Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲೊಂದು ಅಮಾನುಷ ಕೃತ್ಯ: ಮರಕ್ಕೆ ಕಟ್ಟಿ ಗುಪ್ತಾಂಗಕ್ಕೆ ಇರುವೆ ಬಿಟ್ಟು ಚಿತ್ರಹಿಂಸೆ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ಹಕ್ಕಿಪಿಕ್ಕಿ ಬಾಲಕರ ಮೇಲೆ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. ಕಳ್ಳತನದ ಆರೋಪದ ಮೇಲೆ ಇಬ್ಬರು ಬಾಲಕರಿಗೆ ಅಮಾನವೀಯವಾಗಿ ಚಿತ್ರಹಿಂಸೆ ನೀಡಲಾಗಿದೆ. ಘಟನೆಯ ವಿಡಿಯೋ ಕೂಡ ವೈರಲ್ ಆಗಿದೆ. ಸದ್ಯ ಒಂಬತ್ತು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಒಬ್ಬನ್ನು ವಶಕ್ಕೆ ಪಡೆಯಲಾಗಿದೆ.

ದಾವಣಗೆರೆಯಲ್ಲೊಂದು ಅಮಾನುಷ ಕೃತ್ಯ: ಮರಕ್ಕೆ ಕಟ್ಟಿ ಗುಪ್ತಾಂಗಕ್ಕೆ ಇರುವೆ ಬಿಟ್ಟು ಚಿತ್ರಹಿಂಸೆ
ಮರಕ್ಕೆ ಕಟ್ಟಿ ಹಾಕಿ ಚಿತ್ರಹಿಂಸೆ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಗಂಗಾಧರ​ ಬ. ಸಾಬೋಜಿ

Updated on:Apr 06, 2025 | 10:44 AM

ದಾವಣಗೆರೆ, ಏಪ್ರಿಲ್​ 06: ಕಳ್ಳತನ ಸೇರಿದಂತೆ ಅಸಭ್ಯ ವರ್ತನೆ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕರನ್ನು (boys) ಅಡಿಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿದ್ದು, ಜೊತೆಗೆ ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯ ಚನ್ನಗಿರಿ (Channagiri) ತಾಲೂಕಿನ ನಲ್ಲೂರ ಬಳಿ ಇರುವ ಅಸ್ತಾಪನಹಳ್ಳಿಯಲ್ಲಿ ಏಪ್ರಿಲ್​ 4ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಚಿತ್ರಹಿಂಸೆ ನೀಡಿರುವ ವಿಡಿಯೋ ಕೂಡ ವೈರಲ್ ಆಗಿದೆ. ಇತ್ತ ಟಿವಿ9 ಸುದ್ದಿ ಪ್ರಸಾರ ಮಾಡುತ್ತಿದ್ದಂತೆ ಎಚ್ಚೆತ್ತ ಪೊಲೀಸರು 9 ಜನರ ವಿರುದ್ಧ ಎಫ್​ಐಆರ್​ ದಾಖಲಿಸಿದ್ದು, ಸುಭಾಷ್​ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.

ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಹಕ್ಕಿ- ಪಿಕ್ಕಿ ಜನಾಂಗದ ಬಾಲಕರ ಮೇಲೆ ಅದೇ ಜನಾಂಗದ ಹತ್ತು ಯುವಕರಿಂದ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡಿದ ಹತ್ತು ಜನರ ಪೈಕಿ ನಾಲ್ವರು ಅಪ್ರಾಪ್ತರು. ಸುಭಾಷ್ (23), ಲಕ್ಕಿ(21), ದರ್ಶನ್ (22), ಪರಶು (25), ಶಿವದರ್ಶನ್ (23), ಹರೀಶ್ (25), ಪಟ್ಟಿ ರಾಜು(20), ಭೂಣಿ (18), ಸುಧನ್ ಅಲಿಯಾಸ್ ಮಧುಸೂಧನ್ ವಿರುದ್ದ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಸಾಲ ಕೊಡದ ಸಿಟ್ಟಿಗೆ 17 kg ಚಿನ್ನ ಕದ್ದರು: ಬ್ಯಾಂಕ್ ದರೋಡೆ ಮಾಡಲೆಂದೇ ಆ ವೆಬ್​ ಸಿರೀಸ್ ನೋಡಿದ್ದ ಸಹೋದರರು

ಇದನ್ನೂ ಓದಿ
Image
ಒಂದು ಕಿಸ್​ಗೆ 50 ಸಾವಿರ! ಲಕ್ಷ ರೂ. ಸುಲಿಗೆ: ಟೀಚರ್ ಹಾಗೂ ಗ್ಯಾಂಗ್ ಬಂಧನ
Image
ರನ್ಯಾ ಪ್ರಕರಣ: ಡಿಜಿಟಲ್ ಸಾಕ್ಷಿಯಲ್ಲಿ ಸ್ಮಗ್ಲಿಂಗ್ ರಹಸ್ಯ ಬಯಲು
Image
ರನ್ಯಾ ಪೊಲೀಸ್​ ಪ್ರೋಟೋಕಾಲ್​ ಬಳಸುತ್ತಿದ್ದು DGP ರಾಮಚಂದ್ರಗೆ ಗೊತ್ತಿತ್ತಾ?
Image
ಪತ್ನಿ ಕೊಂದು ಟ್ರ್ಯಾಲಿ ಬ್ಯಾಗ್‌ಗೆ ತುಂಬಿದ್ದ ಗಂಡ: 14 ದಿನ ನ್ಯಾಯಾಂಗ ಬಂಧನ

ಗಿಡ ಮೂಲಿಕೆ ಮಾರಾಟ ಮಾಡಿ ಹಕ್ಕಿ ಪಿಕ್ಕಿ ಜನಾಂಗದ ಜನ ಜೀವನ ನಡೆಸುತ್ತಾರೆ. ಇದು ಕೆಲ ತಿಂಗಳ ಹಿಂದೆ ನಡೆದ ಘಟನೆ ಎನ್ನಲಾಗಿದ್ದು, ಇದೀಗ ವಿಡಿಯೋ ವೈರಲ್ ಆಗಿರುವ ಸಾದ್ಯತೆ ಎಂಬುದು ಸ್ಥಳೀಯರ ಮಾತಾಗಿದೆ.

ಅಸ್ತಾಪನಹಳ್ಳಿ ಗ್ರಾಮದ ದರ್ಶನ ಎಂಬುವರ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿ ಪರಾರಿಯಾಗಿದ್ದ. ಬಳಿಕ ಬಾಲಕನನ್ನು ಹಿಡಿದು ಅಡಕೆ ತೋಟಕ್ಕೆ ಕರೆದೊಯ್ದು ಹಲ್ಲೆ‌ ಮಾಡಲಾಗಿದೆ. ಕಳ್ಳತನಕ್ಕೆ ಸಹಕರಿಸಿದ್ದ ಇನ್ನೊಬ್ಬ ಬಾಲಕನಿಗೂ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಹಲ್ಲೆಗೊಳಗಾದ ಬಾಲಕನ ತಾತನಿಂದ ಚನ್ನಗಿರಿ ಪೊಲೀಸರಿಗೆ ದೂರು ನೀಡಿದ್ದರು. ಸದ್ಯ 9 ಯುವಕರ ವಿರುದ್ಧ FIR ದಾಖಲಾಗಿದೆ.

ಲೋನ್ ರಿಕವರಿಗೆ ಹೋದ ಬ್ಯಾಂಕ್​ ಸಿಬ್ಬಂದಿ ಮೇಲೆ ಯುವಕನಿಂದ ಹಲ್ಲೆ ಆರೋಪ

ಲೋನ್ ರಿಕವರಿಗೆಂದು ಹೋಗಿದ್ದ ಬ್ಯಾಂಕ್ ಸಿಬ್ಬಂದಿಗೆ ಓರ್ವ ಯುವಕ ಅವಾಜ್ ಹಾಕಿ ಹಲ್ಲೆ ಮಾಡಿರುವ  ಆರೋಪ ಕೇಳಿಬಂದಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚಂದನ್ ಎಂಬಾತನ ಮೇಲೆ ರಕ್ತ ಬರುವ ಹಾಗೆ ಯುವಕ ಹಲ್ಲೆ ಮಾಡಿದ್ದಾನೆ. ಸದ್ಯ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: ಗಾಳಿ ಆಂಜನೇಯ ಜಾತ್ರೆ: ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ, ಪರ್ಯಾಯ ಮಾರ್ಗಗಳು ಹೀಗಿವೆ

ರಮೇಶ್ ಎರಡು ತಿಂಗಳಿಂದ ಬೈಕ್ ಲೋನ್ ಕಟ್ಟದ ಹಿನ್ನಲೆ, ಬ್ಯಾಂಕ್ ಸಿಬ್ಬಂದಿ ಚಂದನ್ ಕರೆ ಮಾಡಿ ಲೋನ್ ಕಟ್ಟುವಂತೆ ತಿಳಿಸಿದ್ದಾರೆ. ನಾಗರಭಾವಿ ಬಿಡಿಎ ಕಾಂಪ್ಲೆಕ್ಸ್ ಬಳಿ ಲೋನ್ ಹಣ ಕೊಡುತ್ತೇನೆಂದು ಹೇಳಿದ್ದ ರಮೇಶ್, ಸ್ಥಳಕ್ಕೆ ಹೋಗಿದ್ದ ಬ್ಯಾಂಕ್ ಸಿಬ್ಬಂದಿ ಚಂದನ್​ಗೆ ಅವಾಚ್ಯ ಪದಗಳಿಂದ ನಿಂದಿಸಿ ಕಲ್ಲಿನಿಂದ ಹಲ್ಲೆ‌ ಮಾಡಿರುವ ಆರೋಪ ಮಾಡಲಾಗಿದೆ. ರಕ್ತಸ್ರಾವದಿಂದ ಆಸ್ಪತ್ರೆ ಸೇರಿದ್ದ ಚಂದನ್, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:34 am, Sun, 6 April 25

ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ