದೇಶ್ವರ್ ಟಾಂಗ್​ ಕೊಟ್ಟಿದ್ದಾರೆ.

ದಾವಣಗೆರೆ ಲೋಕಸಭಾ ಕ್ಷೇತ್ರದ BJP ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರು ದಾವಣಗೆರೆ ನಗರದ ಹಳೇ ದುರ್ಗಾಂಭಿಕಾ ದೇವಸ್ಥಾನ ಹಾಗೂ ಶಿವಾಜಿ ನಗರದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ತಿರುಗೇಟು ನೀಡಿದ್ದಾರೆ. ಶಾಮನೂರು ಶಿವಶಂಕರಪ್ಪನವರು ದೊಡ್ಡವರು, ನನಗೆ ಚುನಾವಣೆಗಳು ಹೊಸದಲ್ಲ. ಕಳೆದ ಮೂವತ್ತು ವರ್ಷಗಳಿಂದ ಚುನಾವಣೆ ಮಾಡುತ್ತಾ ಬಂದಿದ್ದೇನೆ.‌ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಮೋದಿ ‌ಹೆಸರಿನ‌ ಜೊತೆಗೆ ಕಳೆದ 2೦ ವರ್ಷಗಳ ನನ್ನ ಪತಿ‌ ಸಂಸದ ಜಿಎಂ ಸಿದ್ದೇಶ್ವರ ಮಾಡಿದ ಅಭಿವೃದ್ದಿ ನಮ್ಮ ಕೈ ಹಿಡಿಯುತ್ತಿವೆ. ಶಾಮನೂರು ಕುಟುಂಬದ ಬಳಿ ಅಧಿಕಾರ ಇದೆ. ಮತ್ತೆ ಅಧಿಕಾರ ಬೇಡುತ್ತಿದ್ದಾರೆ. ಶಾಮನೂರು ಶಿವಶಂಕರಪ್ಪ ಶಾಸಕರಿದ್ದಾರೆ. ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ಜಿಲ್ಲಾ ಉಸ್ತುವಾರಿ ಸಚಿವ.‌ ಈಗ ಜಿಲ್ಲಾ ಉಸ್ತುವಾರಿ ಸಚಿವನ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ ಕಾಂಗ್ರೆಸ್ ಅಭ್ಯರ್ಥಿ. ಶಾಮನೂರು ಕುಟುಂಬದ ಬಳಿ‌ ಅಧಿಕಾರ ಇದ್ದರೂ ಅವರು ಮತ್ತೆ ಅಧಿಕಾರ ಬೇಡುತ್ತಿದ್ದಾರೆ ಎಂದು ಗಾಯತ್ರಿ ಸಿದ್ದೇಶ್ವರ ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ವಿಧಾನಸಭಾ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಶಿರಹಟ್ಟಿ ಕ್ಷೇತ್ರದ ಟಿಕೆಟ್ ಮಾರಿಕೊಂಡಿದ್ದರು: ರಾಮಣ್ಣ ಲಮಾಣಿ

ಕಾಂಗ್ರೆಸ್ಸಿನ ಹಿರಿಯ ಶಾಸಕ ಹಾಗೂ ಅಖಿತ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಒಂದಿಲ್ಲೊಂದು ಹೇಳಿಕೆಗಳ ಮೂಲಕ ಸುದ್ದಿಯಾಗುತ್ತಿರುತ್ತಾರೆ. ಆದರೆ ಗಾಯತ್ರಿ ಸಿದ್ದೇಶ್ವರಗೆ ಜಿಲ್ಲೆ ಬಗ್ಗೆ ಗಂಧಗಾಲಿ ಗೊತ್ತಿಲ್ಲ, ಅವರು ಅಡಿಕೆ ಮಾಡಲು ಮಾತ್ರ ಲಾಯಕ್ಕು ಎಂದು ದಾವಣಗೆರೆ ಬಂಟರ ಭವನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿತ್ತು. ಈ ಬಗ್ಗೆ ಖ್ಯಾತ ಬ್ಯಾಡ್ಮಿಂಟನ್​ ತಾರೆ ಸೈನಾ ನೆಹ್ವಾಲ್ ಅವರು ತಮ್ಮ ಎಕ್ಸ್​ ಖಾತೆಯಲ್ಲಿ ‘ಸಮಾಜದಲ್ಲಿ ಮಹಿಳೆ ಅಬಲೆ ಅಲ್ಲ ಸಬಲೆ. ಪುರುಷರಂತೆ ಎಲ್ಲಾ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂದು ಕಾಂಗ್ರೆಸ್​ ಅಭಿಯಾನವೊಂದನ್ನು ಆರಂಭಿಸಿತ್ತು. ಆದರೆ ಕರ್ನಾಟಕದ ಹಿರಿಯ ಕಾಂಗ್ರೆಸ್​ ನಾಯಕರೊಬ್ಬರು ಮಹಿಳೆಯರ ಬಗ್ಗೆ ಅತ್ಯಂತ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ. ಇದು ಕಾಂಗ್ರೆಸ್​ನ ನಿಜವಾದ ಮನಸ್ಥಿಯನ್ನು ತೋರಿಸುತ್ತದೆ’ ಎಂದು ಬರೆದು ಖಂಡಿಸಿದ್ದರು. ಇನ್ನು ಬಿಜೆಪಿ ಅಡಿಗೆ ಮಾಡಲು ರೆಡಿ ದೇಶ ಸೇವೆಗೂ ರೆಡಿ ಘೋಷಣೆಯೊಂದಿಗೆ ಅಭಿಯಾನ ಕೂಡ ಆರಂಭ ಮಾಡಲು ಮುಂದಾಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ