AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತನ ಕಣ್ಣಲ್ಲಿ ನೀರು ತರಿಸಿದ ಈರುಳ್ಳಿ; ಖಾಸಗಿ ಕಂಪನಿಯ ಔಷಧಿ ಸಿಂಪಡಿಸಿ ಬೆಳೆ ಕಳೆದುಕೊಂಡ ಅನ್ನದಾತ

ರೈತನೊಬ್ಬ ತನಿಗಿದ್ದ ಒಂದುವರೆ ಎಕರೆ ಜಮೀನಿನಲ್ಲಿ ಈರುಳ್ಳಿ ಬೆಳೆ ಬೆಳೆದಿದ್ದು, ಲಕ್ಷಾಂತರ ರೂಪಾಯಿ ಲಾಭದ ನಿರೀಕ್ಷೆಯಲ್ಲಿದ್ದ. ಇನ್ನೆರಡು ವಾರ ಕಳೆದಿದ್ದರೆ ಈರುಳ್ಳಿ ಕಟಾವು ಮಾಡಿ ಮಾರ್ಕೆಟ್​ಗೆ ತೆಗೆದುಕೊಂಡು ಹೋಗಬೇಕಿದ್ದ ರೈತನಿಗೆ ಇದೀಗ ಶಾಕ್ ಕಾದಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ರೈತನಿಗೆ ಬಂದ ಸಂಕಷ್ಟ ಏನು ಅಂತೀರಾ? ಈ ಸ್ಟೋರಿ ಓದಿ.

ರೈತನ ಕಣ್ಣಲ್ಲಿ ನೀರು ತರಿಸಿದ ಈರುಳ್ಳಿ; ಖಾಸಗಿ ಕಂಪನಿಯ ಔಷಧಿ ಸಿಂಪಡಿಸಿ ಬೆಳೆ ಕಳೆದುಕೊಂಡ ಅನ್ನದಾತ
ಖಾಸಗಿ ಕಂಪನಿಯ ಔಷಧಿ ಸಿಂಪಡಿಸಿ ಈರುಳ್ಳಿ ಬೆಳೆ ಕಳೆದುಕೊಂಡ ಅನ್ನದಾತ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 24, 2024 | 10:10 PM

Share

ದಾವಣಗೆರೆ, ಆ.24: ಜಿಲ್ಲೆಯ ಜಗಳೂರು(Jagaluru) ತಾಲೂಕಿನ ಅಸಗೋಡು ಗ್ರಾಮದ ಬೀರಲಿಂಗೇಶ್ ಎಂಬ ರೈತ, ತನಗಿದ್ದ ಒಂದುವರೆ ಎಕೆರೆ ಜಮೀನಿನಲ್ಲಿ ಈರುಳ್ಳಿ ಬೆಳೆ(Onion crop)ಬೆಳೆದಿದ್ದ. ಬೆಳೆ ಕೂಡ ಉತ್ತಮವಾಗಿ ಬೆಳೆದಿತ್ತು. ಆದರೆ, ಕಳೆದ ನಾಲ್ಕೈದು ದಿನಗಳ ಹಿಂದೆ ಬೀರಲಿಂಗೇಶ್ ತನ್ನ ಜಮೀನಿನಲ್ಲಿ ಬೆಳೆದಿದ್ದ ಈರುಳ್ಳಿ ಬೆಳೆಗೆ ಔಷಧಿ ಸಿಂಪಡಣೆ ಮಾಡಿದ್ದ. ಇದೀಗ ಈರುಳ್ಳಿ ಬೆಳೆ ನೆಲ ಕಚ್ಚಿದ್ದು, ಆಕಾಶ ತಲೆ ಮೇಲೆ ಬಿದ್ದಂತಾಗಿದೆ.

ಕೊಳೆಯುತ್ತಿರೋ ಈರುಳ್ಳಿ

ಆರಂಭದಲ್ಲಿ ಬಿಸಿಲಿಗೆ ಈ ರೀತಿ ಆಗಿರಬಹುದು ಎಂದುಕೊಂಡಿದ್ದ ಬೀರಲಿಂಗೇಶ್, ತದ ನಂತರ ಮಳೆ ಆದರೂ ಬೆಳೆ ಚೇತರಿಸಿಕೊಳ್ಳದೇ ಇರುವುದನ್ನ ನೋಡಿ ಸಂಶಯ ಬಂದು ಈರುಳ್ಳಿ ಸಸಿ ಕಿತ್ತು ನೋಡಿದಾಗ, ಅವನಿಗೆ ಆಘಾತವಾಗಿದೆ. ಏಕೆಂದರೆ ಈರುಳ್ಳಿ ಕೊಳೆಯಲು ಆರಂಭವಾಗಿದೆ. ಔಷಧಿ ಸಿಂಪಡಣೆಯಿಂದ ಎಡವಟ್ಟು ಆಗಿದೆ ಎಂದು ಆತ ತಕ್ಷಣ ಔಷಧೀ ಖರೀದಿ ಮಾಡಿದ ಅಂಗಡಿಯವನ ಬಳಿ ಹೋಗಿದ್ದಾನೆ. ಅಂಗಡಿಯವನು ಇದಕ್ಕೂ ನನಗೆ ಸಂಬಂಧ ಇಲ್ಲ, ನೇರವಾಗಿ ಕಂಪನಿಯವರ ಜೊತೆ ಮಾತನಾಡಿ ಎಂದು ಕಂಪನಿಯವರ ಕಡೆ ಕೈ ತೋರಿಸಿದ್ದಾನೆ.

ಇದನ್ನೂ ಓದಿ:ಸಿಟಿ ಜನರ ದೇಹ ಸೇರುತ್ತಿದೆ ಸ್ಲೋ ಪಾಯಿಸನ್; ರಾಜಕಾಲುವೆ ನೀರಲ್ಲಿ ಬೆಳೆಯಲಾಗುತ್ತಿದೆ ಸೊಪ್ಪು, ತರಕಾರಿ

ಸೂಕ್ತ ಪರಿಹಾರಕ್ಕೆ ಮನವಿ

ಮೂರು ತಿಂಗಳ ಹಿಂದೆ ರೈತ ಈರುಳ್ಳಿ ನಾಟಿ ಮಾಡಿದ್ದು, ಅಲ್ಲಿಂದ ಇಲ್ಲಿಯವರೆಗೂ 1 ಲಕ್ಷದ ವರೆಗೆ ವೆಚ್ಚವಾಗಿದೆ. ಅಲ್ಲದೆ ಇನ್ನೆರಡು ವಾರದಲ್ಲಿ ಈರುಳ್ಳಿ ಕಟಾವು ಮಾಡಿ ಮಾರಾಟ ಮಾಡಿದ್ದರೇ 8 ರಿಂದ 10 ಲಕ್ಷ ಆದಾಯ ಬರುತ್ತಿತ್ತು. ಆದರೆ, ಇದೀಗ ನಮಗೆ ಸಾಕಷ್ಟು ತೊಂದರೆ ಆಗಿದೆ. ಇದನ್ನೇ ನಂಬಿ ಸಾಲ ಮಾಡಿದ್ದು, ಈಗ ಅದನ್ನು ತಿರಿಸುವುದು ಹೇಗೆ ಎಂಬ ಆತಂಕ ವ್ಯಕ್ತಪಡಿಸಿದ್ದಾನೆ. ಖಾಸಗಿ ಕಂಪನಿಯ ಔಷಧಿ ಸಿಂಪಡಿಸಿದ ಪರಿಣಾಮ ಈರುಳ್ಳಿ ಬೆಳೆ ಹಾಳಾಗಿದ್ದು, ಕಂಪನಿಯವರು ಸೂಕ್ತ ಪರಿಹಾರ ನೀಡುವಂತೆ ರೈತ ಬೀರಲಿಂಗೇಶ್ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಒಟ್ಟಿನಲ್ಲಿ ಸಾಲಸೋಲ ಮಾಡಿ ಬೆಳೆದ ಬೆಳೆ ಇದೀಗ ಹಾಳಾಗಿದ್ದು ಕೂಡಲೇ ಸಂಬಂದಪಟ್ಟ ಅಧಿಕಾರಿಗಳು ಈ ರೈತನ ಕುಟುಂಬಕ್ಕೆ ಆಗಿರುವ ತೊಂದರೆಗೆ ಸ್ಪಂಧಿಸುವ ಮೂಲಕ ನೊಂದ ರೈತ ಕುಟುಂಬದ ನೆರವಿಗೆ ಬರುತ್ತಾರಾ ಎಂಬುದನ್ನು ಕಾದು ನೋಡ ಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!