AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದರೆ ಸೂಕ್ತ ಕ್ರಮ: ಈಶ್ವರ ಖಂಡ್ರೆ

ಬಗರ್‌ಹುಕುಂ ಸಾಗುವಳಿದಾರರ ಹಿತ ಕಾಪಾಡಲು ಚಿಂತನೆ ನಡೆದಿದೆ. ಕಂದಾಯ, ಅರಣ್ಯ ಇಲಾಖೆಯಿಂದ ಜಂಟಿ ಸಮೀಕ್ಷೆ ನಡೆಸುತ್ತೇವೆ. ಸಮೀಕ್ಷೆ ವರದಿ ಸುಪ್ರೀಂ ಕೋರ್ಟ್​​ ಮುಂದೆ ಇಟ್ಟು ಹಿತ ಕಾಪಾಡುತ್ತೇವೆ. ಅನುಮತಿ ಇಲ್ಲದೆ ವಿಂಡ್‌ ಮಿಲ್ ಫ್ಯಾನ್‌ ಹಾಕಿದರೇ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ

ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದರೆ ಸೂಕ್ತ ಕ್ರಮ: ಈಶ್ವರ ಖಂಡ್ರೆ
ಸಚಿವ ಈಶ್ವರ್ ಖಂಡ್ರೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jun 16, 2023 | 11:09 PM

Share

ದಾವಣಗೆರೆ: ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ (Illegal mining) ನಡೆಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ (Eshwar Khandre) ಹೇಳಿದ್ದಾರೆ. ಬಗರ್‌ಹುಕುಂ ಸಾಗುವಳಿದಾರರ ಹಿತ ಕಾಪಾಡಲು ಚಿಂತನೆ ನಡೆದಿದೆ. ಕಂದಾಯ, ಅರಣ್ಯ ಇಲಾಖೆಯಿಂದ ಜಂಟಿ ಸಮೀಕ್ಷೆ ನಡೆಸುತ್ತೇವೆ. ಸಮೀಕ್ಷೆ ವರದಿ ಸುಪ್ರೀಂ ಕೋರ್ಟ್​​ ಮುಂದೆ ಇಟ್ಟು ಹಿತ ಕಾಪಾಡುತ್ತೇವೆ. ಅನುಮತಿ ಇಲ್ಲದೆ ವಿಂಡ್‌ ಮಿಲ್ ಫ್ಯಾನ್‌ ಹಾಕಿದರೇ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ದಾವಣಗೆರೆಯಲ್ಲಿ ದಾವಣಗೆರೆ ಪ್ರಾದೇಶಿಕ ಅರಣ್ಯ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಶೇ.21ರಷ್ಟುವಿರುವ ಅರಣ್ಯ ಪ್ರದೇಶ ಶೇ.31ರಷ್ಟು ಹೆಚ್ಚಿಸಲು ಯೋಜನೆ ರೂಪಿಸಲಾಗುತ್ತದೆ. ಇದಕ್ಕೆ ಪೂರಕವಾಗಿ 5 ಕೋಟಿ ಸಸಿ ನೆಡುವ ಯೋಜನೆ ಸಿದ್ಧವಿದೆ. ಬರಗ್ ಹುಕುಂ ಬಗ್ಗೆ ಈಗಾಗಲೇ ಕಂದಾಯ ಸಚಿವರು ನಮ್ಮ ಅರಣ್ಯ ಇಲಾಖೆಗೆ ಸುತ್ತೋಲೆ ಕಳುಹಿಸಿದ್ದಾರೆ. ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಂಡ ಬಡವರಿಗೆ ಅನುಕೂಲ ಮಾಡಲಾಗುವುದು. ಇದಕ್ಕಾಗಿ ಕಾಲ‌ಮಿತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬಲವಂತದ ಮತಾಂತರ ನಿಷೇಧ ಕಾಯ್ದೆ ವಾಪಸ್ಸು ಪಡೆಯುವ ವಿಚಾರವಾಗಿ ಮಾತನಾಡಿದ ಅವರು ಬಿಜೆಪಿಯವರು ಜಾತಿ ಜಾತಿಗಳ‌ ನಡುವೆ ಜಗಳ ಹಚ್ಚಿ ಸಮಾಜದ ಶಾಂತಿಗೆ ದಕ್ಕೆ ಬರುವಂತೆ ನಡೆದುಕೊಳ್ಳುತ್ತಿದ್ದನ್ನ ನಾವು ಸರಿ ಮಾಡುತ್ತಿದ್ದೇವೆ. ಈ ಬಗ್ಗೆ ಯಾವುದೇ ವಿರೋಧವಿಲ್ಲ. ಈಗ ಬಿಜೆಪಿಯವರು ನಿರುದ್ಯೋಗಿಗಳಾಗಿದ್ದಾರೆ. ಹೀಗಾಗಿ ಇಲ್ಲ ಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದರು.

ಇದನ್ನೂ ಓದಿ: ಎಂಟಿಬಿ ನಾಗರಾಜ್ ಹೇಳಿಕೆಗೆ ಜಾಮಿಯಾ ಮಸೀದಿ ವತಿಯಿಂದ ಪ್ರತಿಭಟನೆ: ಕ್ಷಮೆ ಕೇಳುವಂತೆ ಮುಸ್ಲಿಂ ಸಮುದಾಯ ಒತ್ತಾಯ

ಇನ್ನು ವಿದ್ಯುತ್ ಬಿಲ್ ಬಿಜೆಪಿಯವರೇ ಹೆಚ್ಚಿಸಿದ್ದು. ರಾಜ್ಯದಲ್ಲಿ ವಿದ್ಯುತ್ ಬಿಲ್ ಹೆಚ್ಚಾದ ಬಗ್ಗೆ ಚರ್ಚೆಗಳು‌ ನಡೆಯತ್ತಿದೆ. ಈ ವಿದ್ಯುತ್​ ಬಿಲ್​ ಅನ್ನು ಹೆಚ್ಚಿಸಿದ್ದು ಬಿಜೆಪಿಯವರೇ. ಆಗಸ್ಟ್ ಒಂದರಿಂದ ನಾವು ಉಚಿತ ವಿದ್ಯುತ್ ಪೂರೈಕೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಕೇಂದ್ರ ರಾಜಕೀಯ ದುರುದ್ದೇಶದಿಂದ ಅಕ್ಕಿ‌ ಪೂರೈಸಲು ನಿರಾಕರಿಸಿದೆ. ರಾಜ್ಯಕ್ಕೆ ಅಕ್ಕಿ ಪೂರೈಕೆ ಮಾಡುವುದಾಗಿ ಕೇಂದ್ರ ಸರ್ಕಾರ ಹೇಳಿತ್ತು. ಕೇಂದ್ರ ಏನೇ ಮಾಡಿದರೂ ಅನ್ನಭಾಗ್ಯ ಯೋಜನೆ ನಿಲ್ಲುವುದಿಲ್ಲ. ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ. 4 ದಿನ ತಡ ಆಗಬಹುದು, ಆದರೆ 10 ಕೆಜಿ ಅಕ್ಕಿ ಕೊಟ್ಟೇ ಕೊಡುತ್ತೇವೆ. ಮುಖ್ಯಮಂತ್ರಿಗಳು, ಸಚಿವರು ವಿವಿಧ ರಾಜ್ಯ ಸರ್ಕಾರಗಳ ಜತೆ ಚರ್ಚಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಲಿಂಗಾಯತರನ್ನು ಓಬಿಸಿ ಪಟ್ಟಿಗೆ ಸೇರಿಸುವ ವಿಚಾರವಾಗಿ ಮಾತನಾಡಿ ಈ ಬಗ್ಗೆ ಹಿಂದೆಯೂ ನಾವು ಸರ್ಕಾರದ ಗಮನಕ್ಕೆ ತಂದಿದ್ದೇವೆ. ಬಹು ದಿನಗಳ ನ್ಯಾಯಯುತ ಬೇಡಿಕೆ ಇದಾಗಿದೆ. ಈಗಿನ ಸರ್ಕಾರಕ್ಕೂ ಮನದಟ್ಟು ಮಾಡುವ ಕೆಲಸ ಮಾಡುತ್ತೇವೆ. ಲಿಂಗಾಯತ ವೀರಶೈವ ಮಹಾಸಭೆಯಿಂದ ಮನವಿ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ