AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ಹಣ ನೀಡದಿದ್ದರೇ ನನ್ನ ಸ್ಥಾನಕ್ಕೆ ರಾಜಿನಾಮೆ ನೀಡುವೆ; ಸರ್ಕಾರಕ್ಕೆ ಕಾಂಗ್ರೆಸ್ ಶಾಸಕ ಎಚ್ಚರಿಕೆ ​

ರೈತರಿಗೆ ನೀಡಬೇಕಿರುವ ಹಣ ನೀಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಜಗಳೂರು ಕಾಂಗ್ರೆಸ್ ಶಾಸಕ ದೇವೇಂದ್ರಪ್ಪ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರೈತರಿಗೆ ಹಣ ನೀಡದಿದ್ದರೇ ನನ್ನ ಸ್ಥಾನಕ್ಕೆ ರಾಜಿನಾಮೆ ನೀಡುವೆ; ಸರ್ಕಾರಕ್ಕೆ ಕಾಂಗ್ರೆಸ್ ಶಾಸಕ ಎಚ್ಚರಿಕೆ ​
ಶಾಸಕ ದೇವೇಂದ್ರಪ್ಪ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Nov 18, 2023 | 11:42 AM

Share

ದಾವಣಗೆರೆ ನ.18: ರೈತರಿಗೆ ನೀಡಬೇಕಿರುವ ಹಣ ಬಿಡುಗಡೆ ಮಾಡದಿದ್ದರೇ ಶಾಸಕ (MLA) ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಜಗಳೂರು ಕಾಂಗ್ರೆಸ್ ಶಾಸಕ ದೇವೇಂದ್ರಪ್ಪ (Devendrappa) ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಖರೀದಿಸಿದ ರಾಗಿಗೆ ಹಣ ನೀಡದ ಸರ್ಕಾರದ ವಿರುದ್ಧ ರೈತರು ಬಗಿಲೆದ್ದಿದ್ದು, ಜಗಳೂರು ಪಟ್ಟಣದಲ್ಲಿನ ಆಹಾರ ಇಲಾಖೆಯ ಗೋದಾಮಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ರೈತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಾಸಕ ದೇವೇಂದ್ರಪ್ಪ, ಆಹಾರ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಕರೆ ಮಾಡಿ ವಾರದೊಳಗೆ ರೈತರಿಗೆ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಸರ್ಕಾರ ರೈತರಿಂದ ರಾಗಿ ಖರೀದಿಸಿ 1 ವರ್ಷವಾಗಿದ್ದು, ನೀಡಬೇಕಿರುವ 5 ಕೋಟಿ ರೂ. ಬಾಕಿ ಹಣವನ್ನು ಬಿಡುಗಡೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಜಗಳೂರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಶಾಸಕ ಯಶವಂತರಾಯ ಎಚ್ಚರಿಕೆ

ಇದೇ ರೀತಿಯಾಗಿ ಈ ಹಿಂದೆ  ವಿಜಯಪುರ ಜಿಲ್ಲೆಯಲ್ಲಿ ಭೀಕರ ಬರ ಇದ್ದರೂ ಇಂಡಿ ಕ್ಷೇತ್ರದ ಕಟ್ಟ ಕಡೆಯ ಹಳ್ಳಿಗಳಿಗೆ ಕಾಲುವೆ ನೀರು ಬಾರದ ಹಿನ್ನೆಲೆಯಲ್ಲಿ ಇಂಡಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಯಶವಂತರಾಯ ಗೌಡ ಸಿಡಿದೆದ್ದಿದ್ದರು. ನನ್ನ ಕ್ಷೇತ್ರಕ್ಕೆ ನೀರು ಬಿಡದಿದ್ದರೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡೋದಾಗಿ ಎಚ್ಚರಿಕೆ ನೀಡಿದ್ದರು. ಈ ಮೂಲಕ ಜಿಲ್ಲಾಡಳಿತದ ವಿರುದ್ಧ ರೊಚ್ಚಿಗೆದ್ದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:42 am, Sat, 18 November 23

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ