AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರಾ ಡ್ಯಾಂ ನಿಂದ ತುಂಗಭದ್ರಾಗೆ ನೀರು ಬಿಟ್ಟರೆ ದಾವಣಗೆರೆ ಶಿವಮೊಗ್ಗದಲ್ಲಿ ಬಿಜೆಪಿ ಸರ್ವನಾಶ; ರೈತರ ಎಚ್ಚರಿಕೆ

ಭದ್ರಾ ಡ್ಯಾಂ ನಿಂದ ತುಂಗಭದ್ರಾ ಡ್ಯಾಂಗೆ ನೀರು ಬಿಟ್ಟರೇ, ದಾವಣಗೆರೆ ಮತ್ತು ಶಿವಮೊಗ್ಗ ಭಾಗದ ಜನ ದಂಗೆ ಎಳಲಿದ್ದು, ಜಿಲ್ಲೆಯಲ್ಲಿ ಬಿಜೆಪಿ ಸರ್ವನಾಶ ಆಗುತ್ತದೆ ಎಂದು ದಾವಣಗೆರೆಯಲ್ಲಿ ರೈತರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಭದ್ರಾ ಡ್ಯಾಂ ನಿಂದ ತುಂಗಭದ್ರಾಗೆ ನೀರು ಬಿಟ್ಟರೆ ದಾವಣಗೆರೆ ಶಿವಮೊಗ್ಗದಲ್ಲಿ ಬಿಜೆಪಿ ಸರ್ವನಾಶ; ರೈತರ ಎಚ್ಚರಿಕೆ
ಭದ್ರಾ ಡ್ಯಾಂ
TV9 Web
| Edited By: |

Updated on: Feb 25, 2023 | 3:06 PM

Share

ದಾವಣಗೆರೆ: ಭದ್ರಾ ಡ್ಯಾಂ ನಿಂದ ತುಂಗಭದ್ರಾ ಡ್ಯಾಂಗೆ ನೀರು ಬಿಟ್ಟರೆ, ದಾವಣಗೆರೆ ಮತ್ತು ಶಿವಮೊಗ್ಗ ಭಾಗದ ಜನರು ದಂಗೆ ಎಳಲಿದ್ದು, ಜಿಲ್ಲೆಯಲ್ಲಿ ಬಿಜೆಪಿ ಸರ್ವನಾಶ ಆಗುತ್ತದೆ ಎಂದು ದಾವಣಗೆರೆಯಲ್ಲಿ ರೈತರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಶಿವಮೊಗ್ಗದ ಭದ್ರಾ ಡ್ಯಾಂನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ‌ ನೀರು ಇಲ್ಲ, ಬೇಸಿಗೆ ಬೆಳೆಗೆ ನೀರು ಬೇಕು. ಇಂತಹ ಪರಿಸ್ಥಿತಿಯಲ್ಲಿ ಸಿಎಂ ಚುನಾವಣೆಯ ರಾಜಕೀಯ ಲಾಭ ‌ಪಡೆಯಲು ಹುನ್ನಾರ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ತುಂಗಭದ್ರ ಡ್ಯಾಂಗೆ 7 ಟಿಎಂಸಿ ನೀರು ಬಿಡುವುದು ಸಾದ್ಯವಿಲ್ಲ ಎಂದಿದ್ದಾರೆ.

ಹಾಲಿ ಭದ್ರಾ ಡ್ಯಾಂನಲ್ಲಿ 57.491 ಟಿಎಂಸಿ ನೀರಿದೆ. ಇದರಲ್ಲಿ 13.832 ಟಿಎಂಸಿ ನೀರು ಡೆಡ್ ಸ್ಟೋರೇಜ್. ಡ್ಯಾಂ ನಲ್ಲಿ 4.18 ಟಿಎಂಸಿಯಷ್ಟು ಹೂಳು ತುಂಬಿಕೊಂಡಿದೆ. ಉಳಿದ ನೀರಿನ ಪ್ರಮಾಣ 39.479 ಟಿಎಂಸಿ ನೀರು. ಬೇಸಿಗೆ ಹಂಗಾಮಿಗೆ 1.07 ಲಕ್ಷ ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ಒಂದು ನೂರು ದಿನ ನೀರು ಕೊಡಬೇಕು. ಇದಕ್ಕೆ 42.172 ಟಿಎಂಸಿ ನೀರು ಬೇಕು. ನಮಗೆ ಎರಡು ಟಿಎಂಸಿ ನೀರಿನ ಕೊರತೆ ಆಗಲಿದೆ‌. ತುಂಗಭದ್ರಾ ಡ್ಯಾಂಗೆ ನೀರು ಬಿಟ್ಟರೇ ರೈತರ ದಂಗೆ ಆಗುತ್ತದೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:ದಾವಣಗೆರೆ: ಇದ್ದಕ್ಕಿದ್ದಂತೆ ಶೇ 100ರ ರಷ್ಟು ಹೆಚ್ಚಾದ ಟೋಲ್ ದರ, ಸವಾರರು ಗರಂ

ಈ ಹಿಂದೆ ಕೂಡ ಅನೇಕ ಬಾರಿ ಕೃಷಿಗಾಗಿ ತುಂಗಭದ್ರಾ ಜಲಾಶಯಕ್ಕೆ ಆರು ಟಿಎಂಸಿ ಮತ್ತು ಕುಡಿಯುವ ನೀರಿಗಾಗಿ ಭದ್ರಾ ಮೇಲ್ದಂಡೆ ಯೋಜನೆಗೆ ಭದ್ರಾ ಜಲಾಶಯದಿಂದ ನೀರು ಕೇಳಿತ್ತು, ಸರಕಾರ ಒಂದು ಹನಿ ನೀರನ್ನು ನಮ್ಮ ಡ್ಯಾಂನಿಂದ ಹರಿಸಬಾರದು ಎಂದು ಭದ್ರಾ ಜಲಾಶಯ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಳಿ ಮತ್ತು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿತ್ತು. ಇದೀಗ ಮತ್ತೆ ತುಂಗಭದ್ರ ಡ್ಯಾಂಗೆ ಎಳು ಟಿಎಂಸಿ ನೀರು ಬಿಡುವಂತೆ ಆಗ್ರಹಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ